Showing 20 of 20311 articles • Page 139 of 1016
ವಾರಣಾಸಿಯ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ನಡೆಸುತ್ತಿರುವ ಜನರ ಗುಂಪೊಂದು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ದೂರು ದಾಖಲಿಸಿದ್ದು, 14 ಜನರನ್ನು ಬಂಧಿಸಲಾಗಿದೆ.
ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧದಿಂದ ಯುಎಇಯಲ್ಲಿ ಸಂಕಷ್ಟಕ್ಕೀಡಾಗಿದ್ದ ಪ್ರವಾಸಿ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸುವ ಜೊತೆಗೆ ವಿಸಿಟ್ ವೀಸಾ ಮೂಲಕ ಉದ್ಯೋಗವನ್ನು ಹರಸಿಬಂದ ಜನರಿಗೆ ವಸತಿ, ಊಟದ ವ್ಯವಸ್ಥೆ ಮಾಡುವ ಮೂಲಕ ‘ಕನ್ನಡಿಗಾಸ್ ಹೆಲ್ಪ್ ಲೈನ್’ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆ.
ಭೂ ವ್ಯವಹಾರದ ವ್ಯಾಜ್ಯದ ಕೋಪದಿಂದ ಕಾರಿನಲ್ಲಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊ ತೆದು ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ಮಂಗಳವಾರ (ಮಾ.17) ನಡೆದಿದೆ.
ದೈವ ಪಾತ್ರಿ ಸುಶಾಂತ್ ಬಂಗೇರ ಅವರ ಧರ್ಮದ ಕುರಿತು ಸಂಶೋಧಕಿ ರತಿ ಮಾಡಿರುವ ಆರೋಪಕ್ಕೆ ಈಗ ಸುಶಾಂತ್ ಅವರ ತಾಯಿ ಸವಿತಾ ಅವರು ಖಡಕ್ ಉತ್ತರ ನೀಡಿದ್ದಾರೆ.
ಕರಾವಳಿಯ ದೈವಾರಾಧನಾ ಪರಂಪರೆಯಲ್ಲಿ ಜಾತೀಯತೆ ಮತ್ತು ಧರ್ಮದ ಕುರಿತಾದ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ದೈವ ಪಾತ್ರಿ ಸುಶಾಂತ್ ಬಂಗೇರ ಅವರು ಕ್ರೈಸ್ತ ಸಮುದಾಯಕ್ಕೆ ಸೇರಿದವರು ಮತ್ತು ಅವರಿಂದ ದೈವ ನರ್ತನ ಸೇವೆ ನಡೆಸಿರುವುದು ದೈವಾರಾಧನಾ ಪರಂಪರೆಗೆ ಮಾಡಿದ ಘೋರ ಅಪಚಾರ ಎಂದು ಸಂಶೋಧಕಿ ರತಿ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.
ಇರಾನ್ನ ಪ್ರಭಾವಿ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಮುಖ್ಯಸ್ಥ ಅಲಿ ಲಾರಿಜಾನಿ, ಟೆಹ್ರಾನ್ ಬಳಿಯ ತಮ್ಮ ಮಗಳ ಮನೆಯ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಗಳು ಮಂಗಳವಾರ ದೃಢಪಡಿಸಿದ್ದಾರೆ.
ನಿಯಮಗಳನ್ನು ಮೀರಿ ಎಲ್ಲೆಂದರಲ್ಲಿ ಪೊಲೀಸ್ ಚೌಕಿಗಳನ್ನು ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಎಷ್ಟು ಸರಿ? ಎಂದು ಶಾಸಕ ವೇದವ್ಯಾಸ ಕಾಮತ್ ಅಧಿವೇಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುವ ಮುನ್ಸೂಚನೆ ಇದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆಯ ಅಬ್ಬರ ನಗರದ ಹಲವೆಡೆ ಮಂಗಳವಾರ ತಡರಾತ್ರಿವರೆಗೆ ಮಳೆ ಸುರಿದಿದೆ.
ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿವಿಯ ಸ್ಕೂಲ್ ಆಫ್ ಆರ್ಟ್ಸ್ ಆಂಡ್ ಹ್ಯೂಮ್ಯನಿಟಿಸ್, ಸ್ಕೂಲ್ ಆಫ್ ಇಂಜಿನಿಯರಿಂಗ್, ಸ್ಕೂಲ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಹಾಗೂ ಕೇರಳದ ಕುತ್ತಿಕ್ಕಾಣಂನ ಮಾರ್ ಬಸೆಲಿಯೊಸ್ ಕ್ರಿಶ್ಚಿಯನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಸಹಯೋಗದಲ್ಲಿ “ವಲಯಾಕಾರದ ಆರ್ಥಿಕತೆ: ನವೀನತೆ, ನೀತಿ ಮತ್ತು ಕಾರ್ಯಯೋಜಿತ ಬಹುಪ್ರಾಂತ್ಯ ದೃಷ್ಟಿಕೋನಗಳು” ಎಂಬ ವಿಷಯದ ಮೇಲೆ ಎರಡು ದಿನಗಳ ಅಂತರ್ ವಿಭಾಗೀಯ ಅಂತರರಾಷ್ಟ್ರೀಯ ಸಮ್ಮೇಳನ (IDIC 2026) ಎಲ್ಸಿಆರ್ಐ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿ ಇನ್ಸ್ಟಿಟ್ಯೂಟ್ ಫಾರ್ […]
“ವಸಾಹತು ಮನೋಭಾವದಿಂದ ಭಾರತೀಯತೆಯೆಡೆಗೆ ಒಂದು ಚಿಂತನೆ”ಎಂಬ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವು ಮಾ.20 ರಂದು ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಅಜಾದ್ ಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ತಿಳಿಸಿದ್ದಾರೆ.
ನವೀನ ವಿಚಾರಗಳನ್ನು ಕ್ರಿಯಾತ್ಮಕ ಮೂಲ ಮಾದರಿಗಳಾಗಿ ಪರಿವರ್ತಿಸುವ ಗುರಿಯನ್ನು ಹೊಂದಿರುವ 24 ಗಂಟೆಗಳ ಹ್ಯಾಕಥಾನ್ ಪ್ರೋಟೋಥಾನ್ 2026 ಅನ್ನು ಮಾರ್ಚ್ 13 ಮತ್ತು 14, 2026 ರಂದು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.
ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸಿದ ಎಸಿಪಿ ವರದಿ ಸಲ್ಲಿಸಿದ್ದಾರೆ. ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ವಿಧಾನಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ ಹೆಬ್ಬಾಳ್ಳರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಶ್ರೀಮತಿ ಶಾಮ್ಲಾ ಇಟ್ಬಾಲ್ ಭಾ.ಆ.ಸೇ. ಇವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಭಾಗವಹಿಸಿದ ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರರ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ್ ಕುಮಾರ್ ಶೆಟ್ಟಿ ಹಾಗೂ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸೋಮನಾಥ್ ಮಹಾಜನ್ ಶೆಟ್ಟರ್ ಮನವಿ ಸಮರ್ಪಣೆ ಮಾಡಿ ಸಚಿವೆ ಅವರಿಗೆ ವಿನಂತಿ ಮಾಡಿದರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ (ಎ3) ಪರ ವಕೀಲರಿಗೆ ಸಾಕ್ಷ್ಯ ತಿದ್ದಿದ ಆರೋಪದ ಮೇರೆಗೆ 5,000 ರೂ. ದಂಡ ವಿಧಿಸಲಾಗಿದೆ.
ಜಗಳೂರಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ.
ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ನಗರದ ಅಮೃತ್ ಗಾರ್ಡನ್ ನಲ್ಲಿ ಇಂದು ಆಯೋಜಿಸಲಾಗಿತ್ತು.
ಜಿಲ್ಲೆಯ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಮಗುಚಿಬಿದ್ದು, ಗ್ಯಾಸ್ ಸೋರಿಕೆ (ಲೀಕೇಜ್) ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು.
ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಅವರು ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸೋಮವಾರ ಸಂಭವಿಸಿದೆ.