Showing 20 of 20442 articles • Page 159 of 1023
ಕರಾವಳಿಯಲ್ಲಿ ಬಹುವೈಶಿಷ್ಟ್ಯತೆಯಿಂದ ಮರಾಠಿ, ಕುಡುಬಿ ಹಾಗೂ ಖಾರ್ವಿ ಸಮುದಾಯಗಳು ಆಚರಿಸುವ ಹೋಳಿ ಕುಣಿತವನ್ನು ಉಡುಪಿ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು
ಜಾಗತಿಕ ರಾಜಕೀಯ ಬಿಕ್ಕಟ್ಟಿನಿಂದಾಗಿ ಮಾರ್ಚ್ 19 ರಂದು ಬಿಡುಗಡೆಯಾಗಬೇಕಿದ್ದ ಯಶ್ ಅವರ ಟಾಕ್ಸಿಕ್ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ.
ಹಿಂದೂ ಯುವ ಸೇನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮಾಂತರ ಠಾಣೆಯ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಜಮೀನು ವಿವಾದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪವಿದ್ದು, ಇಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಸ್ರೇಲ್-ಅಮೆರಿಕದ ಪ್ರತೀಕಾರದ ದಾಳಿಯ ನಡುವೆ ಇರಾನ್ ಹೊಸ ನಾಯಕನನ್ನ ಆಯ್ಕೆ ಮಾಡಿದೆ. ತಜ್ಞರ ಸಭೆಯು ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನ ಇರಾನ್ನ ಹೊಸ ಸರ್ವೋಚ್ಛ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಇರಾನ್ನ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನುಸರಿಸುತ್ತಿರುವ “ಕ್ರೆಡಿಟ್ ರಾಜಕಾರಣ” ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯವೈಖರಿಯನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಂಗಳೂರು : ಮದ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ನಡುವೆ ಆಕಾಶದಲ್ಲಿ ಯಾವುದೇ ವಸ್ತು ಹಾರಾಡಿದರೂ,ಭಯ ,ಗೊಂದಲ ಮೂಡೋದು ಸಹಜ. ಅಂತಹ ಪರಿಸ್ಥಿತಿ ಇರುವ ಸಂದರ್ಭದಲ್ಲಿ ಏಕಾಏಕಿ ದೊಡ್ಡ ಗಾತ್ರದ ದ್ರೋಣ್ ಒಂದು ಆಕಾಶದ ತುಂಬೆಲ್ಲಾ ಹಾರಾಡಿದಾಗ ಜನ ಆತಂಕ ಪಡೋದು ಸಾಮಾನ್ಯವೇ.
ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ ಎಂದು ಪ್ರಚೋದನಕಾರಿ ಕಮೆಂಟ್ ಹಾಕಿರುವ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ಇಂದು ರಾತ್ರಿ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎ.ಜೆ. ವೈದ್ಯಕೀಯ ಕಾಲೇಜಿನ ಇ.ಎನ್.ಟಿ (ENT) ವಿಭಾಗದ ಪ್ರಾಧ್ಯಾಪಕರಾದ ಡಾ. ದೇವನ್ ಅವರು ಇತ್ತೀಚೆಗೆ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಅತ್ಯಂತ ಪ್ರತಿಷ್ಠಿತ ‘ಟೆಡ್ ಎಕ್ಸ್ ಸೇಂಟ್ ಅಲೋಶಿಯಸ್’ (TEDxStAloysius) ಸಮ್ಮೇಳನಕ್ಕೆ ಅತಿಥಿ ಉಪನ್ಯಾಸಕರಾಗಿ ಆಹ್ವಾನಿತರಾಗಿದ್ದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ಹಾಗೂ ಬ್ರಹ್ಮಾವರ ತಾಲೂಕು ಸಂಘದ ಉಪಾಧ್ಯಕ್ಷ ಮತ್ತು ಪ್ರಜಾವಾಣಿ ಪತ್ರಿಕೆಯ ಬ್ರಹ್ಮಾವರ ವರದಿಗಾರ ಶೇಷಗಿರಿ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.
ರಂಗಭೂಮಿ ಉಡುಪಿ ಸಂಸ್ಥೆಯ ಈ ವರ್ಷದ ರಂಗಭೂಮಿ ರಂಗೋತ್ಸವ ಇದೇ ಮಾ.4ರಿಂದ 8ರ ವರೆಗೆ ನಗರದ ಎಂಜಿಎಂ ಕಾಲೇಜಿನ ಮುದ್ದಣ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ಮೊದಲನೆಯ ದಿನ ಮಾ. 4ರಂದು ಸಂಜೆ 6ಗಂಟೆಗೆ ಹಿರಿಯ ರಂಗಕರ್ಮಿ, ನಾಟಕಕಾರ ಪ್ರಸನ್ನ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಜೈನ ಧರ್ಮವು ಧಾರ್ಮಿಕ ಸಹಿಷ್ಣುತೆ, ಆತ್ಮಶುದ್ಧಿ ಮತ್ತು ತಪಸ್ಸಿನ ಮೂಲಕ ಮೋಕ್ಷಪ್ರಾಪ್ತಿಯ ಮಾರ್ಗವನ್ನು ತೋರಿಸುತ್ತದೆ. ಅಹಿಂಸೆಯ ಪರಮತತ್ವವು ಭಾರತೀಯ ಸಂಸ್ಕೃತಿಯ ನೈತಿಕ ಮೌಲ್ಯಗಳನ್ನು ಗಟ್ಟಿಗೊಳಿಸಿದೆ.
ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೆ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮಹತ್ವದ ಕೆಲಸಕ್ಕೆ ಮುಂದಾಗಿದ್ದಾರೆ. ತೆಲುಗಿನ 44 ಸರ್ಕಾರಿ ಶಾಲೆಗಳ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವುದಾಗಿ ಘೋಷಿಸಿದ್ದಾರೆ.
ಅಮೆರಿಕ ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಸಾವು ವಿಚಾರವಾಗಿ ಮೈಸೂರು ಪಿರಿಯಾಪಟ್ಟಣದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಶಿಯಾ ಮುಸ್ಲಿಂ ಸಮುದಾಯದಿಂದ ಮೇಣದಬತ್ತಿ ಬೆಳಗಿ ಮೌನ ಪ್ರತಿಭಟನೆ ನಡೆಸಲಾಯಿತು.
ಕೋಟ್ಯಂತರ ರೂಪಾಯಿಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು (ಇಡಿ) ಮಂಗಳೂರಿನ ಪಿಎಂಎಲ್ಎ (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ) ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ರೋಷನ್ ಸಲ್ಡಾನಾ, ಡಾಫ್ನಿ ಡಿಸೋಜಾ ಮತ್ತು ಇತರರ ವಿರುದ್ಧ ಅಂತಿಮ ವರದಿ (ಪ್ರಾಸಿಕ್ಯೂಷನ್ ಕಂಪ್ಲೇಂಟ್) ಸಲ್ಲಿಸಿದೆ.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲ ಸೋಮೇಶ್ವರದ ಯುವಕನೊಬ್ಬ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಂದ್ರ ಗ್ರಹಣ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳದ ಬಾಗಿಲು ಬಂದ್ ಮಾಡಲಾಗಿದೆ. ಮಂಜುನಾಥ ಸ್ವಾಮಿಗೆ ಮಹಾಪೂಜೆ ಬಳಿಕ ದೇವರ ದರ್ಶನ ಬಂದ್ ಮಾಡಲಾಗಿದೆ. ಮಧ್ಯಾಹ್ನ 1.30ರವರೆಗಷ್ಟೇ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಕಾರ್ ಸ್ಟ್ರೀಟ್ನ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಎಂ. ಸತೀಶ್ ಪ್ರಭು ಅವರು ಇಂದು ನಿಧನರಾದರು
ಇಸ್ರೇಲ್-ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಮಂಗಳೂರು ಮತ್ತು ಗಲ್ಫ್ ರಾಷ್ಟ್ರಗಳ ನಡುವಣ ವಿಮಾನ ಸಂಚಾರವನ್ನು ಮಾ. 4ರ ವರೆಗೆ ರದ್ದು ಮಾಡಲಾಗಿದೆ.