Showing 20 of 20442 articles • Page 149 of 1023
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಶುಕ್ರವಾರ ಕೆಎಸ್ಆರ್ಟಿಸಿ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಯಮರೂಪಿಯಾಗಿ ಬಂದ ಬಸ್ ಇವರ ಬದುಕನ್ನು ಬಲಿಪಡೆದಿದೆ.
ಕರಾವಳಿ ಭಾಗದ ಜನರ ದಶಕಗಳ ಬೇಡಿಕೆಯಾಗಿದ್ದ ಬೆಂಗಳೂರು-ಮಂಗಳೂರು ನಡುವಿನ ವೇಗದ ರೈಲು ಸಂಚಾರದ ಕನಸಿಗೆ ಈಗ ‘ವಂದೇ ಭಾರತ್’ ರೂಪದಲ್ಲಿ ಹೊಸ ಆಯಾಮ ಸಿಕ್ಕಿತ್ತು. ಆದರೆ, ಇತ್ತೀಚೆಗೆ ದಕ್ಷಿಣ ಪಶ್ಚಿಮ ರೈಲ್ವೆ ಬಿಡುಗಡೆ ಮಾಡಿರುವ ಯಶವಂತಪುರ-ಮಡಗಾಂವ್ ವಂದೇ ಭಾರತ್ ರೈಲಿನ ಪ್ರಸ್ತಾವಿತ ವೇಳಾಪಟ್ಟಿ ಕರಾವಳಿ ಜನರಲ್ಲಿ ಅತೀವ ನಿರಾಸೆ ಮತ್ತು ಆಕ್ರೋಶವನ್ನು ಮೂಡಿಸಿದೆ.
ಇದೇ ಬರುವ ಮಾರ್ಚ್ 20 ನೇ ತಾರೀಕಿನಂದು ತುಳು ಪರಿಷತ್ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಂಟಿಯಾಗಿ ಆಯೋಜಿಸಲಿರುವ ಮೂರನೆಯ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನವನ್ನು ಶ್ರೀದೇವಿ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಎ. ಸದಾನಂದ ಶೆಟ್ಟಿಯವರು ಬಿಡುಗಡೆ ಮಾಡಿದರು.
ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಶೆಡ್ ಬಳಿ ನಡೆದಿದೆ.
ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಡೆಯುವ ಅನ್ನದಾನ ಹಾಗೂ ಊಟೋಪಚಾರ ವ್ಯವಸ್ಥೆಗೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಶಿರೂರು ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ತಿಳಿಸಿದ್ದಾರೆ.
ಹೊಸಬೆಟ್ಟು ಪರಿಸರದ ಗ್ಯಾರೇಜ್ ಒಂದರ ವಾಹನಗಳ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಿದ ಬಿಡಿಭಾಗಗಳು ಹಾಗೂ ಕೃತ್ಯಕ್ಕೆ ಬಳಸಿದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿರುವ ‘ಜೆಫ್ರಿ ಎಪ್ಸ್ಟೀನ್’ ಪ್ರಕರಣದ ಕಡತಗಳಿಗೂ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮೌನಕ್ಕೂ ನಂಟಿದೆಯೇ? ಎಂಬ ಅನುಮಾನವನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ವ್ಯಕ್ತಪಡಿಸಿದ್ದಾರೆ.
ಕೆಂಪು ಬಾಕ್ಸೈಟ್ ತುಂಬಿಕೊಂಡು ಬರುತ್ತಿದ್ದ ಲಾರಿ ಗುರುಪುರ ಜಂಕ್ಷನ್ನಲ್ಲಿ ನಿಯಂತ್ರಣ ತಪ್ಪಿ ಮಿನಿ ಬಜಾರ್ ಬೇಕರಿ ಹಾಗೂ ಸಮೀಪದ ಮೊಬೈಲ್ ಅಂಗಡಿಗೆ ಗುದ್ದಿದ ಘಟನೆ ಸಂಭವಿಸಿದೆ.
ಸ್ಕೂಟರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್ಗೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ನಿಟ್ಟೂರು ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪ್ರಮುಖ ದೇವಸ್ಥಾನಗಳಲ್ಲಿ ಈಗ ಅಡುಗೆ ಅನಿಲದ (LPG) ಅವಲಂಬನೆ ಕಡಿಮೆಯಾಗುತ್ತಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಇತ್ತೀಚಿನ ಪೂರೈಕೆಯ ವ್ಯತ್ಯಯದ ಹಿನ್ನೆಲೆಯಲ್ಲಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗಳು ಮತ್ತೆ ಸಾಂಪ್ರದಾಯಿಕ ಕಟ್ಟಿಗೆ ಒಲೆಗಳ ಬಳಕೆಗೆ ಮುಂದಾಗಿವೆ.
“ಕಾಂಗ್ರೆಸ್ ಕಾಲದಲ್ಲಿ 10 ರೂ. ಗ್ಯಾಸ್ ಬೆಲೆ ಏರಿಕೆಯಾದಾಗ ಬೀದಿಗಿಳಿದು ಒಲೆ ಹಚ್ಚಿ ಚಹಾ ಮಾಡುತ್ತಿದ್ದ ಸಚಿವೆ ಶೋಭಾ ಕರಂದ್ಲಾಜೆ ಅವರು ಈಗ ಎಲ್ಲಿ ಹೋಗಿದ್ದಾರೆ? ಈಗ ಸಿಲಿಂಡರ್ ಬೆಲೆ 60 ರೂ. ಏರಿಕೆಯಾಗಿದ್ದರೂ ಅವರ ಅಡ್ರೆಸ್ಸೇ ಇಲ್ಲ. ಜಿಲ್ಲೆಯ ಸಂಸದರು ಮತ್ತು ಬಿಜೆಪಿ ಶಾಸಕರು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ” ಎಂದು ಹರೀಶ್ ಕುಮಾರ್ ವ್ಯಂಗ್ಯವಾಡಿದರು.
ಕೊಲ್ಲಿ ರಾಷ್ಟ್ರದಲ್ಲಿ ಯುದ್ಧಭೀತಿಯಿಂದ ಉಂಟಾಗಿರುವ ಅನಿಲ ವ್ಯತ್ಯಯದಿಂದಾಗಿ ಹೋಟೆಲ್ ಮಾಲಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಎರಡು ದಿನಗಳೊಳಗೆ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಉಡುಪಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಪ್ರತಿಷ್ಠಿತ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಾದಸ್ವರ ಕಲಾವಿದ ವಿದ್ವಾನ್ ನಾಗೇಶ್ ಎ. ಬಪ್ಪನಾಡು ಅವರಿಗೆ ಮಂಗಳೂರಿನಲ್ಲಿ ಸನ್ಮಾನ ನಡೆಯಲಿದೆ.
ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ.
ಎಂಡೋಮೆಟ್ರಿಯೊಸಿಸ್ ಜಾಗೃತಿ ಮಾಸದ ಅಂಗವಾಗಿ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಎಂಡೋಮೆಟ್ರಿಯೊಸಿಸ್ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮಹಿಳೆಯರಿಗೆ ಅಪರೂಪದ ಮಿನಿಮಲ್ ಇನ್ವೇಸಿವ್ (ಲ್ಯಾಪರೋಸ್ಕೋಪಿಕ್) ಸಂತಾನೋತ್ಪತ್ತಿ ಸಾಮರ್ಥ್ಯ ಉಳಿಸುವ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಆರ್ಟ್ಸ್ ಆಂಡ್ ಹುಮಾನಿಟಿಸ್ ನ ಮಾಧ್ಯಮ ಅಧ್ಯಯನ ವಿಭಾಗವು “ಶೂಟಿಂಗ್ ಸ್ಟಾರ್ಸ್ 2026” ಎಂಬ ರಾಷ್ಟ್ರೀಯ ಮಾಧ್ಯಮ ವಿಚಾರ ಸಂಕಿರಣ ಮತ್ತು ಚಲನಚಿತ್ರೋತ್ಸವವನ್ನು ಮಾರ್ಚ್ 12, 2026ರಂದು ಯಶಸ್ವಿಯಾಗಿ ಆಯೋಜಿಸಿತು.
ಯುದ್ಧ ಸನ್ನಿವೇಶದ ಹಿನ್ನೆಲೆ ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರ್ಯಾಷ್ ಆಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ ವಸ್ತುಗಳನ್ನು ಉತ್ಪಾದಿಸುವ ಕೈಗಾರಿಕಾ ಘಟಕಗಳು, ಸೇರಿದಂತೆ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಆದ್ಯತೆಯ ಮೇಲೆ ಅನಿಲ ಪೂರೈಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.
ಶಿಕ್ಷಣ, ಆರೋಗ್ಯ ಸೇವೆ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರವಹಿಸಿರುವ ತುಂಬೆ ಗ್ರೂಪ್ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ತನ್ನ 29ನೇ ವರ್ಷದ ಪಯಣವನ್ನು ಸಂಭ್ರಮದಿಂದ ಆಚರಿಸಿದೆ. ಸುಮಾರು ಮೂರು ದಶಕಗಳ ಅವಧಿಯಲ್ಲಿ ಹಲವು ಕ್ಷೇತ್ರಗಳಲ್ಲಿ ಸಂಸ್ಥೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ.
ನೀರಿನ ಸಂಪ್ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.