Showing 20 of 20442 articles • Page 153 of 1023
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ ) ಇತ್ತೀಚೆಗೆ 8ನೇ ತರಗತಿಗೆ ಪರಿಚಯಿಸಿದ್ದ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕವನ್ನು ವಾಪಸ್ ಪಡೆದುಕೊಂಡು ಬಹಿರಂಗವಾಗಿ ಕ್ಷಮೆಯಾಚಿಸಿದೆ.
ಟ್ರಾನ್ಸ್ಫಾರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಆತಂಕ ಸೃಷ್ಡಿಯಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಬಳಿಯ ವಿಜಯಕಾಳಿ ಮಠದ ಬಳಿ ನಡೆದಿದೆ.
ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದ ಲಕ್ಷ್ಮಿ ವೆಂಕಟೇಶ್ವರ ಬಡಾವಣೆಯಲ್ಲಿ ನಡೆದಿದೆ.
ಮರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ(46) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮರಳಗಾಲ ಗ್ರಾಮದ ನಾಲೆಯಲ್ಲಿ ಸಿದ್ದಲಿಂಗಪ್ಪ ಶವ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದ ಬಳಿ ಘಟನೆ ನಡೆದಿದೆ
ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ ಕೋರ್ಟ್ ಶಾಕ್ ಕೊಟ್ಟಿದೆ. ಪೋಕ್ಸೋ ಕೇಸ್ನಲ್ಲಿ ಆರೋಪಿಯಾಗಿರುವ ಮಲ್ಲಿಕಾರ್ಜುನ್ ಮುತ್ಯಾ ಜಾಮೀನು ಅರ್ಜಿ ತಿರಸ್ಕಾರಗೊಂಡಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಯಾದಗಿರಿಯ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು.
ಮೈಸೂರು: ಮುಡಾ ಇದೀಗ ಎಂಡಿಎ ಹಗರಣಗಳು ಸಾಕಷ್ಟು ಬಯಲಿಗೆ ಬಂದಿದೆ. ಹಗರಣಗಳಿಂದ ಬೇಸತ್ತ ಸರ್ಕಾರ ಮುಡಾ ಗೆ ಮೇಜರ್ ಸರ್ಜರಿ ಮಾಡಿ ಮೈಸೂರು ಅಭಿವೃದ್ದಿ ಪ್ರಾಧಿಕಾರ ಎಂದು ಬದಲಿಸಿದೆ. ಹೀಗಿದ್ದರೂ ಇನ್ನೂ ಅಧಿಕಾರಿಗಳಾಗಲಿ ಕಾನೂನು ಶಾಖೆಯಾಗಲಿ ಎಚ್ಚೆತ್ತುಕೊಂಡಿಲ್ಲ. ಭ್ರಷ್ಟ ಅಧಿಕಾರಿಯ ಪರ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಸರ್ಕಾರದ ಕೆಂಗಣ್ಣಿಗೂ ಗುರಿಯಾಗಿದೆ. ಅಮಾನತಿನಲ್ಲಿರುವ ವಿಶೇಷ ತಹಸೀಲ್ದಾರ್ ಪರ ನಿಂತ ಪ್ರಾಧಿಕಾರಕ್ಕೆ ಸರ್ಕಾರ ಚಾಟಿ ಬೀಸಿ ಬಿಸಿ ಮುಟ್ಟಿಸಿದೆ. ಭ್ರಷ್ಟ ಅಧಿಕಾರಿ ನಡೆಸಿದ ಅಕ್ರಮದ ಬಗ್ಗೆ ದಾಖಲೆಗಳ ಸಮೇತ […]
ಬೇಸಿಗೆ ಬೆನ್ನಲ್ಲೇ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ನೀರಿನ ಕೊರತೆಗೆ ಅವಕಾಶ ನೀಡಬಾರದೆಂದು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದರೂ ಅಭಾವ ಶುರುವಾಗಿದೆ. ಕೆ.ಆರ್.ನಗರ ಪುರಸಭೆ 6 ನೇ ವಾರ್ಡ್ ಅರ್ಕೇಶ್ವರ ನಗರದಲ್ಲಿ ಕಳೆದ 6 ತಿಂಗಳಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆತಿಲ್ಲ.
ಕಳೆದ 10 ದಿನಗಳ ಹಿಂದೆ ನಗರದ ಬೇಕರಿಯೊಂದರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರನೊಬ್ಬನನ್ನು ನಂಜನಗೂಡು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಅಂತಾರಾಷ್ಟ್ರೀಯ ಕಚ್ಚಾ ತೈಲ ದರ ಬ್ಯಾರೆಲ್ಗೆ 100 ಡಾಲರ್ ದಾಟಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸದ್ಯಕ್ಕೆ ಹೆಚ್ಚಿಸಲಾಗುವುದಿಲ್ಲ ಎಂದು ಸರಕಾರಿ ಮೂಲಗಳು ಸೋಮವಾರ ತಿಳಿಸಿವೆ. ದೇಶಾದ್ಯಂತ ನಿರಂತರ ಇಂಧನ ಪೂರೈಕೆ ಮಾರ್ಗಗಳನ್ನು ನಿರ್ವಹಿಸಲು ಅಧಿಕಾರಿಗಳು ಪ್ರಯತ್ನಗಳನ್ನು ಹೆಚ್ಚಿಸಿದ್ದಾರೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರ ಇನ್ನೂ ಸರಿಯಾಗಿಲ್ಲ. ಮಾರ್ಚ್ 9ರ ಸೋಮವಾರವೂ ಹಲವು ಅಂತರಾಷ್ಟ್ರೀಯ ವಿಮಾನಗಳ ಸೇವೆಯನ್ನು ರದ್ದುಪಡಿಸಿತ್ತು. ಇದರಿಂದ ದುಬೈ ಜೆದ್ದಾ ಮತ್ತು ದಮಾಮ್ಗೆ ಪ್ರಯಾಣಿಸುವ ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗಿದೆ.
ನವದೆಹಲಿ: ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ 55 ದಿನಗಳಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್ ಯುದ್ಧದ ಬಳಿಕ 15 ದಿನಗಳಲ್ಲಿ ಸಿಲಿಂಡರ್ಗಳನ್ನು ಬುಕ್ಕಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಎಲ್ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸಂಸ್ಕರಣಾಗಾರಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ ವಾಣಿಜ್ಯ ಸಂಪರ್ಕಗಳಿಗಿಂತ […]
ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ, ಮಂಗಳೂರಿನಲ್ಲಿಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 9, 2026 ರಂದು ಯೆಂಡ್ಯೂರನ್ಸ್ ಸಭಾಂಗಣದಲ್ಲಿ ಜೆಂಡರ್ ಸೆನ್ಸಿಟೈಸೇಶನ್ ಸೆಲ್(ಲಿಂಗ ಸಂವೇದನಾ ಘಟಕ) ವತಿಯಿಂದ ಆಚರಿಸಲಾಯಿತು. ಈ ವರ್ಷದ ವಿಷಯ“ಗಿವ್ ಟು ಗೇನ್ (ಸಹಕಾರದಿಂದ ಅಭಿವೃದ್ಧಿ)” ಆಗಿತ್ತು.
2025-26ನೇ ಸಾಲಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಬಜೆಟ್ ಜಿಲ್ಲಾಧಿಕಾರಿ, ಮೂಡ ಅಧ್ಯಕ್ಷ ಲಕ್ಷ್ಮಿಕಾಂತ ರೆಡ್ಡಿ ನೇತೃತ್ವದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಮಂಡನೆ ಮಾಡಲಾಯಿತು.
ವಾತ್ಸಲ್ಯ ಯೋಜನೆಯಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ನಿರ್ಗತಿಕ ಮಹಿಳೆಗೆ ಸೂರು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ .
ಒಡಿಶಾದ ಪುರಿ ಜಗನ್ನಾಥ ದೇವಾಲಯದ ಪವಿತ್ರ ‘ಪತಿತಪಾವನ ಬಾನಾ’ (ಧ್ವಜ) ಮತ್ತು ನೀಲಚಕ್ರದ ಮೇಲೆ ಹದ್ದೊಂದು ಕುಳಿತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಎಸ್ಟೇಟ್ ವೊಂದರಲ್ಲಿ ಮರ ಕಟಾವು ಮಾಡುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆರಡಿ ಗ್ರಾಮದಲ್ಲಿ ನಡೆದಿದೆ.
8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
‘ತುಳಸಿ’ ಎಲೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಒತ್ತಡವನ್ನು ಕಡಿಮೆ ಮಾಡುವ ಗುಣ ಹೊಂದಿರುವ ತುಳಸಿ, ದೇಹದ ಚಯಾಪಚಯ ಕ್ರಿಯೆಗಳ ಮೇಲೂ ಸಕಾರಾತ್ಮಕ ಪರಿಣಾಮ ಬೀರುತ್ತದೆ.
ನಕಲಿ ದಾಖಲೆಗಳ ಜೊತೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಅನ್ನು ಚಲಾಯಿಸುತ್ತಿದ್ದ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದು, ಹೆಚ್ಚಿನ ತನಿಖೆಗಾಗಿ ಈ ಪ್ರಕರಣವನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಇಸ್ರೇಲ್, ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ಇಂದು 10ನೇ ದಿನಕ್ಕೆ ಕಾಲಿಟ್ಟಿದೆ. ಇಸ್ರೇಲ್ ನ ಸೇನಾಪಡೆ ಇರಾನ್ ನ ಪ್ರಮುಖ ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ವೈಮಾನಿಕ ಸೇರಿದಂತೆ ಪ್ರಬಲ ಕ್ಷಿಪಣಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಮಿಸೈಲ್ಸ್ ಮತ್ತು ಡ್ರೋನ್ ದಾಳಿ ನಡೆಸಿತ್ತು.