Showing 20 of 20442 articles • Page 152 of 1023
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ಸ್ಟಾರ್ ನಟ ಅರ್ಜುನ್ ಕಪೂರ್ ಭೇಟಿ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದ ಅವರು, ವಿವಿಧ ವಿಶೇಷ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು.
ಕರ್ನಾಟಕ ಸಂಘ ದುಬೈ (ಕೆಎಸ್ಡಿ) ಕಾರ್ಯದರ್ಶಿ ಮನೋಹರ್ ಹೆಗ್ಡೆ ಅವರು ಮಾರ್ಚ್ 9 ರಿಂದ ಮಾರ್ಚ್ 14, 2026 ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ 34 ನೇ ಭಾರತ ರಾಷ್ಟ್ರೀಯ ಟೆನ್ಪಿನ್ ಬೌಲಿಂಗ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದಾರೆ. ಅವರು ಚಾಂಪಿಯನ್ಶಿಪ್ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಪ್ರತಿನಿಧಿಸುವ ಏಕೈಕ ಕನ್ನಡಿಗರಾಗಿದ್ದಾರೆ.
ಮುಲ್ಕಿಯ ಮನೆಯೊಂದರಲ್ಲಿ ಬಾವಿಗೆ ಕಸ ಬೀಳದಂತೆ ಬಲೆ ಹಾಕಿದ್ದು ಅದರಲ್ಲಿ ಹೆಬ್ಬಾವು ಒಂದು ಸಿಕಿಕೊಂಡಿದ್ದು, ಬಿಡಿಸಲು ಹರಸಾಹಸ ಪಡುತಿತ್ತು. ಇದನ್ನ ಗಮನಿಸಿದ ಅಲ್ಲೇ ಕೆಲಸದಲ್ಲಿ ನಿರತರಾಗಿದ್ದ ಮೆಸ್ಕಾಂ ಸಿಬ್ಬಂದಿ ಮಂಜುನಾಥ್ ಡಿ ಮತ್ತು ಅವರ ಜೊತೆಯಲ್ಲಿ ಇದ್ದವರು ಹೆಬ್ಬಾವನ್ನ ರಕ್ಷಿಸಲು ಮುಂದಾದರು.
ಕಾವೂರು ಉಲ್ಲಾಸ ನಗರದ ಮನೆಯೊಂದರಿಂದ 39 ಗ್ರಾಂ ಚಿನ್ನಾಭರಣ ಹಾಗೂ 182 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಮಧ್ಯೆ ರಾತ್ರಿ ಶ್ರೀ ಮಹದೇಶ್ವರಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿದೆ. ನಡುರಾತ್ರಿಯಲ್ಲೇ ರಥವನ್ನು ಗ್ರಾಮಸ್ಥರು ಪುನೀತರಾದರು. ಎರಡು ದಿನಗಳ ಕಾಲ ನಡೆಯುವ ಚುಂಚನಹಳ್ಳಿ ಶ್ರೀ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಸೋಮವಾರ ಮಧ್ಯರಾತ್ರಿ 12 ಗಂಟೆಯಲ್ಲಿ ಶ್ರೀ ಮಹದೇಶ್ವರ ಸ್ವಾಮಿಯ ರಥೋತ್ಸವವು ವಿಜೃಂಭಣೆಯಿಂದ ನಡೆದಿದೆ.
ಸಂತೆಕಟ್ಟೆಯ ಲಕ್ಷ್ಮೀನಗರ ರಸ್ತೆಯಲ್ಲಿ ವಾರದ ಹಿಂದೆ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹೊಸದೆಹಲಿ: ಕಂಬಳವನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ನಡೆಸಬಾರದು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. “ಒಂದು ಸಂಸ್ಕೃತಿಯನ್ನು ರಾಜ್ಯದ ಇತರ ಭಾಗಗಳ ಜನರಿಗೂ ಪರಿಚಯಿಸುವುದರಲ್ಲಿ ತಪ್ಪೇನಿದೆ? ಅದನ್ನು ಕೇವಲ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು?” ಎಂದು ನ್ಯಾಯಾಲಯವು ಅರ್ಜಿದಾರರನ್ನು ಪ್ರಶ್ನಿಸಿದೆ. ಕರ್ನಾಟಕ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪ್ರಾಣಿ ಹಕ್ಕುಗಳ ಸಂಘಟನೆ ‘ಪೇಟಾ’ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. […]
ವೇಗವಾಗಿ ಬಂದ ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಆಟೋ ಚಾಲಕರಾದ ಅವರ ತಂದೆ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಮರು ಪ್ರಾರಂಭಿಸಬಹುದು ಮತ್ತು ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬಹುದು ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಸರ್ಕಾರದ ನಿರ್ಧಾರಕ್ಕೆ NSUI ವಿದ್ಯಾರ್ಥಿ ಸಂಘಟನೆಯಿಂದ ಮಂಗಳೂರು ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜು ಕ್ಯಾಂಪಸ್ ನಲ್ಲಿ ಸಂಭ್ರಮಾಚರಿಸಿದರು.
ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಉಂಟಾದ ದ್ರವೀಕೃತ ಪೆಟ್ರೋಲಿಯಂ ಅನಿಲ ಕೊರತೆಯನ್ನು ನೀಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಉನ್ನತ ಮಟ್ಟದ ಚರ್ಚೆ ಮಾಡಿದ್ದಾರೆ.
ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತದ ನಡುವೆಯೂ ಭಾರತ 5000 ಟನ್ ಡೀಸೆಲ್ ರಫ್ತು ಮಾಡುತ್ತಿದೆ. ಡೀಸೆಲ್ ಪೈಪ್ಲೈನ್ ಮೂಲಕ ಬಾಂಗ್ಲಾದೇಶವನ್ನು ತಲುಪಿ ಪರ್ಬತಿಪುರ ಗಡಿಯ ಮೂಲಕ ಪ್ರವೇಶಿಸಲಿದೆ.
ಇರಾನ್-ಇಸ್ರೇಲ್ ಅಮೆರಿಕದ ನಡುವೆ ಯುದ್ಧದ ತೀವ್ರತೆಯ ಬಿಸಿ ಭಾರತಕ್ಕೂ ತಟ್ಟಿದೆ. ದಿನನಿತ್ಯ ವಸ್ತುಗಳ ಬೆಲೆಯೂ ಹೆಚ್ಚುತ್ತಿದೆ. ಇದೀಗ ಆಟೋ ಗ್ಯಾಸ್ ದರ ಏಕಾಏಕಿ ಏರಿಕೆಯಾಗಿರುವುದರಿಂದ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
2026ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ತಂಡಕ್ಕೆ 131 ಕೋಟಿ ರೂಪಾಯಿ ನಗದು ಬಹುಮಾನವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.
ವಾಣಿಜ್ಯ ಎಲ್ಪಿಜಿ ಪೂರೈಕೆಯಲ್ಲಿನ ಅಡಚಣೆಯಿಂದಾಗಿ ಮುಂಬೈನಲ್ಲಿ ಸುಮಾರು 20% ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಬಂದ್ ಆಗಿವೆ ಎಂದು ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘ AHAR ತಿಳಿಸಿದೆ.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕೇಂದ್ರ ಸರ್ಕಾರ ಅಡುಗೆ ಸಿಲಿಂಡರ್ ಮತ್ತು ವಾಣಿಜ್ಯ ಸಿಲಿಂಡರ್ ಗಳ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಇವತ್ತು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಜಿಲ್ಲಾ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬ್ರಹ್ಮಗಿರಿ ಸರ್ಕಲ್ ಗೆ ಸಾಗಿದ ಕಾರ್ಯಕರ್ತರು ಅಲ್ಲಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಆಯುಧದಿಂದ ಇರಿದು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಗಮನ ಬೇರೆಡೆ ಸೆಳೆದು ವೃದ್ದೆಯ 40 ಗ್ರಾಂ ಮಾಂಗಲ್ಯ ಸರ ಲಪಟಾಯಿಸಿದ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೂರು ಅರ್ಜಿಗೆ ಸ್ಪಂದಿಸದ ಲೋಕಾಯುಕ್ತ ಅಧಿಕಾರಿಗಳ ವಿರುದ್ದ RTI ಕಾರ್ಯಕರ್ತರೊಬ್ಬರು ಗಂಧದ ಕಟ್ಟಿ ಪ್ಯಾಕೆಟ್ ಗಳನ್ನ ರವಾನೆ ಮಾಡಿ ಪೂಜೆ ಸಲ್ಲಿಸುವಂತೆ ವ್ಯಂಗ್ಯ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.