Showing 20 of 20442 articles • Page 154 of 1023
ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದ್ದು, ಸ್ಕ್ರಾಪ್ ಗೋದಾಮಿಗೆ ಬೆಂಕಿ ಬಿದ್ದ ಘಟನೆ ಚಿಕ್ಕಪೇಟೆಯಲ್ಲಿ ನಡೆದಿದ್ದು, ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ಇಡೀ ಗೋದಾಮು ಸಂಪೂರ್ಣ ಸುಟ್ಟು ಕರಕಲಾಗಿದೆ.
ಹಾಡಹಗಲೇ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ನಡೆದಿದೆ.
ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಪ್ರತಿಭಟಿಸಿ ಕಣಿವೆಯಲ್ಲಿ ಕಳೆದ ಒಂದು ವಾರದಿಂದ ಹೇರಲಾಗಿದ್ದ ಬಂದ್ ಅಂತ್ಯಗೊಂಡಿದೆ. ಸೋಮವಾರದಿಂದ ಕಾಶ್ಮೀರದಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಅಧಿಕೃತವಾಗಿ ಆರಂಭಗೊಂಡಿದೆ.
ಗೋಕರ್ಣದ ಸುತ್ತಮುತ್ತ ಅಕ್ರಮ ರೆಸಾರ್ಟ್ ಹಾವಳಿ ಹೆಚ್ಚಾಗಿದೆ. ಉತ್ತರ ಕನ್ನಡದ ಗೋಕರ್ಣ ಸಮೀಪ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ ರೂಲ್ಸ್ ಉಲ್ಲಂಘಿಸಿದ 44 ಅನಧಿಕೃತ ರೆಸಾರ್ಟ್ಗಳನ್ನು ತೆರವುಗೊಳಿಸಲು ಕುಮಟಾ ತಹಶೀಲ್ದಾರ್ ಆದೇಶಿಸಿದ್ದಾರೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಂಡಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧವು 11ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮವಾಗಿ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ.
ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ ನಟಿಸಿರುವ ಚಿತ್ರ ಲವ್ ಮಾಕ್ಟೇಲ್ 3 ಮಾರ್ಚ್ 19ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮೌಲಾನಾ ಅಬ್ದುಲ್ಲಾ ಸಲೀಂ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ಸಂಬಂಧ 83 ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು, ಹಿಂದೂ ಸಂಘಟನೆಗಳು ತಕ್ಷಣದ ಬಂಧನಕ್ಕೆ ಆಗ್ರಹಿಸಿವೆ.
ʼಅಪ್ಪು ಉತ್ಸವʼ ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ) ವತಿಯಿಂದ ಆಯೋಜಿಸಲಾಗಿದ್ದು, ರಾಯಭಾರಿಯಾಗಿ ನೆನಪಿರಲಿ ಪ್ರೇಮ್ ಆಯ್ಕೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರೇಮ್ ಮಾತನಾಡಿ 21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ ಭರತನಾಟ್ಯ ಕಲಾವಿದರಿಗೆ ಸಾಧಕರಿಗೆ ಸನ್ಮಾನ ಮಾಡುತ್ತಿರುವುದು ಖುಷಿ ತಂದಿದೆ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆ.ವಿ. ಭಾಗವಹಿಸಿದ್ದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಉದ್ಯೋಗ ಆಕಾಂಕ್ಷಿಗಳನ್ನು ವಂಚಿಸಿದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ಇಬ್ಬರು ವ್ಯಕ್ತಿಗಳ ವಿರುದ್ಧ FIR ದಾಖಲಿಸಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಆಗಿದ್ದಕ್ಕೆ ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ.
ಮಾದಕ ವಸ್ತು ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ.
ಎಂಸಿಸಿ ಬ್ಯಾಂಕ್ – ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಮಾರ್ಚ್ 8, 2026 ರಂದು ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಆರೋಗ್ಯ ಶಿಬಿರದೊಂದಿಗೆ ಭವ್ಯ ಆಚರಣೆಯನ್ನು ಆಯೋಜಿಸಲಾಗಿತ್ತು.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಅನಿಶ್ಚಿತತೆಯ ವಾತಾವರಣ ಮುಂದುವರೆದಿರುವ ಹಿನ್ನೆಲೆಯಲ್ಲಿ ಮಂಗಳೂರು – ಜಿದ್ದಾ, ಮಂಗಳೂರು- ದುಬೈ ವಿಮಾನಗಳ ಮಾ.9ರ ಯಾನ ರದ್ದಾಗಿದೆ.
ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ರವಿವಾರ ಸಂಭವಿಸಿದೆ.
ಸಮಾಜದಲ್ಲಿ ಕಷ್ಟದಲ್ಲಿರುವ ವ್ಯಕ್ತಿಗಳ ನೋವಿಗೆ ದನಿಯಾದವರ ಕಷ್ಟಕ್ಕೆ ಸ್ಪಂದನೆ ತೋರುವುದು ಮಾನವೀಯತೆಯಾಗಿದೆ. ಅಂತಹ ಮಾನವೀಯ ಸೇವೆಯನ್ನು ದೇವರು ಕೂಡ ಮೆಚ್ಚುತ್ತಾರೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಹೇಳಿದರು.
ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಭಾನುವಾರ ಡ್ರೆಸ್ಸಿಂಗ್ ರೂಮ್ನಲ್ಲಿರುವ ಜನರಿಗೆ ಮಾತ್ರ ಜವಾಬ್ದಾರನಾಗಿರುತ್ತೇನೆ ಎಂದು ಹೇಳಿದ್ದಾರೆ ಮತ್ತು ಭಾರತದ ಯಶಸ್ವಿ ಟಿ20 ವಿಶ್ವಕಪ್ ಟೈಲ್ ಡಿಫೆನ್ಸ್ ಅನ್ನು ದಿಗ್ಗಜರಾದ ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ಗೆ ಅರ್ಪಿಸಿದ್ದಾರೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ಸೋಲಿಸಿ ಮೂರನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.
ಕ್ರೈಸ್ತ ವಂಶಾವಳಿ ತಿಳಿಯಲು ಚರ್ಚ್ ದಾಖಲೆ ನೋಡಿದರೆ ಸಾಕು ಆದರೆ ಅದೊಂದು ಕುತೂಹಲ ತಣಿಸುವ ಕೆಲಸ ಬಿಟ್ಟರೆ ಬೇರೆ ಹೆಚ್ಚಿನ ಉಪಯೋಗ ಕಾಣಿಸುವುದಿಲ್ಲ, ಎಂದು ವಂಶಾವಳಿಗಳು ಹುಡುಕಿ ಹತ್ತುಸಾವಿರ ಪುಟಗಳ ಪುಸ್ತಕ ಬರೆದು ಪ್ರಕಟ ಮಾಡಿದ ಮತ್ತು ಅದಕ್ಕಾಗಿ ವಿದೇಶಿ ವಿಶ್ವವಿದ್ಯಾಲಯ ಡಾಕ್ಟರೇಟ್ ಪಡೆದ ವಂಶಾವಳಿ ತಜ್ಞ ಡಾ ಮೈಕಲ್ ಲೋಬೊ ಹೇಳಿದರು.
ನಗರದ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಸಮೀಪವಿರುವ ಹೆಜ್ಜಿಗೆ ಗ್ರಾಮದ ಬಳಿಯ ಕಪಿಲಾ ನದಿ ತೀರದಲ್ಲಿ ದಶಕಗಳಿಂದ ಬೆಳೆದ ನಿಂತಿದ್ದ ಬೃಹತ್ ಮರಗಳನ್ನು ಕಡಿದು ಹಾಕುತ್ತಿದ್ದರೂ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದು, ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ನವಮಂಗಳೂರು ಬಂದರು ಪ್ರಾಧಿಕಾರವು ಇಂದು ಪ್ರಸ್ತುತ ಕ್ರೂಸ್ ಋತುವಿನ ಮೂರನೇ ಕ್ರೂಸ್ ಹಡಗು ಎಂಎಸ್ ಸಿರೆನಾವನ್ನು ಸ್ವಾಗತಿಸಿತು, ಇದು ಈ ಪ್ರದೇಶದಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ.