Showing 20 of 20442 articles • Page 164 of 1023
ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ ವಿಮಾನಯಾನ ಸೇವೆಯು ಮಾರ್ಚ್ 1 ರಿಂದ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ.
AJ Hospital and Research Centre ನಲ್ಲಿ ಮೇಲ್ಶ್ವಾಸಮಾರ್ಗ/ಆಹಾರನಾಳದಲ್ಲಿ ಸಿಲುಕಿಕೊಂಡಿದ್ದ ವಿದೇಶಿ ವಸ್ತು (Foreign Body) ನುಂಗಿದ ಹಿನ್ನೆಲೆಯೊಂದಿಗೆ ರವಾನೆಯಾಗಿದ್ದ 8 ತಿಂಗಳ ಶಿಶುವಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ.
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಚೇರಿಗಳ ಭೇಟಿ ಮಾಡಿ ನನಗೆ ಬಹಳ ನೋವಾಗಿದೆ. ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಗಲೀಜು ಹಾಕಲು ಓಪನ್ ಡ್ರಮ್ ಇಟ್ಟಿದ್ದಾರೆ. ಪ್ರತ್ಯೇಕ ಡಸ್ಟ್ ಬಿನ್ ಇರಿಸಲು ಸೂಚಿಸಲಾಗಿದೆ. ತಾಲೂಕು ಕಚೇರಿಯಲ್ಲಿ ತುಂಬಾ ಕೇಸುಗಳು ಪೆಂಡಿಂಗ್ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಹೇಳಿಕೆ ನೀಡಿದ್ದಾರೆ.
ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ 80 ಬಡಗಬೆಟ್ಟು ಇಲ್ಲಿ ನಡೆಯಲಿರುವ ಉಡುಪಿ ಕಂಬಳದ ಶಂಕುಸ್ಥಾಪನೆಯನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಮಾರ್ಚ್ 4 ರಂದು ನೆರವೇರಿಸಲಿದ್ದಾರೆ.
ನಗರದ ಕುಂಟಿಕಾನ ಪರಿಸರದಲ್ಲಿ ಶಾಲಾ ಮಕ್ಕಳ ಅಪಹರಣ ನಡೆಯುತ್ತಿದೆ ಎಂಬ ಆಧಾರರಹಿತ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು.
ಸ್ನೇಹಿತನ ಬ್ಯಾಂಕ್ ಖಾತೆಯನ್ನು ಪಡೆದು ಸೈಬರ್ ವಂಚನೆ ಪ್ರಕರಣಕ್ಕೆ ಬಳಸಿ ಬಳಿಕ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೈಬರ್ ಅಪರಾಧ ಠಾಣೆಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದ್ದು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಸದ್ರಿ ಮನೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಸಚಿವರಾದ ಸಂತೋಷ್ ಲಾಡ್ ಗೆ, ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಇದೆ, ಆ ಕಾರಣದಿಂದ ಈ ರೀತಿಯ ಅತ್ಯುತ್ತಮ ಕಾರ್ಯಕ್ರಮಗಳು ನಡೆಯುತ್ತಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಬೆಂಗಳೂರು ಇದರ ಅಧ್ಯಕ್ಷೆ ಶಾಲೆಟ್ ಪಿಂಟೋ ಹೇಳಿದರು.
ಶ್ರೀ ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತಾಗಿದ್ದು, ಪ್ರಧಾನ ಮಠದ ಶಿಲಾನ್ಯಾಸದ ಮೂಲಕ ಶರಾವತಿ ನದಿ ತೀರದಲ್ಲಿ ಸಹಸ್ರಮಾನದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.
“ಮಾ. 10ರೊಳಗೆ ನಮ್ಮ ಬೇಡಿಕೆ ಈಡೇರಿಸದಿದ್ದರೆ ಕಠಿಣ ಹೋರಾಟ ಫಿಕ್ಸ್” ಎಂದು ಸರಕಾರಿ ವೈದ್ಯಾಧಿಕಾರಿಗಳ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.
ವೈಚಾರಿಕ ಮತ್ತು ವೈಜ್ಞಾನಿಕತೆಯ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಅದರ ಮೂಲ ಉದ್ದೇಶವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಉಡುಪಿಯ ಆರ್ಟಿಸ್ಟ್ಸ್ ಫೋರಂ ಸದಸ್ಯರ ಚಿತ್ರಕಲೆ ಮತ್ತು ಛಾಯಾಚಿತ್ರ ಕೃತಿಗಳ ಸಂಯುಕ್ತ ಪ್ರದರ್ಶನ ‘ಪಯಣ’ ಫೆ.28ರಿಂದ ಮಾ.2ರವರೆಗೆ ಉಡುಪಿಯ ಅಲಂಕಾರ್ ಥಿಯೇಟರ್ ಹಿಂಭಾಗದಲ್ಲಿರುವ ಗ್ಯಾಲರಿ ದೃಷ್ಠಿಯಲ್ಲಿ ನಡೆಯಲಿದೆ ಎಂದು ಫೋರಂ ಅಧ್ಯಕ್ಷ ರಮೇಶ್ ರಾವ್ ತಿಳಿಸಿದರು.
ಫೇಸ್ ಬುಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವ ಫೋಸ್ಟ್ ನ್ನು ಹಾಕಿದ ಬಿಂದು ಸಿರ ಎಂಬ ಮಹಿಳೆ ವಿರುದ್ಧ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮದ ಸಮಾರೋಪ ಸಮಾರಂಭವು ಇದೇ ಫೆ. 28 ಮತ್ತು ಮಾರ್ಚ್ 1ರಂದು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಯುವವಾಹಿನಿ ಉಡುಪಿ ಘಟಕದ ದಯಾನಂದ ಕರ್ಕೇರ ತಿಳಿಸಿದರು.
ಕಾಂತಾರದ ವರಾಹರೂಪಂ ಖ್ಯಾತಿಯ ಸಾಯಿ ವಿಘ್ನೇಶ್ ಹಾಗೂ ಪತ್ನಿ ಖ್ಯಾತ ಭರತನಾಟ್ಯ ಕಲಾವಿದೆ ಕಾವ್ಯ ಮುರಳೀಧರನ್ ಅವರು ವಿವಾಹದ ಬಳಿಕ ಪ್ರಥಮ ಬಾರಿಗೆ ಕೃಷ್ಣಮಠಕ್ಕೆ ಆಗಮಿಸಿ ಕೃಷ್ಣನ ದರ್ಶನ ಪಡೆದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಮಳೆಮಾಪನ ಕೇಂದ್ರಗಳ ದುರವಸ್ಥೆಯಿಂದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಪರಿಹಾರ ವಿತರಣೆಯಲ್ಲಿ ಗಂಭೀರ ಗೊಂದಲ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಗ್ರಾ.ಪಂ.ಗಳ ಮಳೆಮಾಪನ ಕೇಂದ್ರಗಳನ್ನು ಸುಸ್ಥಿತಿಯಲ್ಲಿಡಲು ಸರ್ಕಾರ ಗಮನ ಹರಿಸಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ತೋಟಗಾರಿಕಾ ಸಚಿವರಿಗೆ ಪತ್ರಬರೆದಿದ್ದಾರೆ.
ಶ್ರೀ ಕೃಷ್ಣ ಮಠಕ್ಕೆ ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.
ಭಾರತದಲ್ಲಿ ಗರ್ಭಕಂಠದ ಕ್ಯಾನ್ಸರ್ನ ಹೆಚ್ಚಿನ ಹೊರೆಯನ್ನು ಕಡಿಮೆ ಮಾಡಲು 14 ವರ್ಷ ವಯಸ್ಸಿನ ಬಾಲಕಿಯರಿಗೆ ದೇಶಾದ್ಯಂತ ಏಕ-ಡೋಸ್ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ಅಭಿಯಾನವನ್ನು ಕೇಂದ್ರ ಸರ್ಕಾರ ಜಾರಿಗೆ ತರಲು ಸಜ್ಜಾಗಿದೆ.