Showing 20 of 19151 articles • Page 139 of 958
ಕನ್ನಡ ಭವನ ರಜತ ಸಂಭ್ರಮದ ಭವ್ಯವೇದಿಕೆಯಲ್ಲಿ ಚಿತ್ರ ಕಲಾವಿದ ಆಶಿಶ್ ಎಂ ರಾವ್ ಗೆ ಅಂತರ ರಾಜ್ಯ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ಅನ್ನು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಹೊಸ ವರ್ಷದ ಹಾಗೂ ಸಂಕ್ರಾಂತಿ ಹಬ್ಬದ ಅಂಗವಾಗಿ 20ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ಜನವರಿ 18ರ ಭಾನುವಾರದಂದು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನವೆಂಬರ್ 2025ರಲ್ಲಿ ಕರ್ನಾಟಕ ಸರ್ಕಾರದಿಂದ ಹೊಯ್ಸಳ ಶೌರ್ಯ ಪ್ರಶಸ್ತಿ ಪಡೆದ ಮಾಸ್ಟರ್ ದೀಪೇಶ್ ದೀಪಕ್ ಶೆಣೈ , ಮಾರ್ಚ್–ಏಪ್ರಿಲ್ 2026ರ SSLC ಪರೀಕ್ಷೆಗೆ ತಯಾರಾಗುತ್ತಿರುವ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಸರಬರಾಜು ಒದಗಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಆಗಬೇಕೆಂಬುದು ಸಾರ್ವಜನಿಕರ ಬಹುದಿನಗಳ ಬೇಡಿಕೆ.
ಪುತ್ತಿಗೆ ಮಠದ ಪರ್ಯಾಯದ ಕೊನೆಯ ದಿನವಾದ ಶನಿವಾರ ಸಂಪ್ರದಾಯದಂತೆ ಪಾಕಶಾಲೆಯಲ್ಲಿ ಉಳಿಕೆಯಾದ ಆಹಾರ ಪದಾರ್ಥಗಳನ್ನು ಭಕ್ತರು ಸೂರೆ ಮಾಡಲು (ಕೊಂಡೊಯ್ಯಲು) ಅವಕಾಶ ನೀಡಲಾಯಿತು.
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮೊದಲ ಮಹಾಪೂಜೆ ನಡೆಸಿದರು.
ಪ್ರಥಮ ಬಾರಿಗೆ ಕೃಷ್ಣಪೂಜಾ ದೀಕ್ಷೆ ಪಡೆದು ಪರ್ಯಾಯ ಸ್ವೀಕರಿಸಿದ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಸರ್ವಜ್ಞಪೀಠಾರೋಹಣ ಮಾಡಿದರು.
ನಿರ್ದಿಗಂತ ವತಿಯಿಂದ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಮಕ್ಕಳ ನಾಟಕೋತ್ಸವಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಸ್ವಾಮಿ ವಿವೇಕಾನಂದರ ಜನ್ಮ ದಿನದ ಸಂದರ್ಭದಲ್ಲಿ ಆಚರಿಸಲಾದ ರಾಷ್ಟ್ರೀಯ ಯುವ ದಿನ 2026 ಅನ್ನು ಅನುಸಂಧಾನಿಸಿ, ಯೆನೆಪೋಯ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ (YNYSCH) ಯ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕವು ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಾಗಾರವನ್ನು ಆಯೋಜಿಸಿತು.
ರೋಸ್ ಕಾರ್ಯಕ್ರಮಕ್ಕೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತೆಯೂ ಆಗಿರುವ ಮಹಿಳೆಗೆ ವ್ಯಕ್ತಿಯೊಬ್ಬ ಬೀಯರ್ ಬಾಟಲಿಯಲ್ಲಿ ಹಲ್ಲೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರಿನಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದರೂ ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
ಕಳೆದ ಅಕ್ಟೋಬರ್ನಿಂದ ಎಂಸಿಎಫ್ ಕಾರ್ಖಾನೆಯ ಹೆಸರು ಮಾಯವಾಗಿದೆ. ‘ಎಂಸಿಎಫ್’ ಎಂಬ ಐತಿಹಾಸಿಕ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಬಾರದು.
ಕಣಿಪುರ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ನಡೆದ ಬೆಡಿ ಮಹೋತ್ಸವದ ಹಿನ್ನೆಲೆಯಲ್ಲಿ ಬೆಡಿ ಉತ್ಸವ ಸಮಿತಿ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ಸೋಮವಾರ ವಾಯುವ್ಯ ಕಾಶ್ಮೀರದ ಲಡಾಖ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟರಾದ ಸುನೀಲ್ ಶೆಟ್ಟಿ ಅವರು ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಸುಳ್ಯದ ಕುಲ್ಕುಂದದಲ್ಲಿ ಇಂದು ಮಧ್ಯಾಹ್ನ ಇಬ್ಬರು ಯುವಕರು ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ.
ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ( 52) ಎಂದು ತಿಳಿದುಬಂದಿದೆ.
ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪೆಡ್ಲೆರ್ ಗಳನ್ನೂ ಬಂಧಿಸಿ ಈಗಾಗಲೇ ಹೆಡೆಮುರಿಕಟ್ಟಿದ್ದಾರೆ.ನಗರ ಪೊಲೀಸ್ ಆಯುಕ್ತರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ.
ರಾಜ್ಯದ ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿ ಮತ್ತುರಾಜ್ಯದ ಜನರನ್ನು ಭಯಗೊಸಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ದ್ವೇಷ ಭಾಷಣ ಮಸೂದೆ ತರಲು ಉದ್ದೇಶಿಸಿದೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಆರೋಪಿಸಿದ್ದಾರೆ.
ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯಿದೀನ್ ಮುಖ್ಯ ಪೋಷಕರಾಗಿರುವ BCCIಯ ವಾರ್ಷಿಕ ಮಹಾಸಭೆಯು ರವಿವಾರ ದುಬೈಯ ಜುಮೈರಾದ ಕ್ರೌನ್ ಪ್ಲಾಝಾ ಹೊಟೇಲಿನಲ್ಲಿ ನಡೆಯಿತು.