Showing 20 of 20442 articles • Page 158 of 1023
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾರ್ಚ್ 5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ನಗರದ ಶೈಕ್ಷಣಿಕ ವಲಯ ಹಾಗೂ ಯುವ ಸಮೂಹವನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ಮಂಗಳೂರು ದಕ್ಷಿಣ ಮತ್ತು ಉತ್ತರ ಪೊಲೀಸ್ ಠಾಣಾ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಅರು ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಜೆಟ್ ಮಂಡಿಸಿದ್ದು, ಕರಾವಳಿಗೆ ಹೆಚ್ಚು ಮಹತ್ವ ನೀಡಿದ್ದಾರೆ. ಬಜೆಟ್ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.
ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ IAF Su-30MKI ಜೆಟ್ ಪತನಗೊಂಡ ನಂತರ ಇಬ್ಬರು ಭಾರತೀಯ ವಾಯುಪಡೆಯ (ಐಎಎಫ್) ಪೈಲಟ್ಗಳು ಸಾವನ್ನಪ್ಪಿದ್ದಾರೆ.
ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು, 181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ.
ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ಮಹಿಳೆಯರ ಬದುಕು ದುಸ್ತರವಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಗುರುವಾರ ಮಧ್ಯಾಹ್ನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರೇಮಮಯಿ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮಶತಮಾನೋತ್ಸವದ ಮೂಲಾಧಾರವಾದ ‘ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ’ ಹೆಸರಿನ ರಥಯಾತ್ರೆ ದೇಶಾದ್ಯಂತ ಸಂಚರಿಸುತ್ತಿದೆ.
ಮಂಗಳೂರು : ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯಲ್ಲಿರುವ ನೇತ್ರಾವತಿ ನದಿ ತಟದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ಗಳು ಬಿದ್ದಿರುವುದನ್ನು ಕಂಡು ಸಾರ್ವಜನಿಕರು ಶಾಕ್ ಆಗಿದ್ದಾರೆ. ಆಧಾರ್ ಕಾರ್ಡ್ಗಳ ರಾಶಿ ಕಂಡ ಕೂಡಲೇ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
“ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ಸರ್ವಧರ್ಮೀಯರ ಭಾವೈಕ್ಯತೆಯ ಹಬ್ಬಗಳ ಆಚರಣೆಯ ಅಂಗವಾಗಿ, ಈ ವರ್ಷ 11ನೇ ವರ್ಷದ ರಂಝಾನ್ ಇಫ್ತಾರ್ ಸೌಹಾರ್ದ ಕೂಟವನ್ನು ಮಾರ್ಚ್ 7ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಕಾರ್ಪೋರೇಟರ್ ಜೆ. ನಾಗೇಂದ್ರ ಕುಮಾರ್ ಅವರು ತಿಳಿಸಿದರು.
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.
ಯಾವುದೇ ಸೌಲಭ್ಯಗಳಿಲ್ಲದ ಕಾಲದಲ್ಲಿ, ಭಾರತ ಬ್ರಿಟಿಷರ ಆಳ್ವಿಕೆಯಲ್ಲಿದ್ದ ಸಂದರ್ಭದಲ್ಲಿ ಸಿ.ವಿ.ರಾಮನ್ ಅವರು ಶ್ರೇಷ್ಟ ಆವಿಷ್ಕಾರಗಳನ್ನು ವಿಜ್ಞಾನ ಪ್ರಪಂಚದಲ್ಲಿ ಸಾಧಿಸಿತೋರಿದವರು. ಬೆಳಕಿನ ಚದುರುವಿಕೆಗೆ ಸಂಬಂಧಿಸಿದ ರಾಮನ್ ಪರಿಣಾಮಗಳನ್ನು ಕಂಡು ಹಿಡಿದವರು. ರಾಮನ್ ಪರಿಣಾಮದ ದಿನವಾದ ಫೆಬ್ರವರಿ 28 ಅನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಆಚರಿಸಲಾಗುತ್ತದೆ ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಧ್ಯಾಪಕ ಡಾ. ಎ.ಪಿ ರಾಧಾಕೃಷ್ಣ ಹೇಳಿದರು.
ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ಗೂಂಡಾಗಿರಿ ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸಹಬಾಳ್ವೆ ಉಡುಪಿ ಜಿಲ್ಲೆ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು.
ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಬಿ.ಸಿ ರೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಮೂಲಕ ಮಣ್ಣು ಸಾಗಿಸುತ್ತಿದ್ದ ಬಗ್ಗೆ ವರದಿಯಾಗಿದೆ.
ಕುಂದಾನಗರಿ ಬೆಳಗಾವಿಯಲ್ಲಿ ಹೋಳಿ ಹಬ್ಬದ ಆಚರಣೆಯು ಈ ಬಾರಿ ವಿಶೇಷ ಕಾರಣಕ್ಕೆ ಗಮನ ಸೆಳೆದಿದೆ. ನಗರದ ಬೀದಿಗಳಲ್ಲಿ ನಡೆದ ವೈವಿಧ್ಯಮಯ ಮತ್ತು ವರ್ಣರಂಜಿತ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರು ಮತ್ತು ಸಾರ್ವಜನಿಕರು, ಭಾರತದ ರಾಷ್ಟ್ರಧ್ವಜದೊಂದಿಗೆ ಇಸ್ರೇಲ್ ದೇಶದ ಧ್ವಜವನ್ನೂ ಹಾರಿಸುವ ಮೂಲಕ ಸುದ್ದಿಯಾಗಿದ್ದಾರೆ.
ಭಾರತೀಯ ರಾಯಭಾರ ಕಚೇರಿಯು ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ ಮತ್ತು ಸಾರಿಗೆ, ಆಹಾರ, ವಸತಿ ವ್ಯವಸ್ಥೆ ಮಾಡಿದೆ.
ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಮರ್ಚೆಂಟ್ ನೇವಿಯಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರಿನ ನಿಶ್ಚಿತ್ ಕಳೆದ 8 ದಿನಗಳಿಂದ ನಾಪತ್ತೆಯಾಗಿದ್ದಾರೆ.
ವಿಶ್ವ ಬೊಜ್ಜು ದಿನದ ಅಂಗವಾಗಿ ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯು ಸಮಗ್ರ ಮತ್ತು ವೈದ್ಯರ ನೇತೃತ್ವದ ಜೀವನಶೈಲಿ ಕೇಂದ್ರಿತ ಕ್ಲಿನಿಕ್ KLICK- – KMC Lifestyle & Integrated Care KLICK ನ್ನು ಮಾರ್ಚ್ 4 ರಂದು ಆರಂಭಿಸಿದೆ.
ಕರ್ನಾಟಕ ರಾಜ್ಯ ರೈತ ಸಂಘಕ್ಕೆ ನಂಜನಗೂಡಿನಲ್ಲಿ ನೂತನವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಂಜನಗೂಡು ನಗರದ ಎಪಿಎಂಸಿ ಆವರಣದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಹೆಜ್ಜಿಗೆ ಪ್ರಕಾಶ್ ರವರ ನೇತೃತ್ವದಲ್ಲಿ ಸರಗೂರು, ಹೆಚ್. ಡಿ ಕೋಟೆ ಮತ್ತು ನಂಜನಗೂಡು ಸಂಘದ ನೂತನ ಪದಾಧಿಕಾರಿಗಳ ಮೂಲಕ ಸಂಘಟನೆಗೆ ಕಾಲಿಟ್ಟರು.
ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ 22 ಲಕ್ಷ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಿಜಯನಗರದ ನಿವಾಸಿ ವೃತ್ತಿಯಲ್ಲಿ ವೈದ್ಯರಾದ ಕಂಠೇಶ್ ಕೆ ಕಟ್ಟಿ ಎಂಬುವರೇ ವಂಚನೆಗೆ ಒಳಗಾದವರು.