Showing 20 of 20442 articles • Page 130 of 1023
ಮೀನು ಹಿಡಿಯಲೆಂದು ಫಲ್ಗುಣಿ ನದಿಗೆ ಸಣ್ಣ ದೋಣಿಯಲ್ಲಿ ತೆರಳಿದ್ದ ಮೂವರು ಯುವಕರಲ್ಲಿ ಇಬ್ಬರು ನೀರುಪಾಲಾದ ಘಟನೆ ಕಾವೂರು ಠಾಣಾ ವ್ಯಾಪ್ತಿಯ ಕುಂಜತ್ಬೈಲಿನಲ್ಲಿ ನಡೆದಿದೆ.
ಕೋಟ ಠಾಣಾ ವ್ಯಾಪ್ತಿಯ ಸಾಸ್ತಾನದಲ್ಲಿ ನಡೆದ ಯುವಕನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.
ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಹಜವಾಗಿ ದನಗಳಿಗೆ ನಾಲ್ಕು ಕೆಚ್ಚಲುಗಳು ಇರುವುದೇ ಸಾಮಾನ್ಯ. ಆದರೆ ಉಡುಪಿ ಜಿಲ್ಲೆಯ ಪರ್ಕಳದ ಅಚ್ಯುತ ನಗರದಲ್ಲಿ ಅಪರೂಪದ ಐದು ಕೆಚ್ಚಲಿನ ದನವೊಂದು ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ (ಕೆಎಂಸಿ)ಯಲ್ಲಿ ಮೊದಲ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ದೀರ್ಘಕಾಲದ ಯಕೃತ್ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 56 ವರ್ಷದ ವ್ಯಕ್ತಿಗೆ, ಮೃತ ದಾನಿ ಕಸಿ ಕಾರ್ಯಕ್ರಮದಡಿಯಲ್ಲಿ ಯಕೃತ್ತು ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಮಣಿಪಾಲ ಮಾಹೆಯ ಬೋಧನಾ ಆಸ್ಪತ್ರೆಗಳ ಸಿಒಒ ಡಾ. ಸುಧಾಕರ್ ಕಂಟಿಪುಡಿ ಹೇಳಿದರು.
ತಾಲೂಕಿನ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಬಾಗಿಲು ಏಕಾಏಕಿ ತೆರೆದುಕೊಂಡು ರಸ್ತೆಗೆ ಎಸೆಯಲ್ಪಟ್ಟಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.
ಬೆಂಗಳೂರಿನ ಹಬ್ ಎಂದೇ ಕರೆಯಲ್ಪಡುವ ಎಲೆಕ್ಟ್ರಾನಿಕ್ ಸಿಟಿ ಹಂತ 1 ರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅವಘಡದ ತೀವ್ರತೆಗೆ ಇಡೀ ಪ್ರದೇಶವೇ ದಟ್ಟವಾದ ಕಪ್ಪು ಹೊಗೆಯಿಂದ ಆವೃತವಾಗಿದೆ.
ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ಸರ್ಕಾರದ ಕೆಎಸ್ಆರ್ಟಿಸಿ ಬಸ್ ಅತಿವೇಗದಿಂದ ನಿಯಂತ್ರಣ ತಪ್ಪಿ ಭೀಕರ ಅಪಘಾತ ಎಸಗಿದೆ.
ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿದ್ದು ಡಿಕ್ಕಿಯ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿ ಬಿದ್ದ ಘಟನೆಯ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು ನದಿ ಪಾಲಾದ ದಾರುಣ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಲ್ಗುಣಿ ನದಿಯಲ್ಲಿ ಬುಧವಾರ (ಏ.1) ಮುಂಜಾನೆ ಸಂಭವಿಸಿದೆ. ಕುಂಜತ್ಬೈಲ್ ನಿವಾಸಿಗಳಾದ ಗಣೇಶ್ (28), ರಾಯಲ್ (24) ನೀರುಪಾಲಾದ ಯುವಕರು.
ಇಂದ್ರಾಳಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಶ್ರೀ ಆಂಜನೇಯ ದೇವರ ಗುಡಿ ಹಾಗೂ ನಾಗದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಇದೇ ಎ. 3ರಿಂದ 7ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ನೂತನ ಹೈ ಸ್ಪೀಡ್ 128- ಸ್ಲೈಸ್ ಸಿಟಿ ಸ್ಕ್ಯಾನ್ ಮತ್ತು ಅತ್ಯಾಧುನಿಕ ಮ್ಯಾಮೊಗ್ರಾಫಿಯನ್ನು ನವೀಕರಿಸಲಾದ ರೇಡಿಯೊಲಾಜಿ ವಿಭಾಗದಲ್ಲಿ ಉದ್ಘಾಟಿಸಲಾಯಿತು. ಮಣಿಪಾಲ್ ಅಕಾಡೆಮಿಯ ಉನ್ನತ ಶಿಕ್ಷಣದ ಫ್ರೊ. ಚ್ಯಾನ್ಸಲರ್ ಡಾ ಹೆಚ್ ಎಸ್ ಬಲ್ಲಾಳ್ ಏಪ್ರಿಲ್ 1 ರಂದು ಈ ನೂತನ ಸೇವೆಯನ್ನು ಉದ್ಘಾಟಿಸಿದರು.
ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜಿಂಕೆ ಸಾವನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ನೇರಳೆ ಗೇಟ್ ಬಳಿ ನಡೆದಿದೆ.
ಆಟವಾಡುತ್ತಿದ್ದ ಬಾಲಕನಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಾಯಗೊಂಡ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಹುಣಸೂರು ತಾಲ್ಲೂಕು ಶಬ್ಬೀರ್ ನಗರದಲ್ಲಿ ನಡೆದಿದೆ.
ನಂಜನಗೂಡು ವಿಧಾನಸಭಾ ಕ್ಷೇತ್ರದ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರ 31ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮಾಜಿ ಸಂಸದರಾದ ದಿವಂಗತ ಆರ್. ಧ್ರುವನಾರಾಯಣ್ ರವರ ಪುತ್ಥಳಿಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರಿಗೆ ನೀಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಒಂದೆಡೆ ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆ, ಇನ್ನೊಂದೆಡೆ ಅಡುಗೆ ಅನಿಲದ ಕೊರತೆಯಿಂದಾಗಿ ಕರಾವಳಿಯಲ್ಲಿ ಮೀನುಗಾರಿಕೆ ಅರ್ಧಕ್ಕರ್ಧ ನಿಂತು ಹೋಗಿದೆ.
ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಟೋ ಎಲ್ಪಿಜಿ (ಗ್ಯಾಸ್) ಸಮಸ್ಯೆಯಿಂದ ರಿಕ್ಷಾ ಚಾಲಕರು ಸೇರಿದಂತೆ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಸರಕಾರ ಈ ಬಗ್ಗೆ ಗಮನ ಹರಿಸಿ ಕ್ರಮ ವಹಿಸಬೇಕೆಂದು ಸೋಶಿಯಲ್ ಡೆಮೊಕ್ರಾಟಿಕ್ ಟ್ರೇಡ್ ಯೂನಿಯನ್ (ಎಸ್ಬಿಟಿಯು) ಸರಕಾರವನ್ನು ಒತ್ತಾಯಿಸಿದೆ.
ಮದುವೆಯಾದ ಒಂದೇ ತಿಂಗಳಿಗೆ ಉದ್ಯಮಿ ಸುದೀಪ್ ರೈ ನೆಲ್ಯಾಡಿ ಸಾವನ್ನಪ್ಪಿದ ಪ್ರಕರಣದಲ್ಲಿ ಈತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಮೃತನ ಪೋಷಕರು ಗಂಭೀರ ಆರೋಪ ಮಾಡುತ್ತಿರುವ ಬೆನ್ನಲ್ಲೇ ತಾನೂ ಕೂಡ ಅದೇ ಯುವತಿಯಿಂದಾಗಿ ಮೋಸ ಹೋಗಿದ್ದಾಗಿ ಯುವಕನೋರ್ವ ಮುಂದೆ ಬಂದಿದ್ದಾನೆ.
ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್ ಮಟಪಾಡಿ ಬ್ರಹ್ಮಾವರ ಇವರ ವತಿಯಿಂದ ಮಟಪಾಡಿ ಪ್ರೀಮಿಯರ್ ಲೀಗ್ ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಜರುಗಿತು.
ಚಲಿಸುತ್ತಿದ್ದ ರೈಲಿನಿಂದ ಹೊರ ಜಿಗಿಯಲು ಯತ್ನಿಸುತ್ತಿದ್ದ ಯುವಕನೋರ್ವ ತಪಾಸಣಾಧಿಕಾರಿಯ ಸಮಯಪ್ರಜ್ಞೆಯಿಂದ ಬದುಕುಲಿದ ಘಟನೆ ಉಡುಪಿಯ ಇನ್ನಂಜೆಯಲ್ಲಿ ನಡೆದಿದೆ.