Showing 20 of 19151 articles • Page 137 of 958
ಬಿಗ್ಬಾಸ್ ಕನ್ನಡ ಸೀಸನ್ 12ರ ಪಟ್ಟ ಗೆದ್ದ ಗಿಲ್ಲಿ ಶಿವರಾಜ್ಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ನಗರದ ಲಾಡ್ಜ್ ಒಂದರ ಹಿಂಭಾಗದ ಪಾಳುಬಿದ್ದ ಪಾರ್ಕ್ನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ ದೇವೇಗೌಡರಿಗೆ ಕೋಕ್ ಕೊಡ್ತಾರೆ ಎಂಬ ಚರ್ಚೆ ವಿಚಾರವಾಗಿ ಮೈಸೂರಿನಲ್ಲಿ ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಬಾಕಿ ಇರುವ ಬಾಡಿಗೆ ಕಟ್ಟುವಂತೆ ಒತ್ತಾಯಿಸಿದ ಮಾಲೀಕನ ಮನೆ ಬಾಗಿಲಿಗೆ ಬಾಡಿಗೆದಾರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜನತಾ ಬಡಾವಣೆಯಲ್ಲಿ ನಡೆದಿದೆ.
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.
ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವ; ಸಾವಿರಾರು ಭಕ್ತರು ಭಾಗಿ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸಿದ್ದಾಪುರ ಏತ ನೀರಾವರಿ ಯೋಜನೆಗೆ ಸರ್ಕಾರದಿಂದ ತಡೆ ಬಿದ್ದಿದೆ. ಇದರ ವಿರುದ್ಧ ರೈತ ಸಂಘ, ಬಿಜೆಪಿ ಮತ್ತು 8 ಗ್ರಾಮದ ಗ್ರಾಮಸ್ಥರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.
ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ ಟ್ರಾಫಿಕ್ ಸಮಸ್ಯೆ ತಪ್ಪಿಸಲು ತುರ್ತಾಗಿ ತಾತ್ಕಾಲಿಕ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿಯವರು ಭಗವಾದ್ವಜದ ಮೂಲಕ ಪರ್ಯಾಯಕ್ಕೆ ಚಾಲನೆ ನೀಡಿದನ್ನು ರಮಾನಾಥ್ ರೈ ಖಂಡಿಸಿದ್ದಾರೆ.
ಖಾಸಗಿ ಆಪ್ ಡೌನ್ ಲೋಡ್ ಮಾಡಿ ಟ್ರೇಡಿಂಗ್ ಮಾಡಿದ ವ್ಯಕ್ತಿಗೆ 47.44 ಲಕ್ಷ ವಂಚನೆಯಾಗಿದೆ. ಮೈಸೂರಿನ ಜೆಪಿ ನಗರ ನಿವಾಸಿ ಸಂತೋಷ್ ಹಣ ಕಳೆದುಕೊಂಡವರು.
ಮೈಸೂರು ಜಿಲ್ಲೆಯ ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ವರ್ಗಾವಣೆಯಾಗಿದ್ದಾರೆ. ಬೆಂಗಳೂರಿನ ವಿಕಾಸಸೌಧಕ್ಕೆ ವರ್ಗಾವಣೆ ಆಗಿದೆ. ಶಿವಕುಮಾರ್ ಕಾಸ್ನೂರು ಸ್ಥಳಕ್ಕೆ ರಾಮನಗರ ತಹಶೀಲ್ದಾರ್ ಸ್ಮಿತಾ ರನ್ನ ನಿಯೋಜಿಸಲಾಗಿದೆ.
ಡ್ರಗ್ಸ್ ಸೇವನೆಯಿಂದ ಒಂದು ಜೀವನ ಸರ್ವನಾಶವಾಗುವುದರ ಜೊತೆಗೆ ಕುಟುಂಬವನ್ನೇ ಬಲಿ ತೆಗೆದುಕೊಳ್ಳುತ್ತದೆ.
ಹಳ್ಳಿಯೊಂದರ ಘಟನೆಯಲ್ಲಿ ಪಾದ್ರಿಯೊಬ್ಬರು ತೀವ್ರ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಅವರ ಪತ್ನಿ ಹೇಳಿಕೊಂಡ ನಂತರ, ಒಡಿಶಾದಿಂದ ಬಂದಿರುವ ಆತಂಕಕಾರಿ ಆರೋಪವು ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಧಾರ್ಮಿಕ ಅಸಹಿಷ್ಣುತೆಯ ಬಗ್ಗೆ ಮತ್ತೆ ಕಳವಳವನ್ನುಂಟುಮಾಡಿದೆ.
ಕೇರಳದ ಕೋಝಿಕ್ಕೋಡ್ನ ಪೊಲೀಸರು 35 ವರ್ಷದ ‘Content creator’ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಅಡಿಯಲ್ಲಿ ಸೆಕ್ಷನ್ 108 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆಯೋಜಿಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಭಾಗವಹಿಸಿ ವಿಶಿಷ್ಟ ಶ್ರೇಣಿ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಉತ್ತಮ ಸಾಧನೆಯನ್ನು ಮಾಡಿರುತ್ತಾರೆ.
CFAL ಸಂಸ್ಥೆಯ II PU ವಿಭಾಗದ ಇಬ್ಬರು ವಿದ್ಯಾರ್ಥಿಗಳು, ಮ್ರಿನಾಲ್ ಡಿ ಭಟ್ ಮತ್ತು ಅಕ್ಷಿತ್ ರಾಮ್ ಕೆ, ಭಾರತೀಯ ರಾಷ್ಟ್ರೀಯ ಖಗೋಳಶಾಸ್ತ್ರ ಒಲಿಂಪಿಯಾಡ್ (INAO) 2026 ಗೆ ಯಶಸ್ವಿಯಾಗಿ ಆಯ್ಕೆಯಾಗಿದ್ದಾರೆ. ಅವರು ರಾಷ್ಟ್ರೀಯ ಪ್ರಮಾಣಿತ ಖಗೋಳಶಾಸ್ತ್ರ ಪರೀಕ್ಷೆ (NSEA) 2026 ಅಲ್ಲಿ ಉತ್ತೀರ್ಣರಾಗಿದ್ದಾರೆ.
ದೇಶದ ಆರ್ಥಿಕ ವ್ಯವಸ್ಥೆಯನ್ನು ಸಹಕಾರಿ ಕ್ಷೇತ್ರದಿಂದ ಪ್ರಗತಿ ಪಥದತ್ತ ಕೊಂಡೊಯ್ಯಲು ಸಾಧ್ಯವಿದೆ.
ಭಾರತದ ಸ್ಟಾರ್ ಶಟ್ಲರ್ ಸೈನಾ ನೆಹ್ವಾಲ್ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ನಿಂದ ನಿವೃತ್ತಿ ಘೋಷಿಸಿದ್ದಾರೆ.
ಫೇಸ್ಬುಕ್ನಲ್ಲಿ ಪ್ರಸಾರವಾದ ಆಕ್ಷೇಪಾರ್ಹ ವಿಡಿಯೋದ ವಿರುದ್ಧ ಖ್ಯಾತ ಸಾಮಾಜಿಕ ಕಾರ್ಯಕರ್ತ ಮತ್ತು ವಿಚಾರವಾದಿ ನರೇಂದ್ರ ನಾಯಕ್ ಉರ್ವಾ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಿಸಿದ್ದಾರೆ.
ನಗರದ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಥಳದಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್ಗೆ ಭಾರೀ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ.