Showing 20 of 19139 articles • Page 109 of 957
ಕುಡಿದ ಮತ್ತಿನಲ್ಲಿ ಅತೀ ವೇಗದಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿದ ಮಣಿಪಾಲದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಸ್ಥಾಪಕ ಡಾ. ಸಿಎ ಎ. ರಾಘವೇಂದ್ರ ರಾವ್ (89) ಮಂಗಳವಾರ ರಾತ್ರಿ ನಿಧನರಾದರು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶನಿವಾರ ಪೋಷಕರ ಸಭೆ ನಡೆಯಿತು.
ನ್ಯಾಯ ಒದಗಿಸುದರಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲೇ ನಂ.1 ಸ್ಥಾನದಲ್ಲಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಹಕರು ಲಾಕರ್ನಲ್ಲಿಟ್ಟಿದ್ದ ಬರೋಬ್ಬರಿ 4 ಕೋಟಿ ಮೌಲ್ಯದ ಚಿನ್ನವನ್ನು ತೆಗೆದುಕೊಂಡು ಫೈನಾಸ್ಗಳಲ್ಲಿ ಅಡವಿಟ್ಟು ಹಣ ಪಡೆದು ಆನ್ಲೈನ್ ಬೆಟ್ಟಿಂಗ್ ಹಾಗೂ ಕ್ಯಾಸಿನೋಗೆ ಬಳಸಿಕೊಂಡಿದ್ದ ಬ್ಯಾಂಕ್ವೊಂದರ ಸಹಾಯಕ ಮ್ಯಾನೇಜರ್ನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮದುವೆಯ ಅತಿಥಿಯಂತೆ ನಟಿಸಿ ವಧುವಿನ ಆಭರಣ ಬ್ಯಾಗ್ ಕದ್ದ ಘಟನೆ ಜೈಪುರದಲ್ಲಿ ನಡೆದಿದೆ.
58 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿಗಳು ವಿಚ್ಚೇದನ ಪಡೆಯಲು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಆದರೆ ಡಿವೋರ್ಸ್ ನೀಡಲು ರಾಜಸ್ಥಾನ ಹೈಕೋರ್ಟ್ ನಿರಾಕರಿಸಿದೆ.
ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ.
ಗೂಗಲ್ ಮ್ಯಾಪ್ ಸೂಚನೆಯ ಯಡವಟ್ಟಿನಿಂದ ಕಾರೊಂದು ಆವೆ ಮಣ್ಣಿನ ಹೊಂಡಕ್ಕಿಳಿದ ಘಟನೆ ಕೋಟ ಸಾಹೇಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿಯಲ್ಲಿ ಬದಿಯಲ್ಲಿ ಸಂಭವಿಸಿದೆ.
ಮಹಿಳೆಯೊಬ್ಬರಿಗೆ ಕರೆಮಾಡಿದ ಸೈಬರ್ವಂಚಕರು ಅವರಿಂದ ಒಟಿಪಿ ಪಡೆದು 18.10 ಲಕ್ಷ ರೂ. ಹಣ ವಂಚನೆ ಮಾಡಿರುವ ಘಟಕೆ ಬೆಂಗಳೂರಿನ ರವಿಶಂಕರ ಗುರೂಜಿ ಆಶ್ರಮದಲ್ಲಿ ನಡೆದಿದೆ.
ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದ 5ನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಸಿಐಡಿ ಅಧಿಕಾರಿಗಳು 7 ದಿನ ಕಸ್ಟಡಿಗೆ ಪಡೆದಿದ್ದಾರೆ.
ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯ ಕಟ್ವಾ ರೈಲು ನಿಲ್ದಾಣದಲ್ಲಿ ರವಿವಾರ ಮುಂಜಾನೆ ಖಾಲಿ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಮಾರ್ಗ–4ರ ಸೇತುವೆಯ ಪ್ಯಾರಪೆಟ್ ಭಾಗ ಕುಸಿದು ಸಂಭವಿಸಿದ ದುರಂತದಲ್ಲಿ ಒಬ್ಬರು ಮೃತಪಟ್ಟು ಮೂವರು ಗಾಯಗೊಂಡ ಘಟನೆಗೆ ಸಂಬಂಧಿಸಿ ಮುಂಬೈ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಗುತ್ತಿಗೆದಾರ ಸಂಸ್ಥೆ ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್–ಆಸ್ಟಾಲ್ಡಿ ಹಾಗೂ ಅದರ ಉಪಗುತ್ತಿಗೆದಾರ ಮಿಲನ್ ರೋಡ್ ಬಿಲ್ಡ್ಟೆಕ್ LLP ವಿರುದ್ಧ ಪ್ರಕರಣ ದಾಖಲಿಸಿ ಐವರನ್ನು ಬಂಧಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಾದರಿಯಲ್ಲೇ ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ನಿಗಮ, ಮಂಡಳಿ, ಪ್ರಾಧಿಕಾರ ಮತ್ತು ಅನುದಾನಿತ ಸಂಸ್ಥೆಗಳ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಮಹಾಶಿವರಾತ್ರಿಯಂದು ಪ್ರಯಾಗ್ರಾಜ್ನ ಸಂಗಮ್ ಘಾಟ್ಗಳಲ್ಲಿ ಅಂದಾಜು 10 ಲಕ್ಷ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಕೆಮಿಕಲ್ ಸೋರಿಕೆಯಿಂದ ಸ್ಫೋಟ ಸಂಭವಿಸಿ, ದುರಂತ ಘಟನೆಯಲ್ಲಿ ಇಬ್ಬರ ಸಾವಾಗಿದೆ. ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯದ ಬಸರಾಳುವಿನ ಕಾರೆಕಟ್ಟೆ ಬಳಿ ನಡೆದಿದೆ.
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಮಹಿಳೆಯೊಬ್ಬರು ಬುರ್ಖಾ ಧರಿಸಿ ಪವಿತ್ರ ಕನ್ವರ್ ಯಾತ್ರೆ ಕೈಗೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಬೈಕ್ ಮತ್ತು ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಶಿರ್ಥಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುಕೊಣಾಜೆಯ ಹೌದಲ್ ಅಂಗನವಾಡಿ ಕೇಂದ್ರದ ಬಳಿ ನಡೆದಿದೆ.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚು ಲಾಭಗಳಿಸಬಹುದು ಎಂಬ ಆಸೆ ತೋರಿಸಿ ಮಹಿಳಾ ಟೆಕ್ಕಿಗೆ 93 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ದಾವಣಗೆರೆಯಲ್ಲಿ ನಡೆದಿದೆ.
ಟಿ20 ವಿಶ್ವಕಪ್ನ ರಣ ರೋಚಕ ಪಂದ್ಯ ಭಾರತ vs ಪಾಕಿಸ್ತಾನ ನಡುವಿನ ಕಾದಾಟಕ್ಕೆ ಕ್ಷಣಗಣನೆ ಆರಂಭಗೊಂಡಿದೆ.