ಬೆಂಗಳೂರು: ಕರ್ನಾಟಕದಲ್ಲಿ ಫಿಲಂ ಸಿಟಿ ಇಲ್ಲ. ಕರ್ನಾಟಕ ರಾಜ್ಯದಲ್ಲಿ ಫಿಲಂ ಸಿಟಿ ಒಂದನ್ನು ನಿರ್ಮಾಣ ಮಾಡಬೇಕು ಎಂಬುದು ಡಾ ರಾಜ್ಕುಮಾರ್ ಅವರ ಕನಸಾಗಿತ್ತು. ಆ ಕನಸನ್ನು ನನಸು ಮಾಡಿಯೇ ಮಾಡುತ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಟ್ಟಡವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯ ಅವರು ʻʻಚಿತ್ರಮಂದಿರಗಳು, ಸಬ್ಸಿಡಿ ಬಗ್ಗೆ ಗಮನ ಹರಿಸಿ ಆರ್ಥಿಕ ನೆರವು ನೀಡುತ್ತೇವೆ. ಜತೆಗೆ ಕನ್ನಡದಲ್ಲಿ ಒಟಿಟಿ ವೇದಿಕೆ ತರಲು, ಸಂಬಂಧ ಪಟ್ಟವರ ಜತೆ ಮಾತನಾಡುತ್ತೇವೆ. ರಾಜ್ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ʼʼಎಂದರು.
ಫಿಲಂ ಸಿಟಿಗೆ ಮೈಸೂರಿನ ಹಿಮ್ಮಾವು ಬಳಿ ಸುಮಾರು 100 ಎಕರೆಗೆ ಹೆಚ್ಚು ಜಾಗವನ್ನು ನಾವು ಕೊಟ್ಟಿದ್ದೇವೆ. ಈ ಹಿಂದಿನ ಬಿಜೆಪಿ ಸರ್ಕಾರ, ಅಲ್ಲಿ ಫಿಲಂ ಸಿಟಿ ನಿರ್ಮಿಸುವ ಕಾರ್ಯವನ್ನು ಮಾಡಲಿಲ್ಲ. ಅದೇಕೋ ನನಗೆ ಗೊತ್ತಿಲ್ಲ ಆದರೆ ನಾವು ಆ ಕಾರ್ಯವನ್ನು ಮಾಡಿಯೇ ಮಾಡುತ್ತೇವೆ ಎಂದಿದ್ದಾರೆ.
Ad