Showing 20 of 20319 articles • Page 142 of 1016
ಇರಾನ್ ಡ್ರೋನ್ ದಾಳಿಗೆ ದುಬೈ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.
ತಾಲ್ಲೂಕಿನಲ್ಲಿ ಚಿರತೆ ಆತಂಕ ಹೆಚ್ಚಾಗಿದ್ದು, ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನೆಹುಂಡಿ ಕೂಡ್ಲುರು ರಸ್ತೆ ಬಳಿ ಚಿರತೆ ಪ್ರತ್ಯಕ್ಷವಾಗಿದೆ.
ಮಗುವಿಗೆ ಜನ್ಮ ನೀಡಿ ಮಗುವನ್ನು ನದಿಗೆ ಎಸೆದಿರುವ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ.
ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 169ಎ ಚತುಷ್ಪಥ ಕಾಮಗಾರಿ ಈಗಿರುವ ರಸ್ತೆಯನ್ನೇ ಅಗಲೀಕರಣಗೊಂಡು ಸಾಗಿದರೆ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಗರ್ಭಗುಡಿ, ರಥಬೀದಿ, ವಾಸ್ತುವಿಗೆ ಸಮಸ್ಯೆಯಾಗುತ್ತದೆ.
ಈ ಬಾರಿಯ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಅನುದಾನ ಒದಗಿಸದೇ ಮಲತಾಯಿ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರದ ಹಳೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.
ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಒಮ್ಮತದಿಂದ ನಡೆಯಬೇಕು ಎಂಬುದು ನಮ್ಮ ಉದ್ದೇಶ. ನಮಗೆ ಹಾಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಲ್ಲದೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಇವರಿಬ್ಬರ ಸಹಕಾರ ಕೂಡಾ ನಮಗೆ ಅಗತ್ಯವಿದೆ. ರಾಜಕೀಯ ರಹಿತವಾಗಿ ದೇವಳದ ಜೀರ್ಣೋದ್ಧಾರ ನಡೆಯಬೇಕು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜ್ ಕುಮಾರ್ ಶೆಟ್ಟಿ ದೊಡ್ಮನೆ ತಿಳಿಸಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ 2026- 28 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಎಸ್ ಡಿ ಎಮ್ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟವು ಶನಿವಾರ ಸಂಜೆ ಪಾಣೆಮಂಗಳೂರು ಸಾಗರ್ ಅಡಿಟೋರಿಯಂನಲ್ಲಿ ನಡೆಯಿತು.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ದೇಶದಲ್ಲಿ ಗ್ಯಾಸ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಉಂಟಾಗಬಹುದು ಎಂಬ ಆತಂಕದ ನಡುವೆಯೇ, ದೇಶದಲ್ಲಿ ಎಲ್ಲಿಯೂ ಗ್ಯಾಸ್ ಅಥವಾ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಡುಗೆ ಅನಿಲದ ಕೊರತೆ ಹೆಚ್ಚಾಗುತ್ತಿದ್ದಂತೆ ಸಮಸ್ಯೆ ಗಂಭೀರವಾಗಿದೆ. ಕೆಲವು ಮಧ್ಯವರ್ತಿಗಳು ಹೆಚ್ಚುವರಿ ಹಣ ನೀಡುವವರಿಗೆ ಮಾತ್ರ ಸಿಲಿಂಡರ್ ಒದಗಿಸುತ್ತಿರುವುದಾಗಿ ಆರೋಪ ಕೇಳಿಬಂದಿದೆ. ಬುಕ್ಕಿಂಗ್ ಪ್ರಕ್ರಿಯೆಯನ್ನು ತಡೆದು ಗ್ರಾಹಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಏಜೆನ್ಸಿಗಳ ವಿರುದ್ಧ ದೂರುಗಳೂ ಬಂದಿವೆ. ಹೀಗಾಗಿ ಅಧಿಕಾರಿಗಳು ಅಕ್ರಮ ಸಂಗ್ರಹದ ವಿರುದ್ಧ ಕ್ರಮ ಆರಂಭಿಸಿದ್ದಾರೆ.
ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾದ ನೇತೃತ್ವದಲ್ಲಿ ಶಿವಾಜಿ ಸಂಗಮ ಕಾರ್ಯಕ್ರಮವನ್ನು ಮಾ.15ರಂದು ಸಂಜೆ 4.30ಕ್ಕೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಲತ ಹೇಳಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಣ ಕ್ಷೇತ್ರದ ನೈತಿಕತೆಯನ್ನೇ ಪ್ರಶ್ನಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಕೇವಲ ಎರಡು ನಿಮಿಷ ತಡವಾಗಿ ಬಂದ ಕಾರಣಕ್ಕೆ, ಮೊದಲ ತರಗತಿಯ ಪುಟ್ಟ ಮಗುವನ್ನು ಸುಮಾರು ಎರಡು ಗಂಟೆಗಳ ಕಾಲ ಸುಡುವ ಬಿಸಿಲಿನಲ್ಲಿ ನಿಲ್ಲಿಸುವ ಮೂಲಕ ಶಾಲೆ ಅಮಾನವೀಯ ಶಿಕ್ಷೆ ನೀಡಿದೆ.
ನಗರದ ಹೊರವಲಯದ ಏಜೀಸ್ ಆಟೋ ಗ್ಯಾಸ್ ಪಂಪ್ನಲ್ಲಿ ಎಲ್ಪಿಜಿ ದರ ಏಕಾಏಕಿ 18 ರೂಪಾಯಿ ಏರಿಕೆಯಾಗಿರುವುದು ಆಟೋ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ.
ಉಡುಪಿ ಜಿಲ್ಲೆಯ ಮೂವರು ರೌಡಿ ಶೀಟರ್ಗಳಿಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ. ಕಾಪು ತಾಲೂಕಿನ ನಡ್ಸಾಲು ಗ್ರಾಮದ ಜಬ್ಬಾರ್ ಹುಸೇನ್, ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಸಂದೇಶ್ ಹಾಗೂ ಹಿರಿಯಡಕ ದರ್ಖಾಸು ಪಾಪುಜೆ ನಿವಾಸಿ ಸುಶಾಂತ್ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಮಾರ್ಚ್ 12ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ಎಂದೂ ಕೇಳರಿಯದ ಘಟನೆಯೊಂದು ಸಂಭವಿಸಿದ್ದು, ಪವಿತ್ರ ನೇಮದ ಸಂದರ್ಭದಲ್ಲಿ ಅನ್ಯಕೋಮಿನ (ಕ್ರಿಶ್ಚಿಯನ್) ವ್ಯಕ್ತಿಯನ್ನು ದೈವ ನರ್ತನ ಸೇವೆಗೆ ಬಳಿಸಿಕೊಳ್ಳುವ ಮೂಲಕ ಸನಾತನ ಕಟ್ಟುಕಟ್ಟಳೆಗಳನ್ನು ಗಾಳಿಗೆ ತೂರಲಾಗಿದೆ ಎಂದು ತುಳು ವಿದ್ವಾಂಸರು ಹಾಗೂ ಪಂಬದ ಸಮುದಾಯದ ನಂಶೋಧಕಿ ಡಾ. ರತಿ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನ ಪ್ರೆನ್ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಕುರಿತು ಸಮಗ್ರ ಮಾಹಿತಿ ನೀಡಿದರು.
ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಶುಕ್ರವಾರ ಕೆಎಸ್ಆರ್ಟಿಸಿ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಯಮರೂಪಿಯಾಗಿ ಬಂದ ಬಸ್ ಇವರ ಬದುಕನ್ನು ಬಲಿಪಡೆದಿದೆ.
ಕರಾವಳಿ ಭಾಗದ ಜನರ ದಶಕಗಳ ಬೇಡಿಕೆಯಾಗಿದ್ದ ಬೆಂಗಳೂರು-ಮಂಗಳೂರು ನಡುವಿನ ವೇಗದ ರೈಲು ಸಂಚಾರದ ಕನಸಿಗೆ ಈಗ ‘ವಂದೇ ಭಾರತ್’ ರೂಪದಲ್ಲಿ ಹೊಸ ಆಯಾಮ ಸಿಕ್ಕಿತ್ತು. ಆದರೆ, ಇತ್ತೀಚೆಗೆ ದಕ್ಷಿಣ ಪಶ್ಚಿಮ ರೈಲ್ವೆ ಬಿಡುಗಡೆ ಮಾಡಿರುವ ಯಶವಂತಪುರ-ಮಡಗಾಂವ್ ವಂದೇ ಭಾರತ್ ರೈಲಿನ ಪ್ರಸ್ತಾವಿತ ವೇಳಾಪಟ್ಟಿ ಕರಾವಳಿ ಜನರಲ್ಲಿ ಅತೀವ ನಿರಾಸೆ ಮತ್ತು ಆಕ್ರೋಶವನ್ನು ಮೂಡಿಸಿದೆ.
ಇದೇ ಬರುವ ಮಾರ್ಚ್ 20 ನೇ ತಾರೀಕಿನಂದು ತುಳು ಪರಿಷತ್ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಂಟಿಯಾಗಿ ಆಯೋಜಿಸಲಿರುವ ಮೂರನೆಯ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನವನ್ನು ಶ್ರೀದೇವಿ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಎ. ಸದಾನಂದ ಶೆಟ್ಟಿಯವರು ಬಿಡುಗಡೆ ಮಾಡಿದರು.