ಕೋಲ್ಕತ್ತಾ: ಶಿಕ್ಷಕರು ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅಲ್ಲದೇ ಈ ಮೂಲಕ ಆಯ್ಕೆ ಮಾಡಲಾದ 25,753 ಶಿಕ್ಷಕರ ಹುದ್ದೆಯನ್ನು ವಜಾಗೊಳಿಸುವಂತೆ ಆದೇಶಿಸಿತು.
ಈ ವಿಚಾರರಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ, 26,000 ಶಿಕ್ಷಕರನ್ನ ವಜಾಗೊಳಿಸಿದ್ದು, ಚುನಾವಣಾ ತಂತ್ರಗಾರಿಕೆಯ ಭಾಗ. ಪಶ್ಮಿಮ ಬಂಗಾಳದಲ್ಲಿ ಈ ಬಾರಿ ಶಿಕ್ಷಕರು ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದಲೂ ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪಕ್ಷಗಳಿಗೆ ಒಂದೇ ಒಂದು ವೋಟು ಬೀಳಲ್ಲ.
ಬಿಜೆಪಿ ನ್ಯಾಯಾಲಯವನ್ನು ಖರೀದಿಸಿದೆ. ಆದರೆ ನನಗೆ ಸುಪ್ರೀಂ ಕೋರ್ಟ್ನಿಂದ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ವಿದೆ ಎಂದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
.