Showing 20 of 20319 articles • Page 1 of 1016
ಶಾಸಕ ತನ್ವಿರ್ ಗೆ ಸಚಿವ ಸ್ಥಾನ ಕೈ ತಪ್ಪಿದೆ. ತನ್ವಿರ್ ಬೆಂಬಲಿಗರಿಂದ ರಸ್ತೆ ತಡೆದು ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಲಾಯಿತು.
ಅಬಕಾರಿ ನಿಯಮಗಳ ಪ್ರಕಾರ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಅಥವಾ ಪೂರೈಕೆ ಮಾಡುವ ಬಾರ್ ಹಾಗೂ ಪಬ್ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಸಮಸ್ಯೆಗಳು ಹಾಗೂ ತತ್ಕ್ಷಣದ ಪರಿಹಾರದ ಅಗತ್ಯದ ಕುರಿತು ಮಾಹಿತಿ ಪಡೆದರು.
7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 13ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನ ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸರು ಆಗಸ್ಟ್ 2 ರಂದು ಬಂಧಿಸಿದ್ದಾರೆ.
ನೆಲ್ಯಾಡಿ ಸಮೀಪದ ರೇಖ್ಯಾ ಗ್ರಾಮದ ನೆಲ್ಯಡ್ಕ–ಇಡ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಅವರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಮೃತರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ₹5 ಲಕ್ಷ ಮೊತ್ತದ ತುರ್ತು ಪರಿಹಾರ ಚೆಕ್ ಹಸ್ತಾಂತರಿಸಲಾಗಿದೆ.
ಜಿಒಎಸ್ ಆಫ್ ( ಗ್ರೂಪ್ ಆಪರೇಟೆಡ್ ಸ್ವಿಚ್ ಮಾಡದೆ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್ ಮೆನ್ ಓರ್ವ ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಕಾರ್ಕಳ ತಾಲ್ಲೂಕಿನ ಇದು ಗ್ರಾಮದಲ್ಲಿರುವ ಸೇತುವೆ ಮುಳುಗಡೆಯಾಗಿದ್ದು, ನೂರಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತಗೊಂಡಿದೆ.
ವೀಕೆಂಡ್ ಹಿನ್ನೆಲೆಯಲ್ಲಿ ಮಲೆನಾಡಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ.
ವಿಭಜಿತ ಲಯನ್ಸ್ ಜಿಲ್ಲೆ 317Cರ 24ನೇ ಜಿಲ್ಲಾ ಸಂಪುಟ ಪದಗ್ರಹಣ ಸಮಾರಂಭವು ಆಗಸ್ಟ್ 8ರಂದು ಸಂಜೆ 4.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ ಎಂದು ಲಯನ್ಸ್ನ ಮಾಜಿ ಜಿಲ್ಲಾ ಗವರ್ನರ್ ಹಾಗೂ ಮುಖ್ಯ ಸಲಹೆಗಾರ ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಕಾಮನ್ವೆಲ್ತ್ ಗೇಮ್ಸ್ 2026 ಅಧಿಕೃತವಾಗಿ ಸಮಾರೋಪಗೊಂಡಿದ್ದು, 2030ರ ಕ್ರೀಡಾಕೂಟದ ಜವಾಬ್ದಾರಿಯು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಗೊಂಡಿದೆ.
ರಸ್ತೆ, ನೀರು, ನೆರಳು – ಇವೆಲ್ಲವನ್ನೂ ಕೊಡುವುದು ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕೆಲಸ. ಆದರೆ, ಇಲ್ಲೊಬ್ಬ ರೈತ, ನಾವು ಕಾಯೋದು ಬೇಡ, ನಾವೇ ಮಾಡೋಣ ಎಂದು ಕೆಲಸ ಮಾಡಿ ತೋರಿಸಿದ್ದಾನೆ.
ನಗರದ ದತ್ತಾತ್ರೇಯ ಸ್ವಾಮಿ ದೇವಸ್ಥಾನದ ಲಿಫ್ಟ್ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ನಿವೃತ್ತ ಇಂಜಿನಿಯರ್ ಸಾವನ್ನಪ್ಪಿದ್ದಾರೆ.
ಕೇರಳದ ವೈನಾಡಿನಲ್ಲಿ ಮಳೆ ಹೆಚ್ಚಾಗಿದ್ದು, ಕಬಿನಿ ಡ್ಯಾಮ್ ಗೆ ಒಳ ಹರಿವು ಹೆಚ್ಚಾಗಿದೆ. ಕಬಿನಿ ಜಲಾಶಯಕ್ಕೆ 23009 ಕ್ಯೂಸೆಕ್ ನೀರು ಒಳ ಹರಿವು ಇದೆ.
ತಾಲೂಕಿನ ಭೀಮನಬೀಡು ಗ್ರಾಮದ ರೈತ ಸಿದ್ದರಾಜು ಎಂಬವರ ಜಮೀನಿನಲ್ಲಿ ಬೆಳೆದಿದ್ದ ಬೆಳ್ಳುಳ್ಳಿಯನ್ನ ಕಳ್ಳರು ನಿನ್ನೆ ರಾತ್ರಿ ಕಳವು ಮಾಡಿರುವ ಘಟನೆ ನಡೆದಿದೆ.
ತಮ್ಮ ಮನೆಯ ಸಮೀಪದ ತೋಡಿನಲ್ಲಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಅರಳ ಗ್ರಾಮದ ಪಂಬದಗದ್ದೆ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಕುರ್ ಕುರೆ ಪ್ಯಾಕೆಟ್ನಲ್ಲಿದ್ದ ಬಾಲ್ ನುಂಗಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ನಡೆದಿದೆ.
ಇರಾನ್ ಮೇಲೆ ಟ್ರಂಪ್ ಹೊಸ ದಾಳಿ ವಿಳಂಬ ಮಾಡಿದ ನಂತರ ತೈಲ ಬೆಲೆ ಕುಸಿದ ಕಾರಣ ಇಂದಿನ ಚಿನ್ನ, ಬೆಳ್ಳಿ ದರ ಏರಿಕೆಯಾಗಿದೆ.
ತೆಲುಗು, ಕನ್ನಡ ಸೇರಿದಂತೆ 17 ಭಾಷೆಗಳ ಜನರ ಮನ ಗೆದ್ದ “ಗಾನ ಕೋಗಿಲೆ” ಎಸ್.ಜಾನಕಿ ಅಮ್ಮನವರ ನೆನಪು ಇಂದಿಗೂ ಕರ್ನಾಟಕದ ಕಲಾವಿದರ ಮನದಲ್ಲಿ ಹಸಿರಾಗಿದೆ.
ಕೇರಳದ ವೈನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.
ಕರ್ನಾಟಕದಾದ್ಯಂತ ಗುಣಮಟ್ಟದ ಬ್ಯಾಂಕಿಂಗ್ ಸೇವೆಗಳನ್ನು ವಿಸ್ತರಿಸುವ ತನ್ನ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತಾ ಎಂಸಿಸಿ ಬ್ಯಾಂಕ್ ನ 23ನೇ ಶಾಖೆಯು ಕಟಪಾಡಿಯಲ್ಲಿ ಭಾನುವಾರ, ಆಗಸ್ಟ್ 2, 2026ರಂದು ಉದ್ಘಾಟನೆಗೊಂಡಿತು.