Showing 20 of 20400 articles • Page 104 of 1020
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್ರಾಜ್ ಕಾಂಚನ್ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಭಾನುವಾರ ಕೊಡವೂರು ಶಂಕರನಾರಯಾಣ ದೇಗುಲದ ವಸಂತ ಮಂಟಪದ ನಡೆಯಿತು.
ಬೈಂದೂರು ಶಿರೂರು ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ರಿಸಲ್ಟ್ನಲ್ಲಿ ಚಮತ್ಕಾರಗೊಂಡಿದ್ದು, 35% ನಿಂದ ನೇರವಾಗಿ 94% ಫಲಿತಾಂಶಕ್ಕೆ ಭಾರೀ ಜಿಗಿತಗೊಂಡಿದೆ.
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಉತ್ತರಾಧಿ ಮಠದ ಪಟ್ಟದ ದೇವರಾದ ಶ್ರೀ ಮೂಲ ರಾಮ ದೇವರ ಸಮೇತ ಪೀಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರನ್ನು ಶ್ರೀಕೃಷ್ಣಮಠಕ್ಕೆ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಈ ವೇಳೆ ಪರ್ಯಾಯ ಶೀರೂರು ಮಠದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.
ಉಡುಪಿಯ ಶ್ರೀ ಮಂಜುನಾಥ ಮೋಟರ್ಸ್ ನ ಪಾಲುದಾರ ಕೆ. ರಾಜಶೇಖರ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಬುಡ್ನಾರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಉಡುಪಿ ಜಿಲ್ಲೆಯ ಕಾಳಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸೋಡು ಶ್ರೀ ಕುಮಾರಮಹಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿರುವ ವಾರಾಹಿ ಕಾಲುವೆಗೆ ಬಿದ್ದ ಬೃಹತ್ ಗಾತ್ರದ ಕಾಡುಕೋಣವನ್ನು ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮೇ 3ರಂದು ಸಂಜೆ 4ಗಂಟೆಗೆ ದೇವಸ್ಥಾನದ ಪ್ರಾಂಗಣದಲ್ಲಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ.
ಉಡುಪಿಯಲ್ಲಿ ನಾರಿ ಶಕ್ತಿ ಫೋರಂ ನವರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ನಾರಿ ಶಕ್ತಿ ವಂದನ ಅಧಿನಿಯಮವನ್ನು ಜಾರಿಯಾಗದಂತೆ ತಡೆಹಿಡಿದ ಕೇಂದ್ರದ ವಿಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಶನಿವಾರ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ದ.ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.
ವಾಮಂಜೂರು ನಿವಾಸಿ ನವೀನ್ ಎಂಬಾತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ನವೀನ್ಗೆ ಕುಟುಂಬ ಸಮಸ್ಯೆಗಳಿದ್ದು, ಪತ್ನಿಯಿಂದ ವಿಚ್ಛೇದನವಾಗಿದ್ದು, ಕಳೆದ ಕೆಲವು ತಿಂಗಳಿನಿಂದ ಆಕೆ ಜೋಕಟ್ಟೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಳೆ ಎಂದು ತಿಳಿದುಬಂದಿದೆ.
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ.
ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕ ವಿಭಾಗಕ್ಕೆ ನೂತನ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ (PRO) ವಂದನೀಯ ರೂಪೇಶ್ ಅಶೋಕ್ ಮಾಡ್ತ ಅವರನ್ನು ನೇಮಕ ಮಾಡಲಾಗಿದೆ.
ಹೋಮಿಯೋಪತಿಯ ಸಂಸ್ಥಾಪಕ ಡಾ. ಸ್ಯಾಮ್ಯುಯೆಲ್ ಹಾನೆಮನ್ ಅವರ 271 ನೇ ಜನ್ಮ ದಿನಾಚರಣೆಯ ಸ್ಮರಣಾರ್ಥವಾಗಿ, ವಿಶ್ವ ಹೋಮಿಯೋಪತಿ ದಿನ 2026 ಅನ್ನು 25.04.2026 ರಂದು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಚರಿಸಲಾಯಿತು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಬೆಂಗಳೂರಿನ CHRIST (ಡೀಮ್ಡ್ ಟು ಬಿ ಯುನಿವರ್ಸಿಟಿ) ಜೊತೆ ಏಪ್ರಿಲ್ 25, 2026 ರಂದು ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಪ್ರತಿಷ್ಠಿತ ಸಲಹಾ ಒಪ್ಪಂದ (MoU)ಕ್ಕೆ ಸಹಿ ಹಾಕಿತು. ಶೈಕ್ಷಣಿಕ ಶ್ರೇಷ್ಠತೆ, ಉದ್ಯಮ ಜೋಡಣೆ ಮತ್ತು ಸಾಂಸ್ಥಿಕ ಅಭಿವೃದ್ಧಿಯನ್ನು ಬಲಪಡಿಸುವತ್ತ ಈ ಸಹಯೋಗವು ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ.
ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯು ತನ್ನ ಮೊದಲ ಸೆಂಟ್ರಿಪ್ಯೂಗೇಶನ್ ಆಧಾರಿತ ಥೆರಪ್ಯೂಟಿಕ್ ಪ್ಲಾಸ್ಮಾ ಎಕ್ಸ್ಚೇಂಜ್ ಕ್ರಿಯೆಯನ್ನು ಯಶಸ್ವಿಯಾಗಿ ನೆರವೇರಿಸಿ ಮಹತ್ವದ ವೈದ್ಯಕೀಯ ಮೈಲಿಗಲ್ಲು ದಾಖಲಿಸಿದೆ.
ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಡಾ. ಉದಿತಾ ತ್ಯಾಗಿ ಅವರು ಮುಸ್ಲಿಮರನ್ನು “ಜಿಹಾದಿ ಹಂದಿಗಳು” ಎಂದು ಉಲ್ಲೇಖಿಸಿ, “ಮುಸ್ಲಿಮರು ಹಂದಿಗಳಂತೆ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ”, ಎಂದು ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಗಾಳದಲ್ಲಿ ಗೆಲುವು ಸಾಧಿಸಿದ ನಂತರ ನಾನು ಎಲ್ಲಾ ರಾಜಕೀಯ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
ಮಂಗಳೂರಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (YIT) ತನ್ನ 18ನೇ ವಾರ್ಷಿಕೋತ್ಸವವನ್ನು ಸಾಂಸ್ಕೃತಿಕ ವೈಭವ ಮತ್ತು ಶೈಕ್ಷಣಿಕ ಹೆಮ್ಮೆಯೊಂದಿಗೆ ಅದ್ಧೂರಿಯಾಗಿ ಆಚರಿಸಿತು.
ತೀವ್ರ ಶಾಖದಿಂದ ಪ್ರಾಣಿಗಳನ್ನು ರಕ್ಷಿಸಲು ಅರಣ್ಯ ಇಲಾಖೆ ಜೈಪುರದ ನಹರ್ಗಢ ಜೈವಿಕ ಉದ್ಯಾನವನದಲ್ಲಿ ವಿಶೇಷ ಕ್ರಮಗಳನ್ನು ಜಾರಿಗೆ ತಂದಿದೆ.
ವಿಡಿಯೋ ಗೇಮ್ ಆಡಲು ಮೊಬೈಲ್ ಕೊಡದೇ ಇದ್ದಿದ್ದಕ್ಕೆ ಬಾಲಕ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.