Showing 20 of 20400 articles • Page 105 of 1020
ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏ.20ರಂದು ಬೆಳಿಗ್ಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಳ್ಳರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.
ಬಿದರಹಳ್ಳಿ ಸಮೀಪದ ರಾಂಪುರದ ಹೊರವಲಯದಲ್ಲಿ ಪ್ಲಾಸ್ಟಿಕ್ ಮರುಬಳಕೆ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ಪ್ರಮಾಣದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿದೆ.
ನಗರದ ನಂಜನಗೂಡು ಮತ್ತು ಊಟಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಕಣ್ಮುಚ್ಚಿ ಕುಳಿತಿರುವ ನಂಜನಗೂಡು ನಗರಸಭಾ ಅಧಿಕಾರಿಗಳ ವಿರುದ್ಧ ದಲಿತ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
35 ನವಿಲುಗಳು ಸಾವನ್ನಪ್ಪಿದ್ದು ಆತಂಕ ಸೃಷ್ಟಿಸಿದ ಘಟನೆ ತುಮಕೂರಿನ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ನವಿಲುಗಳ ಸಾವುಗಳು ಸಂಭವಿಸಿದೆ.
ಆನ್ಲೈನ್ ನಲ್ಲಿ ಸಾಲ ಕೊಡಿಸುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿ ಮೋಸ ಮಾಡುತ್ತಿದ್ದ ತಂಡವನ್ನು ರಾಯಚೂರು ಸೈಬರ್ ಅಪರಾಧ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ.
ಇಂದು ನಟಸಾರ್ವಭೌಮ ಡಾ. ರಾಜಕುಮಾರ್ ಜನ್ಮದಿನ. ಈ ದಿನವನ್ನು ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ. ನಟಸಾರ್ವಭೌಮನ ಜನ್ಮದಿನದ ಅಂಗವಾಗಿ ಅಶ್ವಥ ಎಲೆಯಲ್ಲಿ ಚಿತ್ರವನ್ನು ರಚಿಸಲಾಗಿದೆ.
ಬಾಳೆಹಣ್ಣಿನಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಇದರಲ್ಲಿ ವಿಟಮಿನ್ ಸಿ, ಪ್ರೋಟೀನ್, ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿದ್ದು, ಇವುಗಳನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಮಹತ್ವದ ಪಂದ್ಯದಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ.
ಜೋಕಾಲಿ ಆಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಲಕ್ಕಿನಕೊಪ್ಪದಲ್ಲಿ ನಡೆದಿದೆ.
ಗುಡುಗು ಸಹಿತ ಮಳೆಗೆ ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ನಡೆದಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೈಸೂರು ಜಿಲ್ಲೆಯ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಟಾಪರ್ ಆಗಿದ್ದಾರೆ. ಸರ್ಕಾರಿ ಶಾಲೆಯ ಕೀರ್ತಿಯನ್ನು ಮಾಧುರಿ ಆರ್ ಹೆಚ್ಚಿಸಿದ್ದಾರೆ.
SSLCಯಲ್ಲಿ ನಿರೀಕ್ಷೆಯಂತೆ ಅಂಕ ಬರದ ಹಿನ್ನೆಲೆ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೂ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ. ನಂಜನಗೂಡಿನ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಬಾಲಕಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿಗೆ ಶೇ.93.96 ರಂದು ಫಲಿತಾಂಶ ಬಂದಿದ್ದು, ಆದರ್ಶ ವಿದ್ಯಾಲಯದ ಡಿ.ಎಂ ಚೈತ್ರ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ರಾಜ್ಯಕ್ಕೆ ಉಡುಪಿಯ ಶಂಕರನಾರಾಯಣದ ವಿದ್ಯಾರ್ಥಿ ಪ್ರೀತಂ ಪೂಜಾರಿ ಟಾಪರ್ ಆಗಿದ್ದಾರೆ. ಶಂಕರನಾರಾಯಣದ ಮದರ್ ತೆರಸ ಮೆಮೋರಿಯಲ್ ಶಾಲೆ ವಿದ್ಯಾರ್ಥಿಯಾಗಿದ್ದು, 620 ಅಂಕ ಬರಬಹುದು ಎಂದು ಭಾವಿಸಿದ್ದೆ. ಟಾಪರ್ ಆಗುತ್ತೇನೆ ಅನ್ನೋ ಭರವಸೆ ಇತ್ತು. ಆದರೆ 625 ಅಂಕ ನಿರೀಕ್ಷಿಸಿರಲಿಲ್ಲ ಎಂದರು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಎನ್ ಡಿಎ ಸರಕಾರವು ಮಹಿಳಾ ಮಸೂದೆಯನ್ನು ನೆಪವಾಗಿಟ್ಟುಕೊಂಡು ಕ್ಷೇತ್ರ ಪುನರ್ ವಿಂಗಡಣೆ ಬಿಲ್ ಅನ್ನು ಜಾರಿಗೆ ತರಲು ಹೊರಟಿತ್ತು.
ಜಿಲ್ಲೆಯ ಬಾರ್ಕೂರಿನ ನೇಷನಲ್ ಐಟಿಐ ಸಂಸ್ಥೆ ತನ್ನ ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ತಾಂತ್ರಿಕ ಕೌಶಲ್ಯಗಳ ಮೂಲಕ ಮತ್ತೊಮ್ಮೆ ಗಮನ ಸೆಳೆದಿದೆ. ದುಬಾರಿ ವಿದ್ಯುತ್ ವಾಹನಗಳ (EV) ಯುಗದಲ್ಲಿ, ಹಳೆಯ ಪೆಟ್ರೋಲ್ ವಾಹನಗಳನ್ನು ಅತೀ ಕಡಿಮೆ ವೆಚ್ಚದಲ್ಲಿ ವಿದ್ಯುತ್ ವಾಹನಗಳಾಗಿ ಪರಿವರ್ತಿಸಬಹುದು ಎಂಬುದನ್ನು ಈ ಸಂಸ್ಥೆಯ ಪ್ರತಿಭಾವಂತ ವಿದ್ಯಾರ್ಥಿಗಳು ಸಾಬೀತುಪಡಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ವಂಚಿಸಿದ ಆರೋಪ ಎದುರಿಸುತ್ತಿರುವ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. “ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಆಕೆಯನ್ನು ಮದುವೆಯಾಗುವುದೇ ಸೂಕ್ತ” ಎಂದು ನ್ಯಾಯಾಲಯ ಹೇಳಿದೆ.
ತೊಕ್ಕೊಟ್ಟು ಫ್ಲೈ ಓವರನ್ ನಲ್ಲಿ ಇತ್ತೀಚೆಗೆ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ ಆರೋಪಿ.