ಚೆನ್ನೈ: ಒಂದು ದಿನ ಧ್ಯಾನದಲ್ಲಿ ಕುಳಿತುಕೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅದಕ್ಕಾಗಿ ಇಂದು ಕನ್ಯಾಕುಮಾರಿ ತಲುಪಿದ್ದಾರೆ.
ಹೆಲಿಕಾಪ್ಟರ್ ಮೂಲಕ ಕನ್ಯಾಕುಮಾರಿಗೆ ಆಗಮಿಸಿದ ಅವರು, ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳವಾದ ಧ್ಯಾನ ಮಂಟಪದಲ್ಲಿ ಹಗಲು-ರಾತ್ರಿ ಧ್ಯಾನ ಮಾಡಲಿದ್ದಾರೆ.
ಈ ಹಿನ್ನಲೆಯಲ್ಲಿ ತಿರುನಲ್ವೇಲಿ ಡಿಐಜಿಗೆ ಭದ್ರತೆಯ ಉಸ್ತುವಾರಿ ನೀಡಲಾಗಿದ್ದು, ಸ್ಥಳದ ಭದ್ರತೆಗೆ 2000 ಪೊಲೀಸರನ್ನು ನಿಯೋಜಿಸಲಾಗಿದೆ. 1892ರಲ್ಲಿ ಸ್ವಾಮಿ ವಿವೇಕಾನಂದರು ಇದೇ ಜಾಗದಲ್ಲಿ ಧ್ಯಾನಕ್ಕೆ ಕೂತಿದ್ದರು.
ಈ ಮೊದಲು ೨೦೧೯ರ ಲೋಕಸಭಾ ಚುನಾವಣೆ ಮುಗಿದ ಬಳಿದವೂ ಮೋದಿ ಕೇದಾರನಾಥದಲ್ಲಿ ಧ್ಯಾನ ಮಾಡಿದ್ದರು.
Ad