Showing 20 of 20417 articles • Page 117 of 1021
ಕೋಳಿ ಅಂಕವು ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ನಡೆಯುತ್ತಿದ್ದ ವೇಳೆ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಪರಾರಿಯಾಗಿದ್ದಾರೆ.
ಶ್ರೀರಾಮ ಟಂಕ ಜಪ ಅಭಿಯಾನ ಎ.14ರಂದು ಶ್ರೀಕೃಷ್ಣಮಠ ಸಮೀಪದ ಗೀತಾಮಂದಿರದಲ್ಲಿ ನಡೆಯಲಿದೆ ಎಂದು ಅಭಿಯಾನ ಪ್ರವರ್ತಕ ಮಂಜುನಾಥ ಕುಡ್ವ ಮಂಗಳೂರು ತಿಳಿಸಿದ್ದಾರೆ.
ಸ್ಯಾಟ್ಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರನ್ನು ಪಾರ್ಕಿಂಗ್ ಸಿಬ್ಬಂದಿ ರಿವರ್ಸ್ ತೆಗೆಯುವಾಗ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈಶಾನ್ಯ ನೈಜೀರಿಯಾದಲ್ಲಿ ಸೇನೆಯು ನಡೆಸಿದ ವೈಮಾನಿಕ ದಾಳಿಯಲ್ಲಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಭಾರತದ ಆಧ್ಯಾತ್ಮಿಕ ಚೇತನ ಸ್ವಾಮಿ ವಿವೇಕಾನಂದರ ಅಪ್ರತಿಮ ಗೌರವಾರ್ಥವಾಗಿ ಅಮೇರಿಕಾದ ಸೀಟಲ್ ನಗರದ ಹೃದಯಭಾಗದಲ್ಲಿರುವ ವೆಸ್ಟ್ಲೇಕ್ ಸ್ಕ್ವೇರ್ನಲ್ಲಿ ಅವರ ಮೊದಲ ಪೂರ್ಣಕಾಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ.
ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ ಸೆಕ್ಸ್ ವರ್ಕ್, ರೀಲ್ಸ್ ಗಳಲ್ಲಿ ಬಳಸಿ, ಲಕ್ಷಾಂತರ ಹಣ ಗಳಿಸಿ ಬಲವಂತವಾಗಿ ಲಿಂಗ ಬದಲಾವಣೆಗೆ ನಡೆಸಿದ ಹುನ್ನಾರಕ್ಕೆ ಬೇಸತ್ತು ಖದೀಮರ ಕಪಿಮುಷ್ಠಿಯಿಂದ ಹೊರಬಂದ ಯುವಕನಿಗೆ ವಾಪಸ್ ದಂಧೆಗೆ ಬರುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಅಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆದ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಸುಮಾರು 340 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶಿಲ್ಪ ಹೇಳಿದರು.
ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಕ್ರಿ.ಶ.1432ರಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಮುಂದಿನ ಕಾರ್ಯಕ್ರಮ 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ.
ಮಣಿಪಾಲದಲ್ಲಿ ನಡೆದ ವ್ಯಕ್ತಿಯೊಬ್ಬರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಅಪಹರಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.
ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಪ್ರಚೋದನೆ ಕೇಸ್ ನ್ನು ತಂದೆ ದಾಮೋದರ ಶೆಟ್ಟಿ ದಾಖಲಿಸಿದ್ದರು. ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನಲೆ ಕಾರ್ಕಳದಲ್ಲಿ ಪತ್ನಿ ಸೌಮ್ಯ ಶೆಟ್ಟಿ ಅರೆಸ್ಟ್ ಮಾಡಲಾಗಿದೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ನುಡಿದಂತೆ ನಡೆದ ಸರಕಾರ.ಬಡವರ ಕಣ್ಣೀರು ಒರೆಸುವ ಕೆಲಸವನ್ನು ಮಾಡುತ್ತಿದೆ.ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಪಂಚ ಗ್ಯಾರಂಟಿ ಫಲಾನುಭವಿಗಳು ಇದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ.
ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ನಗರದ ಕಾರ್ ಮಾಡಿಫಿಕೇಷನ್ ಸೆಂಟರ್ ನಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಗರದ ಫಳ್ನೀರ್ ಬಳಿಯ ಟೋಪಾಜ್ ಕಾರ್ ಸೆಂಟರ್ ನಲ್ಲಿ ನಡೆದಿದೆ.
ಓವರ್ ಟೇಕ್ ಮಾಡುವ ಭರದಲ್ಲಿ ತನ್ನ ಪಾಡಿಗೆ ಹೋಗುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮೈನ್ಸ್ ಒಯ್ಯುತ್ತಿದ್ದ ಭಾರೀ ಗಾತ್ರದ ಟಿಪ್ಪರ್ ಗೆ ಬಡಿದು ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ನಂತೂರು ತಾರಾಯಿತೋಟ ಎಂಬಲ್ಲಿ ನಡೆದಿದೆ.
ಮಂಗಳೂರಿನ ಮೂಡುಬಿದಿರೆ ಸಮೀಪದ ತೋಡಾರ್ ಪಡೋಡ್ಡಿ ಎಂಬಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.
ಎಸ್ಜೆಇಸಿ ಮಹಿಳಾ ಫುಟ್ಬಾಲ್ ತಂಡವು 2026 ಏಪ್ರಿಲ್ 11 ರಂದು ಮೈಸೂರಿನ ಎನ್ಐಇಯಲ್ಲಿ ನಡೆದ ವಿ.ಟಿ.ಯು ರಾಜ್ಯ ಮಟ್ಟದ ಮಹಿಳಾ ಫುಟ್ಬಾಲ್ ಟೂರ್ನಿಯಲ್ಲಿ ಭಾಗವಹಿಸಿ ರನ್ನರ್-ಅಪ್ ಟ್ರೋಫಿಯನ್ನು ಗೆದ್ದಿದೆ.
ಆಹಾರಕ್ಕಾಗಿ ಮುಳ್ಳುಹಂದಿಯನ್ನು ಬೇಟೆಯಾಡಲು ಹೋದ ಚಿರತೆಯೊಂದು ಅದರ ಮುಳ್ಳುಗಳು ಚುಚ್ಚಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಹಿಂಗೋಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ 4.7 ತೀವ್ರತೆಯ ಭೂಕಂಪನ ಶನಿವಾರ ಬೆಳಗ್ಗೆ ಸಂಭವಿಸಿದೆ. ನೆರೆಯ ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ಈ ಘಟನೆಯಲ್ಲಿ ತಕ್ಷಣಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
1999ರ ಕಾರ್ಗಿಲ್ ಯುದ್ಧದ ವೀರ, ‘ಲಯನ್ ಆಫ್ ಲಡಾಖ್’ ಎಂದೇ ಖ್ಯಾತರಾಗಿದ್ದ ಮಹಾವೀರ ಚಕ್ರ ಪುರಸ್ಕೃತ ನಿವೃತ್ತ ಕರ್ನಲ್ ಸೋನಮ್ ವಾಂಗ್ಚುಕ್ (61) ಅವರು ಏಪ್ರಿಲ್ 10, ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.