Showing 20 of 20442 articles • Page 161 of 1023
ತಂಬಾಕು ಮಂಡಳಿಯ ವತಿಯಿಂದ ಜನಪ್ರತಿನಿಧಿಗಳು ಮತ್ತು ತಂಬಾಕು ವರ್ತಕರೊಂದಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದಲ್ಲಿ ಸಭೆ ನಡೆಸಲಾಯಿತು.
ಕಾಪು ಕ್ಷೇತ್ರದ ಅಭಿವೃದ್ಧಿ, ಜನಪರ ಕಾರ್ಯಕ್ಕೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಡ್ಡಿಪಡಿಸಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಸಂಘರ್ಷದ ರಾಜಕೀಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುಡುಗಿದ್ದಾರೆ.
ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಕೇಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.
ಹಳೇ ದ್ವೇಷ ಹಿನ್ನಲೆ ದ್ವಿತೀಯ ಪಿಯು ವಿದ್ಯಾರ್ಥಿನಿ ಭವಿಷ್ಯಕ್ಕೆ ಕುಟುಂಬವೊಂದು ತಣ್ಣೀರೆರೆಚಲು ಹುನ್ನಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಒಳ ಮೀಸಲಾತಿ ಗೊಂದಲ ವಿಚಾರವಾಗಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಪ್ರತಿಕ್ರಿಯೆ ನೀಡಿದರು.
ತೆಂಗಿನ ಗರಿಯೇ ಇವರಿಗೆ ಮೇಲ್ಚಾವಣಿ, ಕುಸಿದು ಬಿದ್ದಿರುವ ಮನೆ, ಬಿರುಕು ಬಿಟ್ಟ ಮಣ್ಣಿನ ಗೋಡೆಗಳು, ರಕ್ಷಣೆಗೆ ಮನೆ ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಆಸರೆ, ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವ ಬದುಕುತ್ತಿರುವ ಕುಟುಂಬಸ್ಥರ ಗೋಳು ಕೇಳುವವರೇ ಇಲ್ಲ.
ಒಂದನೇ ತರಗತಿಗೆ ದಾಖಲಾಗುವ 6 ವರ್ಷ ವಯಸ್ಸಿನ ಮಿತಿಯನ್ನ ಈ ವರ್ಷವೂ ಸಡಿಲ ಮಾಡಬೇಕು ಎಂದು ಮತ್ತೆ ಪೋಷಕರು ಸರ್ಕಾರವನ್ನ ಒತ್ತಾಯಿಸಿದ್ದಾರೆ.
ನೇತ್ರಾವತಿ ಸೇತುವೆಯಲ್ಲಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತನನ್ನು ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಬಳ್ಳಾರಿಯಿಂದ ಕಬ್ಬಿಣದ ಪೈಪುಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ಮಾಳ ಘಾಟಿಯಲ್ಲಿ ಅಡ್ಡ ಬಿದ್ದು ಅಪಘಾತ ಸಂಭವಿಸಿದೆ.
ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಮುಂದುವರಿದ ಹಿನ್ನೆಲೆ ಇಂದು ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ರದ್ದುಗೊಂಡಿದೆ.
ಅಮೆರಿಕ ಹಾಗೂ ಇಸ್ರೇಲ್ ತನ್ನ ಮೇಲೆ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಭಾನುವಾರ ದಾಳಿ ನಡೆಸಿದೆ. ಇಸ್ರೇಲ್ ಕೇಂದ್ರ ಭಾಗದ ನಗರ ಬೆಟ್ ಶೆಮೆಷ್ ಮೇಲೆ ಇರಾನ್ ನಡೆಸಿದ ಕ್ಷಿಪಣಿಗಳ ದಾಳಿಯಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
80 ಬಡಗುಬೆಟ್ಟುವಿನಲ್ಲಿ ನಡೆಯುವ ಉಡುಪಿ ಕಂಬಳಕ್ಕೆ ಜಿಲ್ಲಾಡಳಿತದಿಂದ 6.30 ಎಕರೆ ಭೂಮಿ ಕಂಬಳ ಸಮಿತಿಗೆ ಹಸ್ತಾಂತರವಾಗಿಲ್ಲ. ಆದ್ದರಿಂದ ಫೆ.28ರಂದು ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಇಸ್ರೇಲ್ ನಡೆಸಿದ ಜಂಟಿ ಸೇನಾದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಸಾವಿಗೀಡಾಗಿದ್ದು, ಯುದ್ಧದ ಭೀಕರತೆಗೆ ಹೊಸ ತಿರುವು ಕೊಟ್ಟಿದೆ.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕಳೆದ ಬಾರಿಗಿಂತ ಈ ಬಾರಿ ಆದಾಯದಲ್ಲಿ ಕುಸಿತ ಕಂಡಿದೆ. ದೇವಾಲಯದ ದಾಸೋಹ ಭವನದಲ್ಲಿ ಹುಂಡಿ ಎಣಿಕೆ ಕಾರ್ಯ ಮಾಡಲಾಗಿದ್ದು, ಒಂದೇ ತಿಂಗಳಿನಲ್ಲಿ 82 ಲಕ್ಷ ರೂ. ಕಾಣಿಕೆ ಬಂದಿದೆ.
ಬಲಮುರಿಯ ಕಾವೇರಿ ನದಿಯಲ್ಲಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಆಸ್ತಿ ವಿಚಾರಕ್ಕೆ ತಂದೆ ಮಗನ ನಡುವೆ ನಡೆದ ಗಲಾಟೆ ತಂದೆ ಕೊಲೆಯಲ್ಲಿ ಅಂತ್ಯವಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋವನಾಳ ಗ್ರಾಮದಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಮಗ ಪೊಲೀಸರಿಗೆ ಶರಣಾಗಿದ್ದಾನೆ.
ಇಸ್ರೇಲ್ ಹಾಗೂ ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಗಾರ್ಡಿಯನ್ ಕೌನ್ಸಿಲ್ನ ಧರ್ಮಗುರು ಅಯಾತೊಲ್ಲಾ ಅಲಿರೆಜಾ ಅರಾಫಿ ಅವರನ್ನು ಇರಾನ್ನ ಮಧ್ಯಂತರ ಸರ್ವೋಚ್ಚ ನಾಯಕರನ್ನಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
ಧರ್ಮಕ್ಷೇತ್ರದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಹಾಗೂ ಬೈಬಲ್ ಆಯೋಗದ ಜಂಟಿ ಆಶ್ರಯದಲ್ಲಿ ಕುಲಶೇಕರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ಬಯಲು ಮೈದಾನದಲ್ಲಿ ನಡೆಯುತ್ತಿದ್ದ ನಾಲ್ಕು ದಿನಗಳ ‘ಬೃಹತ್ ಬೈಬಲ್ ಅಧಿವೇಶನ 2026’ ಭಾನುವಾರ (ಮಾರ್ಚ್ 1) ಅತೀವ ಭಕ್ತಿಭಾವದಿಂದ ಸಂಪನ್ನಗೊಂಡಿತು.
ಇಂದು ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಶ್ರೀ ಡಿ. ಕೆ. ಶಿವಕುಮಾರ್ ಹಾಗೂ ಕರ್ನಾಟಕ ಸರ್ಕಾರದ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೆಗೌಡ ಅವರನ್ನು ಬೆಂಗಳೂರು ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೋವಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ಪಡೆಯಲು ಆಗುವ ಸಮಸ್ಯೆಯ ಬಗ್ಗೆ ಅವರಿಗೆ ವಿಸ್ತಾರವಾಗಿ ಪವನ್ ಕುಮಾರ್ ಶಿರ್ವ ಅವರು ವಿವರಿಸಿದರು.
ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್ಶಾಖೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.