Showing 20 of 20442 articles • Page 150 of 1023
ಕಾಲೇಜು ಮುಗಿಸಿ ಗೇಟ್ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ.
ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ ಹೇಳಿದ್ದಾರೆ.
ಇರಾಕ್ನ ಬಸ್ರಾ ಬಳಿ ಅಮೆರಿಕ ಸ್ವಾಮ್ಯದ ಕಚ್ಚಾ ತೈಲ ಟ್ಯಾಂಕರ್ ಸಫೇಸಿಯಾ ವಿಷ್ಣು ಮೇಲೆ ಇರಾನ್ ಸೂಸೈಡ್ ಬೋಟ್ ದಾಳಿ ನಡೆಸಿದೆ.
ಸೂರ್ಯನ ಶಾಖ ಜೋರಾಗಿದ್ದು, ಮಾ. 15ರಿಂದ 17ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2026 ರ ಐಸಿಸಿ ಟಿ20 ವಿಶ್ವಕಪ್ ಗೆದ್ದ ನಂತರ ಸಂಭ್ರಮಾಚರಣೆ ವೇಳೆ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಕೀಲರೊಬ್ಬರು ಮುಂಬೈನಲ್ಲಿ ದೂರು ದಾಖಲಿಸಿದ್ದಾರೆ.
ಮಾ.30 ರಂದು ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ನಂಜನಗೂಡಿನಲ್ಲಿ ಗರಳಪುರಿ ಉತ್ಸವವನ್ನು ಇದೆ ಮೊಟ್ಟ ಮೊದಲ ಬಾರಿಗೆ ಆಯೋಜಿಸಲಾಗಿದೆ.
ಬ್ಯಾಂಕ್ ಗಳಲ್ಲಿ ಖಾತೆದಾರರು ಉಳಿತಾಯ ಖಾತೆ ತೆರೆದಿದ್ದಾರೆ. ಆದರೆ, ಉಳಿತಾಯ ಮಾಡುತ್ತಿಲ್ಲ, ಇದರಿಂದ ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಹುಟ್ಟಿದ ಒಂದು ತಿಂಗಳ ಮಗುವಿಗೂ ಬ್ಯಾಂಕ್ ಖಾತೆ ತೆರೆಯಲಾಗುತ್ತಿದೆ ಎಂದು ತಗಡೂರು ಭಾರತೀಯ ಸ್ಟೇಟ್ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಕೆ.ಆರ್ ಶ್ಯಾಮ್ ಸುಂದರ್ ತಿಳಿಸಿದರು.
ಮನೆಯಲ್ಲಿ ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ದೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.
ಮಂಡ್ಯದಲ್ಲಿ ನಡೆದ ಅರ್ಚಕನ ನಿಗೂಢ ಕೊಲೆ ಪ್ರಕರಣವನ್ನ ಶ್ರೀರಂಗಪಟ್ಟಣ ಠಾಣಾ ಪೊಲೀಸರು ಭೇದಿಸಿದ್ದಾರೆ. ಪತ್ನಿಯ ಅನೈತಿಕ ಸಂಬಂಧವೇ ಅರ್ಚಕನ ಕೊಲೆಗೆ ಕಾರಣವಾಗಿದೆ. ಪ್ರಿಯಕರನ ಮೂಲಕ ಪತಿ ಅರ್ಚಕನನ್ನು ಪತ್ನಿ ಹತ್ಯೆ ಮಾಡಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಂಗಳೂರು ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಷ್ಟು ಐ.ಟಿ/ಬಿ.ಟಿ ಕಂಪನಿಗಳು, ಸ್ಟಾರ್ಟ್ ಅಪ್ಗಳು ಆರಂಭಗೊಂಡಿವೆ ಎಷ್ಟು ಒಡಂಬಡಿಕೆ ಆಗಿವೆ? ಎಷ್ಟು ಬಂಡವಾಳ ಹೂಡಿಕೆ ಮಾಡಲಾಗಿದೆ? ಎಂದು ಶಾಸಕ ವೇದವ್ಯಾಸ ಕಾಮತ್ ರವರು ಬಜೆಟ್ ಅಧಿವೇಶನದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಯವರನ್ನು ಪ್ರಶ್ನಿಸಿದರು.
ಭಾರತ ಟಿ20 ಕ್ರಿಕೆಟ್ ತಂಡದ ನಾಯಕನಾಗಿ ಹೆಸರು ಮಾಡಿದ, ಇದೀಗ ತಮ್ಮ ನಾಯಕತ್ವದಲ್ಲಿ ಚೊಚ್ಚಲ ವಿಶ್ವಕಪ್ ಸಾಧನೆ ಮಾಡಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಉಡುಪಿ ಜಿಲ್ಲೆಯೊಂದಿಗೆ ವಿಶೇಷ ನಂಟಿದೆ. ಅವರ ಪತ್ನಿ ದೇವಿಶಾ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನವರು. ಹಾಗಾಗಿ ಸೂರ್ಯಕುಮಾರ್ ಯಾದವ್ ಉಡುಪಿಯ ಅಳಿಯ.
ಸ್ಕೂಟಿಗೆ ಡಿಕ್ಕಿ ಹೊಡೆದ ಕಾರು ಚಾಲಕನೊಬ್ಬ ಸ್ಕೂಟಿ ಸವಾರನಿಗೆ ಹಲ್ಲೆ ನಡೆಸಿದ್ದಲ್ಲದೆ, ಸವಾರನ ಪತ್ನಿಯ ಮೇಲೂ ಹಲ್ಲೆ ನಡೆಸಿದ ಘಟನೆ ಉಡುಪಿಯ ಚಿತ್ತರಂಜನ್ ಸರ್ಕಲ್ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಶಾಸ್ತ್ರೀಯ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ರೋಮಾಂಚಕ ಆಚರಣೆಯಲ್ಲಿ, ಶ್ರೀ ನಾರಾಯಣಿ ಸಂಗೀತ ಕಲಾ ಕೇಂದ್ರ (ಎಬಿಜಿಎಂವಿ ಮುಂಬೈಗೆ ಸಂಯೋಜಿತ) ಸಹಯೋಗದೊಂದಿಗೆ, ಮಂಗಳೂರಿನ ದಿ ಗೌಡ್ ಸಾರಸ್ವತ ಬ್ರಾಹ್ಮಣ ಸೇವಾ ಸಂಘವು ಅಸಾಧಾರಣ ಯುವ ಕಲಾವಿದರ ಸಭೆಯಾದ ವಸಂತ ಸಂಗೀತೋತ್ಸವವನ್ನು ಆಯೋಜಿಸಲು ಹೆಮ್ಮೆಪಡುತ್ತದೆ.
ವಿಶ್ವ ಕಿಡ್ನಿ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ಮಂಗಳೂರು , ಶೀಘ್ರ ರೋಗ ಪತ್ತೆ, ಚಿಕಿತ್ಸೆ ಮತ್ತು ಕಿಡ್ನಿ ಸಮಸ್ಯೆಯ ದೀರ್ಘ ಕಾಲದ ನಿರ್ವಹಣೆಯನ್ನು ಗುರಿಯಾಗಿಸಿ ತನ್ನ ಸಮಗ್ರ ಮೂತ್ರಪಿಂಡ (ಕಿಡ್ನಿ) ಆರೈಕೆಯ ಸೇವೆಯನ್ನು ಒತ್ತಿ ಹೇಳಿದೆ. ಮೂತ್ರಪಿಂಡದ ಆರೋಗ್ಯ ಮತ್ತು ರೋಗ ತಡೆಗಟ್ಟುವ ಆರೈಕೆಯ ಕುರಿತು ಜಾಗೃತಿ ಹೆಚ್ಚುಸುವ ಈ ನೇತೃತ್ವವನ್ನು ಆಸ್ಪತ್ರೆಯ ನೆಫ್ರೊಲಾಜಿ ವಿಭಾಗವು ಕೈಗೊಂಡಿದೆ.
ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ನಡುವಿನ ಮಾತುಕತೆಯ ನಂತರ, ಇರಾನ್, ಭಾರತದ ಧ್ವಜ ಹೊತ್ತ ಟ್ಯಾಂಕರ್ಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಅವಕಾಶ ನೀಡಿದೆ.
ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಹಾಕಿಕೊಂಡು ಪರದಾಡುತ್ತಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಇಂದು ನಡೆದಿದೆ.
ಗೂಡ್ಸ್ ಟೆಂಪೋವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ.
ಕಳೆದ ಡಿಸೆಂಬರ್ನಲ್ಲಿ ಏರ್ಲೈನ್ನ ಅಭೂತಪೂರ್ವ ದೇಶೀಯ ವೇಳಾಪಟ್ಟಿ ಕುಸಿತದಿಂದ ಲಕ್ಷಾಂತರ ಪ್ರಯಾಣಿಕರು ತನ್ನ ನೆಟ್ವರ್ಕ್ನಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡ ಮೂರು ತಿಂಗಳ ನಂತರ, ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಮಂಗಳವಾರ ವಿಮಾನಯಾನ ಸಂಸ್ಥೆಗೆ ರಾಜೀನಾಮೆ ನೀಡಿದ್ದಾರೆ. ಬದಲಿಯನ್ನು ಕಂಡುಹಿಡಿಯುವವರೆಗೆ ಏರ್ಲೈನ್ ಸಂಸ್ಥಾಪಕ ಮತ್ತು ಎಂಡಿ ರಾಹುಲ್ ಭಾಟಿಯಾ ಮಧ್ಯಂತರ ಸಿಇಒ ಆಗಿರುತ್ತಾರೆ.
ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಕಾಣಿಸಿಕೊಂಡು ಫೇಮಸ್ ಆಗಿದ್ದ ನಿಲಗಣ್ಣಿನ ಸುಂದರಿ ಮೊನಾಲಿಸಾ ಕೇರಳದ ತಿರುವನಂತಪುರಂನ ಥಂಪನೂರು ಪೊಲೀಸ್ ಠಾಣೆಯಲ್ಲಿ ಆಶ್ರಯ ಪಡೆದಿದ್ದಾರೆ. ಮನೆಯವರು ಗೆಳೆಯ ಫರ್ಮಾನ್ ಖಾನ್ ಜೊತೆಗಿನ ಪ್ರೀತಿ ವಿರೋಧಕ್ಕಾಗಿ ರಕ್ಷಣೆಗಾಗಿ ಕೇರಳಕ್ಕೆ ಬಂದು ಆಶ್ರಯ ಪಡೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹಾಗೂ ಆರ್ದ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಭಾರತದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.