Showing 20 of 20442 articles • Page 155 of 1023
ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಲಾಡ್ಜ್ಗಳಲ್ಲಿ ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ₹32.86 ಲಕ್ಷ ಮೌಲ್ಯದ ವಿವಿಧ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
‘ಶರಣಾಗದಿದ್ದರೆ ಇರಾನ್ ಮೇಲಿನ ಸೇನಾ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ. ಇದರ ಪರಿಣಾಮ ಘೋರವಾಗಿರುತ್ತದೆ. ಇರಾನ್ನ ಹೊಸ ನೆಲೆಗಳನ್ನು ಕೇಂದ್ರೀಕರಿಸಿ ದಾಳಿ ನಡೆಯಲಿದೆ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಗುಡುಗಿದ್ದಾರೆ.
ಇರಾನ್–ಇಸ್ರೇಲ್ ಸಂಘರ್ಷ ಹಿನ್ನಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರ ವ್ಯತ್ಯಯವಾಗಿದ್ದು, 24 ವಿಮಾನಗಳ ಹಾರಾಟ ರದ್ದಾಗಿದೆ.
ಆರೋಗ್ಯ ಇಲಾಖೆ ನೌಕರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಮುಂಜಾನೆ ನಡೆದಿದೆ.
ದಕ್ಷಿಣ ಟೆಹ್ರಾನ್ನಲ್ಲಿರುವ ಇರಾನ್ನ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ಅಮೆರಿಕ ದಾಳಿ ಮಾಡಿದೆ.
ಕೂಡಿಬೈಲು ಕಂಬಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಸಚಿವ ಬಿ. ರಮಾನಾಥ್ ರೈ ಅವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ವಿಶೇಷವಾಗಿ ಶ್ಲಾಘಿಸಿದರು.
ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್(55)ಅಲ್ಪ ಕಾಲದ ಅನಾರೋಗ್ಯದಿಂದ ಮಾ.7 ರಂದು ರಾತ್ರಿ ನಿಧನ ಹೊಂದಿದರು.
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
9ನೇ ತರಗತಿ ವಿದ್ಯಾರ್ಥಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಇತರ ವಿದ್ಯಾರ್ಥಿಗಳು ಮತ್ತು ವಾರ್ಡನ್ ಮೇಲೆ ರಾಡ್ನಿಂದ ಹಲ್ಲೆ ನಡೆಸಿರುವ ಘಟನೆ ಬಳ್ಳಾರಿಯ ಗುರುಕುಲ ವಸತಿ ಶಾಲೆಯಲ್ಲಿ ನಡೆದಿದೆ. ಭೀಕರ ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ಹಾಗೂ ಆಕೆಯ ತಂದೆ ಮತ್ತು ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತರಬನಹಳ್ಳಿಯಲ್ಲಿ ನಡೆದಿದೆ.
ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ 1500ಕ್ಕೂ ಹೆಚ್ಚು ಅಡಿಕೆ ಗಿಡಗಳು ಸುಟ್ಟು ಕರಕಲಾದ ಘಟನೆ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ಕಳೆದ ಒಂಬತ್ತು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿಶೀಟರ್ನ ಸಹಚರನನ್ನು ಮಂಗಳೂರು ನಗರ ಅಪರಾಧ ಪತ್ತೆ ದಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಂದಿನ ತನಿಖೆಗಾಗಿ ಸುರತ್ಕಲ್ ಪೊಲೀಸರಿಗೆ ಒಪ್ಪಿಸಲಾಗಿದೆ.
2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು -ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ನಡೆದಿದೆ.
ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಜ.30ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಪು ಕ್ಷೇತ್ರದ 80 ಬಡಗಬೆಟ್ಟು ಗ್ರಾಮದಲ್ಲಿ ಇತ್ತೀಚೆಗೆ ಉಡುಪಿ ಕಂಬಳದ ಶಂಕುಸ್ಥಾಪನೆ ನಡೆದಿತ್ತು. ಅದೇ ದಿನ ಜಿಲ್ಲಾಡಳಿತ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿತ್ತು.ಇದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ನಡುವೆ ತೀವ್ರ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ ಪತ್ರಕರ್ತರಿಗೆ ಈ ಸಮಾಜದಲ್ಲಿ ಗೌರವ ಸಿಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.
ಅಂತರಾಷ್ಟ್ರೀಯ ಮಹಿಳಾ ದಿನ ಪ್ರಯುಕ್ತ ಏರ್ಪಡಿಸಿದ ಸೀರೆ ಓಟದಲ್ಲಿ ಸಾಮಾಜಿಕ ಕಟ್ಟಳೆಗಳನ್ನೂ ಮೀರಿ ಮಹಿಳೆಯರು ಓಡಿದರು. ಖಾಸಗಿ ಸಂಸ್ಥೆಯೊಂದು ಆಯೋಜಿಸಿದ್ದ ಸೀರೆ ಓಟದಲ್ಲಿ ಸುಮಾರು 5000 ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ರು ಸ್ಫರ್ಧೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು.
ಕೋವಿಯಿಂದ ಗುಂಡು ಸಿಡಿದು ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರಪೇಟೆ ಸಮೀಪದ ದೊಡ್ಡ ಕೊಡ್ಲಿ ಗ್ರಾಮದಲ್ಲಿ ನಡೆದಿದ್ದು ಹಲವು ಸಂಶಯ ಮೂಡಿದೆ.