Showing 20 of 20398 articles • Page 102 of 1020
ರಾಜಧಾನಿಯ ನಂದಿನಿ ಲೇಔಟ್ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್ವೊಂದು ಸಂಪೂರ್ಣ ಭಸ್ಮವಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕ ವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ತಾಲೂಕಿನ ಹಿರೇಕೋಟ್ನೆಕಲ್–ಬ್ಯಾಗವಾಟ್ ರಸ್ತೆಯ ಕೆನಾಲ್ ಸಮೀಪದ ಹೊಲ ಪ್ರದೇಶದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ, 11 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇರಾನ್ ಇಸ್ರೇಲ್ ನಡುವಿನ ಯುದ್ಧದ ಭೀಕರತೆ ಗ್ಯಾಸ್ ಸರಬರಾಜಿಗೆ ಸಾಕಷ್ಟು ಎಡವಟ್ಟು ಮಾಡಿದೆ. ಮೈಸೂರು ಜಿಲ್ಲೆಯಲ್ಲಂತೂ ಗ್ಯಾಸ್ ಅಭಾವ ನಾಗರೀಕರ ನಿದ್ದೆ ಕೆಡಿಸಿದೆ. ಗ್ಯಾಸ್ ಸಪ್ಲೈ ಇಲ್ಲದೆ ಜನ ಪರದಾಡುವಂತಾಗಿದೆ.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಎನ್ಐಎ ವಿಶೇಷ ನ್ಯಾಯಾಲಯ ಮೊಹಮ್ಮದ್ ಶಾರಿಕ್ಗೆ 10 ವರ್ಷ ಜೈಲು, 94 ಸಾವಿರ ರೂ. ದಂಡ ವಿಧಿಸಿದೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ 15 ತಿಂಗಳಲ್ಲಿ 421 ಶಿಶು ಮರಣ ಹೊಂದಿದೆ. ಮಾಜಿ ಶಾಸಕ ಎಲ್.ನಾಗೇಂದ್ರ ದಾಖಲೆ ಬಿಡುಗಡೆ ಮಾಡಿದ್ದಾರೆ. ಎಸ್ಎನ್ಸಿಯುಗೆ 3,486 ನವಜಾತಶಿಶುಗಳು ದಾಖಲಾಗಿದೆ.
ತಾಯಿ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದ ಟೆಕ್ಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ರೈನ್ ಸ್ಟ್ರೋಕ್ ನಿಂದ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಮಂಜುನಾಥ ಫಕೀರಪ್ಪ ವಾಲಿಕಾರ ಬಂಧಿತ ಆರೋಪಿ.
ಒಡಿಶಾದಲ್ಲಿ ತಾಪಮಾನ ಹೆಚ್ಚಾಗಿದ್ದು, ಎರಡು ದಿನಗಳಲ್ಲಿ ಜನಗಣತಿ ಕರ್ತವ್ಯದಲ್ಲಿದ್ದ ಇಬ್ಬರು ಶಾಲಾ ಶಿಕ್ಷಕರು ಶಾಖದ ಹೊಡೆತಕ್ಕೆ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಪರಿಶೀಲನೆ ನಡೆಸಿದರು.
ಕಲ್ಲಂಗಡಿ ಹಣ್ಣು ಸೇವಿಸಿ ದಂಪತಿ ಹಾಗೂ ಅವರ ಇಬ್ಬರು ಪುತ್ರಿಯರು ಮೃತಪಟ್ಟಿರುವ ಘಟನೆ ದಕ್ಷಿಣ ಮುಂಬೈನಲ್ಲಿ ನಡೆದ ಕೌಟುಂಬಿಕ ಸಮಾರಂಭವೊಂದರಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ಆರಂಭವಾದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ವಿಶ್ವದ ಜನಪ್ರಿಯ ನಾಯಕ ಹಾಗೂ ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಕರೆದು ಅವಮಾನಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಸರಕಾರಿ ಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.
ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 50 ಗ್ರಾಂ ಎಂಡಿಎಮ್ಎ ಮಾದಕ ವಸ್ತು ಸಹಿತ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೆ.ಎಸ್ .ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಇರಿಸಿದ್ದ ಪರ್ಸ್ ಕಳವಾಗಿದ ಘಟನೆ ನಡೆದಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿ. ನರಸೀಪುರ ತಾಲ್ಲೂಕಿನ ಕೈಯಂಬಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ ಬಿ. ಆರ್.ಅಂಬೇಡ್ಕರ್ ರವರ 135ನೇ ಜನ್ಮದಿನಾಚರಣೆ ಅಂಗವಾಗಿ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಭೀಮೋತ್ಸವನ್ನು ಆಚರಿಸಲಾಯಿತು.
ಬಾಬಾ ಸಾಹೇಬ್ ಡಾ.ಬಿಆರ್ ಅಂಬೇಡ್ಕರ್ ರವರ ಕನಸಿನ ಸಮ ಸಮಾಜ ನಿರ್ಮಾಣವಾಗಲಿ, ದೇಶದಲ್ಲಿ ಜಾಗೃತ ಸಮಾಜ ನಿರ್ಮಾಣವಾಗಬೇಕು ಎಂದು ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಬಿ.ಬಸವರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯಲ್ಲಿ ಎಪ್ರಿಲ್ 29 ಮತ್ತು 30 ರಂದು ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನೀಯರ್ಸ್ (IEEE) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ “ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ” ಗಳ ಕುರಿತು ಅಂತರರಾಷ್ಟ್ರೀಯ ಸಮ್ಮೇಳನವನ್ನು (ICESST 2026) ಆಯೋಜಿಸಲಾಗಿದೆ.
: ವಿವಿಧ ಬೇಡಿಕೆಗೆ ಆಗ್ರಹಿಸಿ ತಾಲೂಕು ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಸಂಘದ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು. ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.