Showing 20 of 19151 articles • Page 129 of 958
274 ಮಿಲಿಯನ್ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಶ್ರೇಷ್ಠ ಕ್ರಿಕೆಟರ್ ವಿರಾಟ್ ಕೊಹ್ಲಿ ಅವರ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯು ಜನವರಿ 30ರ ರಾತ್ರಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿದೆ.
ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಫೆಬ್ರವರಿ 1, 2026 ರ ಭಾನುವಾರ ಸಂಜೆ 5 ಗಂಟೆಗೆ ವಿಶ್ವವಿದ್ಯಾನಿಲಯದ ಎಲ್.ಎಫ್. ರಸ್ಕ್ವಿನ್ಹಾ ಸಭಾಂಗಣದಲ್ಲಿ ಸ್ವರಾಂಜಲಿ – ಆಧ್ಯಾತ್ಮಿಕ ಮತ್ತು ಸಮಕಾಲೀನ ಸಂಗೀತದ ಗಾಯನ ಮತ್ತು ವಾದ್ಯವೃಂದದ ಸಂಗೀತ ಕಚೇರಿಯನ್ನು ಆಯೋಜಿಸಲಿದೆ.
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ
ಧನುರ್ಮಾಸದ ಕೊನೆಯ ಪೂಜೆಗೆಂದು ಹೋಗಿದ್ದ ಬಾಲಕ ಸುಮಂತ್ ಅನುಮಾನಾಸ್ಪದವಾಗಿ ಸಾವಿನ ಪ್ರಕರಣದ ಕೂಲಂಕುಷವಾಗಿ ತನಿಖೆಗೆ ಶಾಸಕ ಹರೀಶ್ ಪೂಂಜಾ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಮೆಟ್ರೋ ರೈಲಿನಲ್ಲಿ ಬಾಲಿವುಡ್ ನಟ ವರುಣ್ ಧವನ್ ಕೋಚ್ನೊಳಗೆ ಇರುವ ಹ್ಯಾಂಡಲ್ಗಳಿಂದ ಸ್ಟಂಟ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮುಂಬೈ ಮೆಟ್ರೋ ರೈಲಿನಲ್ಲಿ ಸಾರ್ವಜನಿಕ ಅಶಾಂತಿ ಉಂಟು ಮಾಡಿದ ಆರೋಪದಡಿ ನಟ ವರುಣ್ ಧವನ್ಗೆ 500 ರೂ. ದಂಡ ವಿಧಿಸಲಾಗಿದೆ.
ಥೈಲ್ಯಾಂಡ್ನಿಂದ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಡ್ರಗ್ ಪೆಡ್ಲರ್ಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಿಮಾನ ಪತನಗೊಂಡು ಮೃತಪಟ್ಟ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಮೃತದೇಹವನ್ನು ವಾಚ್ ಮತ್ತು ಬಟ್ಟೆಯಿಂದ ಗುರುತಿಸಲಾಗಿದೆ.
ಮಂಗಳೂರು: ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕಲಾ ಮತ್ತು ಮಾನವಿಕ ಶಾಲೆಯು ಆಯೋಜಿಸಿದ್ದ “ಸುಸ್ಥಿರ ಅಭಿವೃದ್ಧಿಗಾಗಿ ಶಾಂತಿಯುತ ಮತ್ತು ಅಂತರ್ಗತ ಸಮಾಜಗಳನ್ನು ಉತ್ತೇಜಿಸುವುದು” ಎಂಬ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ಎಲ್ಎಫ್ ರಸ್ಕೀನ್ಹಾ ಸಭಾಂಗಣದಲ್ಲಿ ಇಂದು ನಡೆದಿದ್ದು, ಉದ್ಘಾಟನಾ ಅಧಿವೇಶನದಲ್ಲಿ ಶ್ರೀ ದರ್ಶನ್ ಎಚ್ ವಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೇಶದ ಯುವಕರು ಸಮಗ್ರ ಮತ್ತು ಸುಸ್ಥಿರ ಮನಸ್ಥಿತಿಯನ್ನು ಬೆಳೆಸಿಕೊಳ್ಳುವಂತೆ ಒತ್ತಾಯಿಸುತ್ತಾ, ಜವಾಬ್ದಾರಿಯುತ ಮಾನವ ಅಭಿವೃದ್ಧಿಗಾಗಿ ಹಸಿರು ಶಕ್ತಿ, ವಿದ್ಯುತ್ ವಾಹನಗಳು ಮತ್ತು ಸರಿಯಾದ ತ್ಯಾಜ್ಯ ವಿಂಗಡಣೆಯಂತಹ ಸುಸ್ಥಿರ […]
ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಹೊಸ್ಮಾರು ಕಡೆಗೆ ಸಾಗುತ್ತಿದ್ದ ಗೂಡ್ಸ್ ಟೆಂಪೋ ಮತ್ತು ಎದುರಿನಿಂದ ಬರುತ್ತಿದ್ದ ಕಾರು ಮುಖಾಮುಖಿ ಢಿಕ್ಕಿ ಹೊಡೆದು ಮೂವರು ಗಾಯಗೊಂಡಿದ್ದಾರೆ.
ಇನ್ನೋವಾ ಕಾರು, ಆಟೋ ರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ ನಡೆದ ಘಟನೆ ಬುಧವಾರ ಬೆಳಿಗ್ಗೆ ಹಿರಿಯಡಕದಲ್ಲಿ ಸಂಭವಿಸಿದೆ.
ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬಿ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ.
ಯುಎಇಯಲ್ಲಿ “ಗ್ರೇಟ್ ಪ್ಲೇಸ್ ಟು ವರ್ಕ್ಲ” (2025–2026) ಪ್ರಮಾಣಪತ್ರವನ್ನು ಇತ್ತೀಚೆಗೆ ಪಡೆದುಕೊಂಡಿರುವ ತುಂಬೆ ಗ್ರೂಪ್, ತನ್ನ ಎಲ್ಲಾ ಘಟಕಗಳ ಉದ್ಯೋಗಿಗಳ ಜೀವನಮಟ್ಟ, ವೃತ್ತಿ ಅಭಿವೃದ್ಧಿ ಹಾಗೂ ದೀರ್ಘಕಾಲೀನ ಭದ್ರತೆಯನ್ನು ಉದ್ದೇಶಿಸಿ “ತುಂಬೆ ಕೇರ್ಸ್” ಎಂಬ ಸಮಗ್ರ ಕಲ್ಯಾಣ ಕಾರ್ಯಕ್ರಮವನ್ನು ಆರಂಭಿಸಿದೆ.
ಕೊಟ್ಟಾಯಂನ ಕರುಕಾಚಲದಲ್ಲಿ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮಂಗಳೂರು ಮೂಲದ ಯುವಕ ಸಾವನಪ್ಪಿದ ಘಟನೆ ನಡೆದಿದೆ.
ತಾಲ್ಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಶಹರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆಹಾರವನ್ನರಸಿ ಕಾಡಿನಿಂದ ನಾಡಿಗೆ ಬಂದು ಮನೆಯೊಳಗೆ ನುಗ್ಗಿದ್ದ ಕಡವೆಯನ್ನ ರಕ್ಷಣೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಕಾಡಿಗೆ ಸ್ಥಳಾಂತರಿಸಿದ ಘಟನೆ ಮಂಗಳವಾರ ನಡೆದಿದೆ.
ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೇಂದ್ರ ಬಜೆಟ್ ಮಂಡಿಸಲಿದ್ದು, ಅದಕ್ಕೂ ಮುನ್ನ ಇಂದು ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಪ್ರಾರಂಭವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಸತ್ತಿನಲ್ಲಿ ಭಾಷಣವನ್ನು ಮಾಡುವ ಮೂಲಕ ಬಜೆಟ್ ಅಧಿವೇಶನಕ್ಕೆ ಚಾಲನೆ ನೀಡಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎನ್ಎಸ್ಎಸ್ ಸ್ವಯಂಸೇವಕ ಮತ್ತು ಬಿ.ಎಸ್ಸಿ ವಿದ್ಯಾರ್ಥಿ ಮಧುಕರ್ ಎಂ. ಪ್ರಭು, ನವದೆಹಲಿಯಲ್ಲಿ ನಡೆದ 2026 ರ ಗಣರಾಜ್ಯೋತ್ಸವ ಶಿಬಿರದಲ್ಲಿ ಬೆಂಗಳೂರು ಪ್ರಾದೇಶಿಕ ನಿರ್ದೇಶನಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಲಾಗಿದೆ.
ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಜಿತ್ ಪವಾರ್, ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕರಾಗಿದ್ದರು. ಜನರ ಮಧ್ಯೆ ಇರುವ ನಾಯಕನಾಗಿ ಜನಾನುರಾಗಿ ಹೆಸರಾಗಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು.