Showing 20 of 20802 articles • Page 1 of 1041
ನಗರದಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಗೆ ಕೊಟ್ಟಾರ ಚೌಕಿ ಸಮೀಪ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬವೊಂದು ಗ್ಯಾರೇಜ್ ಮೇಲೆ ಮುರಿದು ಬಿದ್ದ ಪರಿಣಾಮ ಮೂರು ಚತುಷ್ಚಕ್ರ ವಾಹನಗಳು ಜಖಂಗೊಂಡಿದ್ದು, ಕಟ್ಟಡಕ್ಕೂ ಅಪಾರ ಹಾನಿಯಾಗಿದೆ.
ಶ್ರೀ ನಾರಾಯಣ ಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಆಶ್ರಯದಲ್ಲಿ ‘ಗುರು ಸಂದೇಶ ಸಾಮರಸ್ಯ ಜಾಥಾ’ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆ.30ರಂದು ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದರು.
ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಉಡುಪಿ ನಗರ ಠಾಣೆ ಪೊಲೀಸರು, ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು, ವಿದೇಶಿ ಕರೆನ್ಸಿ ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೆರಂಪಳ್ಳಿ ಸಂತೋಷನಗರದ ಅರುಣ್ ಎಸ್.ವಿ. (43) ಹಾಗೂ ತೆಂಕನಿಡಿಯೂರು ಗ್ರಾಮದ ಕೌಶೀಕ್ (19) ಬಂಧಿತರು. ಪುತ್ತೂರು ಗ್ರಾಮದ ಭಗವತಿ ಲೇಔಟ್ನ ಸನಂ ಅವರು ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದುಬೈಯಲ್ಲಿದ್ದ ಅವರು ಊರಿಗೆ ಬಂದ […]
ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊಬ್ಬ ತನ್ನ ಬಾಯಲ್ಲಿ ಅಡಗಿಸಿಕೊಂಡು ತಂದಿದ್ದ ಸುಮಾರು 82 ಗ್ರಾಂ ತೂಕದ ಎರಡು ಚಿನ್ನದ ಕ್ಯಾಪ್ಸೂಲ್ಗಳನ್ನು ಬೆಂಗಳೂರು ಏರ್ಪೋರ್ಟ್ನಲ್ಲಿ CISF ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಗೌರವಪೂರ್ವಕವಾಗಿ ಭೇಟಿ ಮಾಡಿದ್ದಾರೆ.
ನೇಪಾಳದ ರುಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಪ್ರವಾಹದಲ್ಲಿ, ಕನಿಷ್ಠ 300 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಮಾಹಿತಿ ನೀಡಿದ್ದಾರೆ.
ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಟನೆಯಲ್ಲಿ ಮೂಡಿಬರುತ್ತಿರುವ ‘ರಣಬಾಲಿ’ ಸಿನಿಮಾವು 2026ರ ಅಕ್ಟೋಬರ್ 16ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.
ಟಿಬೆಟ್-ನೇಪಾಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಭಾರೀ ಅನಾಹುತ ಸಂಭವಿಸಿದೆ.
ಅಮೆರಿಕದ ಟ್ರಂಪ್ ಆಡಳಿತವು ಜಾಗತಿಕವಾಗಿ ಈಗಾಗಲೇ ಸಲ್ಲಿಕೆಯಾಗಿರುವ ವಲಸಿಗರ ವೀಸಾ ಅರ್ಜಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಮಂಗಳೂರಿನ ವಾಮಂಜೂರಿನಲ್ಲಿರುವ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ವತಿಯಿಂದ 2026ನೇ ಸಾಲಿನ ಪದವೀಧರರ 21ನೇ ಪದವಿ ಪ್ರದಾನ ಸಮಾರಂಭವು ಆಗಸ್ಟ್ 29, 2026ರ ಶನಿವಾರದಂದು ಕಾಲೇಜಿನ ಕಲಾಂ ಆಡಿಟೋರಿಯಂನಲ್ಲಿ ನಡೆಯಲಿದೆ.
ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ.
ಉತ್ತರ ಪ್ರದೇಶದ ಕಾನ್ಪುರದ ಗಂಗಾ ಬ್ಯಾರೇಜ್ ಬಳಿ ತರಬೇತಿ ವಿಮಾನವೊಂದು ಪತನಗೊಂಡಿದ್ದು, ಕರ್ನಾಟಕ ಮೂಲದ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಆಯುಕ್ತ ರಘುವೀರ್ ಲಾಲ್ ದೃಢಪಡಿಸಿದ್ದಾರೆ.
ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ.
ರಾಜ್ಯಾದ್ಯಂತ ಹೋಟೆಲ್ ಹಾಗೂ ಉಪಹಾರ ಗೃಹಗಳಲ್ಲಿ ಬಳಸಲಾಗುವ ಅಡುಗೆ ಎಣ್ಣೆಯ ಕಲಬೆರಕೆಗೆ ಕಡಿವಾಣ ಹಾಕಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾರಿ ಕಾರ್ಯಾಚರಣೆಗೆ ಮುಂದಾಗಿದೆ.
ಆಪಲ್ ಕಂಪನಿಯು ಐಫೋನ್ನ ಮುಂಬರುವ 18ರ ಸರಣಿಯನ್ನು ಬಿಡುಗಡೆ ಮಾಡುವ ಬಗ್ಗೆ ಇದೀಗ ಅಧಿಕೃತ ಮಾಹಿತಿ ಹಂಚಿಕೊಂಡಿದೆ.
ನಗರವನ್ನು ಗಾಂಜಾ ಹಾಗೂ ಮಾದಕ ವಸ್ತುಗಳ ಮುಕ್ತ ನಗರವನ್ನಾಗಿ ರೂಪಿಸುವ ಉದ್ದೇಶದಿಂದ ಬಿಜೆಪಿ ಯುವ ಮೋರ್ಚಾ ವತಿಯಿಂದ “ಗಾಂಜಾ ಮುಕ್ತ, ಸ್ವಚ್ಛ ನಂಜನಗೂಡು” ಎಂಬ ಘೋಷವಾಕ್ಯದೊಂದಿಗೆ ಮಾಜಿ ಶಾಸಕ ಬಿ. ಹರ್ಷವರ್ಧನ್ ನೇತೃತ್ವದಲ್ಲಿ ಗುರುವಾರ ಬೃಹತ್ ಬೈಕ್ ರ್ಯಾಲಿ ನಡೆಸಿ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲಾಯಿತು.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಂಭ್ರಮ ಆಚರಣೆಯ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ದ. ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಗಂಗೊಳ್ಳಿ ಧಕ್ಕೆಯಿಂದ ಮಧ್ಯಾಹ್ನ ಬಳಿಕ ಮೀನುಗಾರಿಕೆಗೆ ತೆರಳಿದ ಶ್ರೀ ಬಾಲಾಂಜನೇಯ ಹೆಸರಿನ ಪರ್ಶಿನ್ ಮೀನುಗಾರಿಕಾ ಬೋಟೊಂದು ಧಕ್ಕೆಯ ಅನತಿ ದೂರದಲ್ಲಿ ಅಳಿವೆಯ ಸಮೀಪವೇ ಮುಳುಗಡೆಯಾಗಿದೆ.
1912ರಲ್ಲಿ ಸ್ಥಾಪನೆಯಾಗಿ 114 ವರ್ಷಗಳ ಸಮರ್ಪಿತ ಸೇವೆಯನ್ನು ಪೂರೈಸಿರುವ MCC ಬ್ಯಾಂಕ್ ತನ್ನ ಕಾರ್ಕಳ ಶಾಖೆಯನ್ನು ಬುಧವಾರ, ಆಗಸ್ಟ್ 26, 2026ರಂದು ಸಾಲ್ಮರ ರಸ್ತೆಯ ಫಾರ್ಚೂನ್ ಆರ್ಕಿಡ್ನ ನೆಲ ಮಹಡಿಯಲ್ಲಿರುವ ನೂತನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಿದೆ.