Showing 20 of 20417 articles • Page 146 of 1021
ಪಶ್ಚಿಮ ಬಂಗಾಳದ ಭದ್ರಕಾಳಿ ಹೈಸ್ಕೂಲ್ನಲ್ಲಿ ಅಡುಗೆ ಅನಿಲದ (LPG) ತೀವ್ರ ಕೊರತೆಯಿಂದಾಗಿ ವಿಚಿತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯಲ್ಲಿ ಮಧ್ಯಾಹ್ನದ ಪೌಷ್ಟಿಕ ಆಹಾರ ತಯಾರಿಸಲು ಗ್ಯಾಸ್ ಇಲ್ಲದ ಕಾರಣ, ಶಾಲಾ ಆಡಳಿತ ಮಂಡಳಿಯು ಹೊರಗಿನ ಪಾನಿಪುರಿ ಮಾರಾಟಗಾರನ ಮೂಲಕ ವಿದ್ಯಾರ್ಥಿಗಳಿಗೆ ‘ಗೋಲ್ಗಪ್ಪಾ’ (ಪಾನಿಪುರಿ) ವಿತರಿಸಿದೆ.
ಬಿಗ್ ಬಾಸ್ ಕನ್ನಡ 12 ರನ್ನರ್ ಆಗಿ ಹೊರಹೊಮ್ಮಿದ ರಕ್ಷಿತಾ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬವನ್ನು ಉಡುಪಿಯ ಸಾಲಿಗ್ರಾಮದಲ್ಲಿರುವ ಹೊಸಬದುಕು ಆಶ್ರಮದಲ್ಲಿ ಆಚರಿಸಿ ಗಮನ ಸೆಳೆದರು. ಆಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿದ ಅವರು ನಿವಾಸಿಗಳಿಗೆ ಊಟದ ವ್ಯವಸ್ಥೆ ಮಾಡಿದ್ದು, ಅವರೊಂದಿಗೆ ಸಮಯ ಕಳೆಯುವ ಮೂಲಕ ಸಂತೋಷ ಹಂಚಿಕೊಂಡರು.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ನಡುವೆ, ದೇಶದ ಅಡುಗೆ ಅನಿಲ (LPG) ಅಗತ್ಯಗಳನ್ನು ಪೂರೈಸುವ ಪ್ರಮುಖ ಸರಕು ಹಡಗು ‘ಶಿವಾಲಿಕ್’ ಅಂತಿಮವಾಗಿ ಭಾರತದ ಗಡಿಯನ್ನು ಸುರಕ್ಷಿತವಾಗಿ ಪ್ರವೇಶಿಸಿದೆ.
ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ.
ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಐರ್ಲೆಂಡ್ನಲ್ಲಿ ತುರ್ತು ಲ್ಯಾಂಡ್ ಆಗಿದೆ.
ಈ ವರ್ಷ ಬೆಂಗಳೂರಿನಲ್ಲಿ ನೇರಳಾತೀತ (UV) ಸೂಚ್ಯಂಕವು 13 ರ ತೀವ್ರ ಮಟ್ಟವನ್ನು ತಲುಪಿದ್ದು, ನಗರದ ವೈದ್ಯರು ನಿವಾಸಿಗಳು ದೀರ್ಘಕಾಲದವರೆಗೆ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ತೀವ್ರವಾದ UV ವಿಕಿರಣವು ತಕ್ಷಣದ ಮತ್ತು ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಎಚ್ಚರಿಸಿದ್ದಾರೆ.
ಕೆ.ಆರ್ ನಗರ ತಾಲ್ಲೂಕು ಆಡಳಿತದ ವಿರುದ್ಧ ರೈತರು ಕೆ.ಆರ್ ನಗರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟಿಸಿದರು.
ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ಮಾ. 17ರಂದು ನಗರದ ಅಮೃತ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಗೌರವಾಧ್ಯಕ್ಷ ಕೆ. ರಘುಪತಿ ಭಟ್ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 66 ಎಲ್ಪಿಜಿ ಟ್ಯಾಂಕರ್ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿದಿದೆ.
“ಸಮಾಧಾನ ಮಹೋತ್ಸವ” ನಡೆಸಲು ಅವಕಾಶ ನೀಡಿದರೆ ತೀವ್ರ ಹೋರಾಟನ ನಡೆಸಲಾಗುತ್ತದೆ ಎಂದು ಹಿಂದೂ ಜಾಗರಣ ವೇದಿಕೆ ಎಚ್ಚರಿಕೆಯನ್ನು ನೀಡಿದೆ.
ಇಸ್ರೇಲ್ ಇರಾನ್ ಯುದ್ಧದಿಂದಾಗಿ ಮಂಗಳೂರು ಮತ್ತು ಗಲ್ಫ್ ಬಹುತೇಕ ರಾಷ್ಟ್ರ ಗಳೊಂದಿಗೆ ವಿಮಾನ ಸಂಚಾರ ರದ್ದುಗೊಂಡಿದ್ದರೂ ಮಂಗಳೂರು ಮತ್ತು ಮಸ್ಕತ್ ನಡುವಿನ ವಿಮಾನ ಯಾನ ಮುಂದುವರಿದಿದೆ.
ಉನ್ನತ ಶಿಕ್ಷಣದ ವೆಚ್ಚಗಳು ನಿರಂತರವಾಗಿ ಏರುತ್ತಿರುವ ಸಂದರ್ಭದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉದ್ಯಮ-ಕೇಂದ್ರಿತ ಶಿಕ್ಷಣಕ್ಕೆ ಪ್ರವೇಶವು ಆರ್ಥಿಕವಾಗಿ ಸವಾಲಾಗಿ ಪರಿಣಮಿಸುತ್ತಿದೆ.
ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಸವಾರನೊಬ್ಬನಿಗೆ ಸುಳ್ಯದ ನ್ಯಾಯಾಲಯವು ದಂಡದ ಜೊತೆಗೆ ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ವಿಶಿಷ್ಟ ಶಿಕ್ಷೆಯನ್ನು ವಿಧಿಸಿದೆ.
ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ ನ ಆರ್ ಸಿಬಿ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಕೊನೆಗೂ ಗ್ರೀನ್ ಸಿಗ್ನಲ್ ನೀಡಿದೆ.
ಮುಂದಿನ ಮೂರ್ನಾಲ್ಕು ದಿನ ವಿವಿಧ ಭಾಗಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು, ಸದ್ರಿ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆ, ಸದ್ರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ಈ ಕೆಳಕಂಡ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶಿಸಿರುತ್ತಾರೆ.
ಶ್ರೀಕ್ಷೇತ್ರ ಪೊಳಲಿಯ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್ (78) ನಿಧನರಾಗಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಸುಮಾರು 50 ವರ್ಷಕ್ಕೂ ಮೇಲ್ಪಟ್ಟು ಅರ್ಚಕ ಸೇವೆ ಮಾಡಿದ್ದಾರೆ.
ಅಮೆರಿಕ-ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಸೋಮವಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಸ್ವಲ್ಪ ಇಳಿಕೆಯಾಗಿದೆ.
ಇರಾನ್ ಡ್ರೋನ್ ದಾಳಿಗೆ ದುಬೈ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.
ತಾಲ್ಲೂಕಿನಲ್ಲಿ ಚಿರತೆ ಆತಂಕ ಹೆಚ್ಚಾಗಿದ್ದು, ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನೆಹುಂಡಿ ಕೂಡ್ಲುರು ರಸ್ತೆ ಬಳಿ ಚಿರತೆ ಪ್ರತ್ಯಕ್ಷವಾಗಿದೆ.