ಕೊಪ್ಪಳ: ಕಾರಿನ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿರುವ ಘಟನೆ ಕೊಪ್ಪಳದ ಬಸಾಪುರ ದಿಬ್ಬ ಬೈಪಾಸ್ ಹೆದ್ದಾರಿ 67ರಲ್ಲಿ ನಡೆದಿದೆ. ಕಾರು ಕೊಪ್ಪಳ ಕಡೆಯಿಂದ ಹೊಸಪೇಟೆ ಕಡೆಗೆ ಹೊರಟಿತ್ತು. ಈ ವೇಳೆ ಟೈರ್ ಬ್ಲಾಸ್ಟ್ ಆಗಿದೆ.
ಪರಿಣಾಮ ಚಾಲಕನ ಕಂಟ್ರೋಲ್ ತಪ್ಪಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಪಲ್ಟಿ ಹೊಡೆದ ಕಾರು ಕೊಪ್ಪಳ ನಿವಾಸಿ ಉಮರ್ ಎನ್ನುವವರಿಗೆ ಸೇರಿದ್ದಾಗಿದ್ದು, ಪ್ರಕರಣ ಕೊಪ್ಪಳದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Ad