Bengaluru 22°C
Ad

ಶ್ರೇಯಸ್‌ ಗೆಲುವಿನ ಆಚರಣೆಯಲ್ಲಿ ಜೆಡಿಎಸ್ ಬಾವುಟ : ಇಬ್ಬರು ಪೊಲೀಸ್ ವಶಕ್ಕೆ

ಲೋಕಸಭಾ ಚುನಾವಣೆಯ ಫಲಿತಾಂಶ ಇಂದು(ಜೂ.04) ಬಂದಿದ್ದು, ಹಾಸನ ಕಾಂಗ್ರೆಸ್​ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಅವರು ಪ್ರಜ್ವಲ್​ ರೇವಣ್ಣ ಅವರನ್ನು ಹೆಚ್ಚಿನ ಅಂತರದಿಂದ ಸೋಲಿಸಿ ಜಯಭೇರಿ ಬಾರಿಸಿದ್ದಾರೆ.

ಹಾಸನ : ಲೋಕಸಭಾ ಚುನಾವಣೆಯ ಫಲಿತಾಂಶ ಇಂದು(ಜೂ.04) ಬಂದಿದ್ದು, ಹಾಸನ ಕಾಂಗ್ರೆಸ್​ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಅವರು ಪ್ರಜ್ವಲ್​ ರೇವಣ್ಣ ಅವರನ್ನು ಹೆಚ್ಚಿನ ಅಂತರದಿಂದ ಸೋಲಿಸಿ ಜಯಭೇರಿ ಬಾರಿಸಿದ್ದಾರೆ.

Ad
300x250 2

ಗೆಲುವಿನ ಬಳಿಕ ಶ್ರೇಯಸ್‌ ಪಟೇಲ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಶ್ರೇಯಸ್‌ ಪಟೇಲ್‌ಗೆ ಭರ್ಜರಿ ಸ್ವಾಗತ ಕೋರಿದರು. ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ, ಹೂವಿನ ಹಾರ ಹಾಕಿ ಅವರನ್ನು ಬರಮಾಡಿಕೊಂಡರು. ಬಳಿಕ ಶ್ರೇಯಸ್‌ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಜೆಡಿಎಸ್ ಬಾವುಟ ಹಿಡಿದು ಬೈಕ್‌ನಲ್ಲಿ ಬಂದ ಇಬ್ಬರು ಕಾಂಗ್ರೆಸ್ ನಡುವೆ ನಡುವೆ ಜೆಡಿಎಸ್‌ ಬಾವುಟ ಪ್ರದರ್ಶನ ಮಾಡಿದರು. ಕೂಡಲೇ ಆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದರು.

Ad
Ad
Nk Channel Final 21 09 2023
Ad