Showing 20 of 20442 articles • Page 135 of 1023
ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಗ್ರಾಮ ಪಂಚಾಯತಿ ಸ್ವಚ್ಛತಾಗಾರರ ದಿನಾಚರಣೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿದರು.
ಮಾಜಿ ಸಚಿವ ಹಾಗೂ ಶಾಸಕನಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಕ್ಷೇತ್ರದ ಅಭಿವೃದ್ಧಿ ಕಾರ್ಯ ಮಾಡುವುದು ಹೊಸತೇನು ಅಲ್ಲ. ಆದರೆ ಬಂಟ್ವಾಳ ಶಾಸಕರು ವಿಧಾನಸಭೆಯಲ್ಲಿ ಮಂಡಿಸಿರುವ ಹಕ್ಕು ಚ್ಯುತಿಯಿಂದ ನನಗೆ ನೋವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಯಮುನಾನಗರದಲ್ಲಿ ಸಿನಿಮೀಯ ಮಾದರಿಯ ಕಳ್ಳತನವೊಂದು ನಡೆದಿದೆ. ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ವಾಹನವೊಂದು ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ, ಬೈಕ್ನಲ್ಲಿ ಬಂದ ಕಳ್ಳನೊಬ್ಬ ಅತ್ಯಂತ ವೇಗವಾಗಿ ಮತ್ತು ಆತ್ಮವಿಶ್ವಾಸದಿಂದ ಸಿಲಿಂಡರ್ ಎಗರಿಸಿದ್ದಾನೆ.
ಐಪಿಎಲ್ 2026ರ ಕಹಳೆ ಮೊಳಗುವ ಹೊತ್ತಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ತಂಡದ ಆಧಾರಸ್ತಂಭ, ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಎಂ.ಎಸ್. ಧೋನಿ ಅವರು ಕಾಲಿನ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಕನಿಷ್ಠ ಎರಡು ವಾರಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್ ಅಹ್ಮದ್ ಬಂಧಿತ ಆರೋಪಿ. ಈತ ಶಿರೂರು ಗ್ರಾಮದ ಕೋಣಮಕ್ಕಿ ಎಂಬಲ್ಲಿ ಪಾತಿಮಾ ಎಂಬವರ ಮನೆಯಲ್ಲಿ ಕಳ್ಳತನ ಯತ್ನ ನಡೆಸಿದ್ದನು.
ನಿರ್ಭೀತ ಹಿಂದೂ ತಾಯಿಯ ಮೇಲೆ ಬಾಂಗ್ಲಾದೇಶದ ಇಸ್ಲಾಂವಾದಿಗಳಿಂದ ಕಲ್ಲೆಸೆದು ಹಲ್ಲೆ ಮಾಡಲಾಗಿದೆ. ತನ್ನ ಮುಗ್ಧ ಮಕ್ಕಳನ್ನು ಮತ್ತು ಮನೆಯನ್ನು ರಕ್ಷಿಸಲು ಅವಳು ಆಯುಧ ಹಿಡಿದು ಹೋರಾಡಿದ ದೃಶ್ಯ ಇದೀಗ ವೈರಲ್ ಆಗಿದೆ. ಇಸ್ಲಾಂಗೆ ಮತಾಂತರಗೊಳ್ಳಲು ನಿರಾಕರಿಸಿದ ನಂತರ ಈ ಘಟನೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಈಶ್ವರನ ಹೂದೋಟ ಎಂದೇ ಬಣ್ಣಿಸಲಾಗುವ ಪ್ರಶಾಂತ, ಪ್ರಕೃತಿಯ ಸೊಬಗು, ಹಸಿರು ಸಿರಿಯ ಮಧ್ಯೆ ಇರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಾರ್ಚ್ 30 ರಿಂದ ಏಪ್ರಿಲ್ 6 ವರೆಗೆ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದೆ.
ಇಂಡಿಗೋ ವಿಮಾನವು ಶನಿವಾರ ಬೆಳಿಗ್ಗೆ 161 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು, ಇದರಿಂದಾಗಿ ಅಧಿಕಾರಿಗಳು ಪೂರ್ಣ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ಹೆಮ್ಮಾಡಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ನಡುವೆ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆಯೇ ನಾನಾ ಭಂಗಿಯಲ್ಲಿ ‘ಸರ್ಕಸ್’ ಮಾಡಿದ್ದ ಪುಂಡನ ವಿಡಿಯೋ ವೈರಲ್ ಆಗಿದ್ದು, ಇದೀಗ ವಿಡಿಯೋ ಪರಿಶೀಲಿಸಿದ ಕುಂದಾಪುರ ಸಂಚಾರ ಠಾಣೆ ಪೊಲೀಸರು ಸವಾರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಫೋಟೋ ತೆಗೆದುಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬರು ತಮ್ಮ ಹಿಜಾಬ್ ತೆಗೆದಿದ್ದಕ್ಕೆ, ಅವರ ಪತಿಯೇ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ.
ಮಾ.30 ರಂದು ನಡೆಯುವ ಐತಿಹಾಸಿಕ ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ರಥೋತ್ಸವದ ವೇಳೆ ಡ್ರೋನ್ ಕ್ಯಾಮೆರಾಗಳ ಹಾರಾಟವನ್ನು ನಿಷೇಧಿಸಿ ಆದೇಶ ನೀಡಲಾಗಿದೆ.
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಾ. 30 ರಂದು ನಡೆಯಲಿರುವ ಪುರಾಣ ಪ್ರಸಿದ್ಧ ಗೌತಮ ಪಂಚ ಮಹಾ ರಥೋತ್ಸವದ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆಗಳು ನಡೆದು ಅದರಲ್ಲೂ ಮುಖ್ಯವಾಗಿ ಪಂಚ ಮಹಾ ರಥಗಳನ್ನು ಕಟ್ಟುವ ಹಾಗೂ ಶೃಂಗರಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಪಾರ್ಸೆಲ್ ತಲುಪಿಸಲು ಚಲಿಸುವ ರೈಲಿನ ಪಕ್ಕದಲ್ಲಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿ, ವೀಡಿಯೊ ವೈರಲ್!
ಸಕಲೇಶಪುರ ತಾಲ್ಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದ ಫೋಟೋಗ್ರಾಫರ್ಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಜೈಪುರದಲ್ಲಿ ಸಣ್ಣ ಅಪಘಾತವೊಂದು ವಿಕೋಪಕ್ಕೆ ತಿರುಗಿದ್ದು, ಯುವತಿ ರಸ್ತೆಯಲ್ಲೇ ಬೈಕ್ ಸವಾರನ ವಾಹನವನ್ನು ಜಖಂಗೊಳಿಸಿರುವ ಘಟನೆ ನಡೆದಿದೆ.
ಅನಂತೇಶ್ವರ ದೇವಾಲಯದಲ್ಲಿ ರಾಮೋತ್ಸವದ ಪ್ರಯುಕ್ತ ರಥೋತ್ಸವ ಜರಗಿತ್ತು ಇದರ ಅಂಗವಾಗಿ ದೇವರಿಗೆ ಆರತಿಯನ್ನು ಬೆಳಗುದರ ಮೂಲಕ ರಥೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು.
ಹುಸಿಬಾಂಬ್ ಸಂದೇಶ ನೀಡಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಸಿಂಥೆಟಿಕ್ ಡ್ರಗ್ಸ್ ಮೈಸೂರಿನಲ್ಲಿ ಪತ್ತೆಯಾಗಿದೆ. ಹುಣಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಹುಣಸೂರು ತಾಲೂಕಿನ ದಾಸನಪುರ ರತ್ನಪುರಿ ಮಾರ್ಗಮಧ್ಯದ ತೋಟದಲ್ಲಿ ಪತ್ತೆಯಾಗಿದೆ.
ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ಹುರುಳಿಗೆ ಸಿಲುಕಿ ಗಂಡು ಹುಲಿಯೊಂದು ಮೃತ ಪಟ್ಟ ಘಟನೆ ಹೆಚ್.ಡಿ.ಕೋಟೆ ತಾಲೋಕಿನ ಅಗಸನಹುಂಡಿಯಲ್ಲಿ ನಡೆದಿದೆ.
ಈ ಮೊದಲು ಜಾನುವಾರು ಪ್ರಾಂಗಣದಲ್ಲಿ ವಾರದ ಸಂತೆ ನಡೆಯುತ್ತಿತ್ತು. ಕೋವಿಡ್ ಬಂದ ಸಂದರ್ಭದಲ್ಲಿ ಶುಕ್ರವಾರದ ಸಂತೆಯನ್ನು ಸ್ಥಗಿಸಿಗೊಳಿಸಲಾಗಿತ್ತು. ರೈತರ ಬೇಡಿಕೆ ಮೇರೆಗೆ ಇಂದಿನಿಂದ ಶುಕ್ರವಾರದ ಸಂತೆಯನ್ನು ಪ್ರಾರಂಭಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು.