Showing 20 of 20442 articles • Page 160 of 1023
ವೈದ್ಯೆಯೊಬ್ಬರು ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಮಸ್ಯೆ ಉಲ್ಭಣವಾಗಿ ರೋಗಿ ICU ದಾಖಲಾದ ಆರೋಪ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ. ಚಿಕಿತ್ಸೆ ನೀಡಿದ ಬಗ್ಗೆ ಮಾಹಿತಿ ನೀಡದೆ ಉಡಾಫೆ ವರ್ತನೆ ತೋರಿದ ವೈದ್ಯೆ ವಿರುದ್ದ ಕ್ರಮ ಕೈಗೊಳ್ಳುವಂತೆ ರೋಗಿ ಆರೋಗ್ಯಾಧಿಕಾರಿಗೆ ದೂರು ನೀಡಿದ್ದಾರೆ.
ನಗರದ ಕೂಳೂರಿನ ಕಿಟ್ಟ ಮೊಗೇರ ವೇದಿಕೆಯಲ್ಲಿ ಫೆಬ್ರವರಿ 14 ಮತ್ತು 15 ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರಿನ ಶ್ರೀ ವಿನೋದ ಕುಮಾರ್ ಎಂ. ಅವರು ಅಮೋಘ ಸಾಧನೆ ಮಾಡಿದ್ದಾರೆ.
ಸಂಸದ ಸುನಿಲ್ ಬೋಸ್ ರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಲಾಯಿತು. ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ಚೌಹಳ್ಳಿ ಮಾದಾಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಸದ ಸುನಿಲ್ ಬೋಸ್ ಭೇಟಿ ನೀಡಿದರು.
ಇಂದು ವರ್ಷದ ಮೊದಲ ಚಂದ್ರಗ್ರಹಣ ಹಿನ್ನೆಲೆ ಜಿಲ್ಲೆಯ ಬಹುತೇಕ ದೇಗುಲಗಳ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ.
ಚಂದ್ರ ಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡೇಶ್ವರಿ ದೇವರ ದರ್ಶನದಲ್ಲಿ ಬದಲಾವಣೆ ಮಾಡಲಾಗಿದೆ. ಗ್ರಹಣ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ದೇವಾಲಯ ಬಂದ್ ಮಾಡಲಾಗಿದೆ.
10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ಕೇರಳ ಮೂಲದ ಇಬ್ಬರನ್ನ ಸಿಸಿಬಿ ನಾರ್ಕೊಟಿಕ್ಸ್ ತಂಡ ಬಂಧಿಸಿದ ಘಟನೆ ಬಾಗಲೂರಿನ ಪ್ರೆಸ್ಟೀಜ್ ಫೈನ್ ಬೇಕರಿ ಪಾರ್ಕ್ನ ಫ್ಲಾಟ್ವೊಂದರಲ್ಲಿ ನಡೆದಿದೆ.
ಅಕ್ರಮವಾಗಿ ಲಾರಿಯಲ್ಲಿ ತುಂಬಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಜಾನುವಾರುಗಳನ್ನು ಇಲ್ಲಿನ ಪೊಲೀಸರು ದಾಳಿ ನಡೆಸಿ ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
ಬಜ್ಪೆಯಲ್ಲಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಫೋಟೋ ಇರುವ ಇನ್ಸ್ಟಾಗ್ರಾಮ್ ಪೇಜ್ನಲ್ಲಿ, ಉಳ್ಳಾಲದ ಮಸೀದಿಯ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ದುಷ್ಕರ್ಮಿಯ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆಯು ಹಲವು ವಾರಗಳ ಕಾಲ ನಡೆಯುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಇಸ್ರೇಲ್-ಇರಾನ್ ಯುದ್ಧದಿಂದಾಗಿ ರದ್ದಾಗಿದ್ದ ವಿಮಾನಯಾನ ಸೇವೆ ಇಂದಿನಿಂದ ಆರಂಭವಾಗಿದ್ದು, ಸಾಕಷ್ಟು ಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ.
ದುಷ್ಕರ್ಮಿಯೊಬ್ಬ ಅಮಾಯಕರ ಮೇಲೆ ಮನಬಂದಂತೆ ಗುಂಡು ಹಾರಿಸಿ ಇಬ್ಬರು ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಘಟನೆ ಟೆಕ್ಸಾಸ್ನ ಆಸ್ಟಿನ್ನಲ್ಲಿ ನಡೆದಿದೆ. ಮೃತಪಟ್ಟವರ ಪೈಕಿ ಒಬ್ಬ ವಿದ್ಯಾರ್ಥಿನಿ ಭಾರತೀಯ ಮೂಲದವಳಾಗಿದ್ದಾಳೆ ಎಂಬ ಮಾಹಿತಿ ತಿಳಿದು ಬಂದಿದೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು ವಿರೋಧಿಸಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.
ಗಲ್ಫ್ ವಲಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾರ್ಚ್ 3 ರಂದು ದುಬೈ, ದೋಹಾ, ದಮ್ಮಾಮ್, ಕತಾರ್ ಮತ್ತು ಅಬುಧಾಬಿಗೆ ತೆರಳಬೇಕಿದ್ದ ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಇರಾನ್ ಪರಮೋಚ್ಚ ನಾಯಕ ಖಮೇನಿ ಅವರ ಹತ್ಯೆಯಿಂದ ಭಾರತದ ಹಲವು ಕಡೆ ಪ್ರತಿಭಟನೆಗಳು ನಡೆದಿದ್ದು, ಜಮ್ಮ ಮತ್ತು ಕಾಶ್ಮೀರದಲ್ಲಿ ಭುಗಿಲೆದ್ದಿದ್ದವು.
ಮಾರ್ಚ್ 06 ರಂದು ಬಜೆಟ್ ಮಂಡನೆ ಆಗುತ್ತಿದ್ದು, ನಮ್ಮ ನಂಜನಗೂಡು ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅನುದಾನವನ್ನು ನೀಡುತ್ತಾರೆ ಎಂಬ ಭರವಸೆ ನನಗಿದೆ ಎಂದು ಶಾಸಕ ದರ್ಶನ್ ಧ್ರುವ ನಾರಾಯಣ್ ತಿಳಿಸಿದರು.
ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿಯ ಉನ್ನತ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮಾರ್ಚ್ 03 ರಂದು ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೇವಾಲಯದಲ್ಲಿ ಗ್ರಹಣ ದಿನದಂದು ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಭಕ್ತರು ಎಂದಿನಂತೆ ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆಯಬಹುದಾಗಿದೆ.
ಒಳ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಬಲಗೈ ಸಂಬಂಧಿತ ಜಾತಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಬಲಗೈ ಜಾತಿ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಸ್ರೇಲ್ -ಇರಾನ್ ನಡುವಿನ ಯುದ್ಧದಲ್ಲಿ ಕನ್ನಡಿಗರ ರಕ್ಷಣೆ ವಿಚಾರವಾಗಿ ಮೈಸೂರಿನಲ್ಲಿ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿಕೆ ನೀಡಿದರು. ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.
ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ರೇಷ್ಮೆ ಮಾರುಕಟ್ಟೆಗೆ ಉಪಯೋಗಿಸಲ್ಪಟ್ಟ ಒಂದೂವರೆ ಎಕರೆ ಜಾಗವನ್ನು ಉದ್ಯಾನವನ ಬಳಸಲು ತೀರ್ಮಾನ ಮಾಡಿದ್ದೆವು. ಈಗ ಮತ್ತೆ ಆ ಆದೇಶವನ್ನ ಮರು ಪರಿಶೀಲನೆ ಮಾಡಿದ್ದೇವೆ ಎಂದು ಮೈಸೂರಿನಲ್ಲಿ ಡಾ. ಹೆಚ್ ಸಿ ಮಹದೇವಪ್ಪ ಹೇಳಿಕೆ ನೀಡಿದ್ದರು.