ಕಲಬುರಗಿ: ಬಿಸಿಲ ಬೇಗೆಯಿಂದ ಬಸವಳಿದಿದ್ದ ಕರುನಾಡಲ್ಲಿ ಕಳೆದು ದಿನಗಳಿಂದ ವರುಣದೇವ ಕೃಪೆ ತೋರಿಸಿದ್ದಾನೆ.
ನಿನ್ನೆ ಕೂಡ ನಗರದಲ್ಲಿ ತುಂತುರು ಮಳೆ ಆಗಿದ್ದು, ಇಂದು ಮತ್ತೆ ಗುಡುಗು ಸಿಡಿಲು ಸಹಿತ ಮಳೆ ಸುರಿದಿದೆ. ಗಾಳಿ, ಆಲಿಕಲ್ಲು ಸೇರಿ ಕಳೆದ ಅರ್ಧಗಂಟೆಯಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ಗುಡುಗು, ಸಿಡುಲು ಸಹಿತ ಮಳೆ ಆಗಿದೆ.
ಇಂದು ಬೆಳಿಗ್ಗೆಯಿಂದಲೇ ನಗರದಲ್ಲಿ ಬಹುತೇಕ ಮೋಡ ಕವಿದ ವಾತಾವರಣವಿತ್ತು. ಹೀಗಾಗಿ ನಗರದಲ್ಲಿ ಕತ್ತಲಿನಂತೆ ಭಾಸವಾಗಿತ್ತು. ವಾಹನ ಸವಾರರು ಹೆಡ್ಲೈಟ್ ಹಾಕಿಕೊಂಡು ಸಂಚಾರ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.