Showing 20 of 20417 articles • Page 119 of 1021
ಟಿಪ್ಪರ್ ಲಾರಿಯೊಂದು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಕೇಶಿ ಘಾಟ್ನಲ್ಲಿ ಯಮುನಾ ನದಿಯಲ್ಲಿ 30ಕ್ಕೂ ಹೆಚ್ಚು ಪಂಜಾಬ್ ಮೂಲದ ಯಾತ್ರಾರ್ಥಿಗಳಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಇತರ 22 ಪ್ರಯಾಣಿಕರನ್ನು ರಕ್ಷಿಸಲಾಗಿದೆ.
ಇಲ್ಲಿನ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಟಾಸ್ ವಿಳಂಬವಾಗಿದೆ.
ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಗೆ ಬೆಂದು ಹೋಗಿದ್ದ ಬೆಂಗಳೂರಿಗೆ ಇಂದು ಮಳೆಯಾಗಿದೆ.
ರಾಜ್ಯ ಮಟ್ಟದಲ್ಲಿ ಅಗ್ರ ಸ್ಥಾನ: 600ರಲ್ಲಿ 599 ಅಂಕಗಳನ್ನು ಪ್ರಿನ್ಸಿಲಾ ಕಾರ್ದೋಜಾ ಅವರು ಪಡೆದು ಕೊಂಡಿದ್ಧಾರೆ. ರಾಜ್ಯ ಮಟ್ಟದಲ್ಲಿ 600 ರಲ್ಲಿ 598 ಅಂಕ ಗಳನ್ನು ಪಡೆದು ಮೀನಾಕ್ಷಿ ಉನ್ನಿತನ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ಧಾರೆ .
ವಿಶ್ವ ಆರೋಗ್ಯ ದಿನ-2026ರ ಅಂಗವಾಗಿ, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯು, ಈ ವರ್ಷದ ವಿಷಯವಾದ ಆರೋಗ್ಯಕ್ಕಾಗಿ ಒಟ್ಟಾಗಿ-ವಿಜ್ಞಾನವನ್ನು ಬೆಂಬಲಿಸೋಣ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿತು.
ಸಾರ್ವಜನಿಕರ ಬಹುದಿನಗಳ ಬೇಡಿಕೆ ಭಾಗಶಃ ಈಡೇರಿದೆ. ಜಿಲ್ಲೆಯ ಕಟಪಾಡಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಅಂಡರ್ ಪಾಸ್ ಕಾಮಗಾರಿ ವೇಗ ಪಡೆದುಕೊಂಡಿದೆ. ಈ ಭಾಗದಲ್ಲಿ ಅಂಡರ್ ಪಾಸ್ ಬೇಕು ಎಂದು ಅನೇಕ ವರ್ಷಗಳಿಂದ ಹೋರಾಟ ನಡೆದಿತ್ತು.
ಕುಂದಾಪುರ ಕೋಡಿ ಬೀಚ್ನಲ್ಲಿ ಡ್ರೋನ್ ಕ್ಯಾಮರಾ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ. ವೀಡಿಯೊ ಚಿತ್ರೀಕರಣಕ್ಕಾಗಿ ಡ್ರೋನ್ ಹಾರಿಸುತ್ತಿದ್ದ ವೇಳೆ ಅಚಾನಕ್ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದ್ದು, ತಕ್ಷಣವೇ ಡ್ರೋನ್ ಮಾಲೀಕರು ಮುಳುಗು ತಜ್ಞ ದಿನೇಶ್ ಖಾರ್ವಿಯನ್ನು ಸಂಪರ್ಕಿಸಿದ್ದಾರೆ
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.89.58 ರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿ ಚಂದು ಶೇ.91 ರಷ್ಟು ಫಲಿತಾಂಶ ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಸರಳಾ ಹೇಳಿದರು.
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್ ಹೇಳಿದರು.
ಕಾರ್ಕಳ ಪುರಸಭೆಯಲ್ಲಿ ಮಾಹಿತಿ ಹಕ್ಕು ಅಧಿಕಾರಿ ತಾನು ಕೇಳಿದ ದಾಖಲೆಗಳನ್ನು ನೀಡದೆ ಸತಾಯಿಸುತ್ತಿದ್ದಾರೆ ಮಾಹಿತಿ ಕೇಳಿದರೆ ಪೂರ್ಣ ಮಾಹಿತಿ ನೀಡದೆ ತಾವೇ ಮೇಲ್ಮಮನವಿ ಸಲ್ಲಿಸಿ ಉಡಾಪೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯ ಸುನೀಲ್ ಕೋಟ್ಯಾನ್ ಪುರಸಭೆ ಕಛೇರಿಯೊಳಗೆ ಮಾಹಿತಿ ಹಕ್ಕು ಅಧಿಕಾರಿ ಟೇಬಲ್ ಮುಂಭಾಗದಲ್ಲಿ ಪ್ರತಿಭಟನೆ ಕುಳಿತ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ 196 ಬಿಎಸ್ಎನ್ಎಲ್ ಟವರ್ಗಳಿದ್ದು, ಇತ್ತೀಚೆಗೆ 39 ಹೊಸ 4ಜಿ ಟವರ್ಗಳು ಮಂಜೂರಾಗಿವೆ. ಇದರಲ್ಲಿ 30 ಟವರ್ಗಳಿಗೆ ಸಂಪರ್ಕ ಕಲ್ಪಿಸಲಾಗಿದೆ.
ಮನುಷ್ಯನನ್ನು ಮತ್ತೆ ಚಂದ್ರನ ಕಕ್ಷೆಗೆ ಕಳುಹಿಸಿದ ನಾಸಾದ ಐತಿಹಾಸಿಕ ‘ಆರ್ಟೆಮಿಸ್ 2’ ಬಾಹ್ಯಾಕಾಶ ಯಾನ ಇದೀಗ ಅಂತಿಮ ಹಂತದಲ್ಲಿದೆ. ಈ 10 ದಿನಗಳ ರೋಚಕ ಪಯಣದಲ್ಲಿ ಗಗನಯಾತ್ರಿಗಳ ಆರೋಗ್ಯ ಕಾಪಾಡಲು ಅವರ ಪ್ರಥಮ ಚಿಕಿತ್ಸಾ ಪೆಟ್ಟಿಗೆಯಲ್ಲಿ ಜೀರ್ಣಕ್ರಿಯೆ ಹಾಗೂ ಮಲಬದ್ಧತೆ ನಿವಾರಕ ಔಷಧ ‘ಡಲ್ಕೋಲಾಕ್ಸ್’ ಕೂಡ ಸ್ಥಾನ ಪಡೆದಿದೆ. ಭಾರತದಲ್ಲಿ ಈ ಔಷಧಿಯನ್ನು ‘ಡಲ್ಕೋಫ್ಲೆಕ್ಸ್’ ಎಂಬ ಹೆಸರಿನಿಂದ ಕರೆಯಲಾಗುತ್ತದೆ.
ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (15) ಶವ ಪತ್ತೆಯಾಗಿದೆ. ಅರಿಶಿನಗುಪ್ಪಿಯಿಂದ 5 ಕಿ.ಮೀ ದೂರದ, ಸುಮಾರು 1500 ಅಡಿ ಪ್ರಪಾತದಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿದೆ.
ಶ್ರವಣ ದೋಷವಿದ್ದರೂ ವಿದ್ಯಾರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದಾನೆ. ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೆ.ಮಹದೇವ ಪ್ರಸಾದ್ ಎಂಬ ವಿದ್ಯಾರ್ಥಿಯೂ 600 ಅಂಕಗಳಿಗೆ 529 ಅಂಕಗಳನ್ನು ಗಳಿಸಿದ್ದಾನೆ.
ನಗರದ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ)ಯಲ್ಲಿ “ಮಿಲನ್ 2026” ಎಂಬ ಸಾಂಸ್ಕೃತಿಕ ವೈವಿಧ್ಯತೆಯ ಹಬ್ಬವನ್ನು 2026 ಏಪ್ರಿಲ್ 10 ರಂದು ಭವ್ಯವಾಗಿ ಆಯೋಜಿಸಲಾಯಿತು. ಕಾಲೇಜು ಆವರಣಕ್ಕೆ ಆಗಮಿಸಿದ ಎಲ್ಲರನ್ನು ವಿದ್ಯಾರ್ಥಿಗಳಿಂದ ರೂಪಿಸಲಾದ ಬಣ್ಣಬಣ್ಣದ ಕಲಾಕೃತಿಗಳು ಸ್ವಾಗತಿಸಿತು.
ಹಿಂದೂ ಸಮಾಜಕ್ಕೆ ನ್ಯಾಯ ಕೇಳುವ ಸಂಘಟನೆ ಆರ್ಎಸ್ಎಸ್. ಈ ಸಂಘಟನೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಆಡಿರುವ ಮಾತು ಸರಿಯಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.
ಶ್ರೀ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದ ನಂತರ ತಾಲೂಕಿನ ಹುಲ್ಲಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಶ್ರೀಮತಿ ಪೂಜಾ (24) ಎಂಬುವವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.
ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮೋದಿ ಅವರ ಭದ್ರತೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಬಿಹಾರದ ಬಕ್ಸರ್ನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತನೆಗೆ ನೆರವಾಗುತ್ತಿದ್ದ ಇನ್ನಿಬ್ಬರನ್ನೂ ಸಹ ವಶಕ್ಕೆ ಪಡೆಯಲಾಗಿದೆ.