Showing 20 of 20442 articles • Page 165 of 1023
ಮಂಗಳೂರು: ಕೆಎಂಎಫ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಡಾ|| ಶರಣ್ಯ ಅವರನ್ನು ಮಣಿಪಾಲ್ ಆಸ್ಪತ್ರೆ ಕೆಲಸದಿಂದ ಕಿತ್ತು ಹಾಕಿದೆ. ಈ ನಡುವೆ ಶರಣ್ಯ ಮೇಲೆ ಎಫ್ಐಆರ್ ದಾಖಲಾಗಿದ್ದು 25 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಕೂಡ ಹಾಕಲಾಗಿದೆ. ಕೆಎಂಎಫ್ ಉತ್ಪನ್ನಗಳ ಬಗ್ಗೆ ಶರಣ್ಯ ವ್ಯಾಪಕ ಅಪಪ್ರಚಾರ ಮಾಡುತ್ತಿದ್ದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಉದ್ಯಮಶೀಲತೆಯತ್ತ ಸೆಳೆಯುವ ಹಾಗೂ ಅವರಿಗೆ ಭವಿಷ್ಯದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬೇಕಾಗುವ ಅಗತ್ಯ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ಮಂಗಳೂರಿನಲ್ಲಿ ಫೆ.28ರಂದು ‘ಪ್ರೇರಣಾ-2026’ ಉದ್ಯಮಶೀಲತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ರೋಗಿಗಳು ವಾರಾಂತ್ಯಗಳಲ್ಲಿಯೂ ಸಹ ಗುಣಮಟ್ಟದ ವೈದ್ಯಕೀಯ ಸೇವೆ ಪಡೆಯುವಂತಾಗಲು ಮಂಗಳೂರಿನ ಡಾ ಬಿ ಆರ್ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯು ಹೊರರೋಗಿ ವಿಭಾಗ (OPD) ಸೇವೆಯನ್ನು ಮಾರ್ಚ್ 1, 2026 ರಿಂದ ಪ್ರತಿ ಭಾನುವಾರವೂ ಒದಗಿಸುವುದಾಗಿ ಘೋಷಿಸಿದೆ.
ಇಬ್ಬರ ನಡುವೆ ಮಾರಾಮಾರಿ ನಡೆದು ಇಂಟೆರ್ ಲಾಕ್ ಕಲ್ಲಿನಿಂದ ಪರಸ್ಪರ ಹೊಡೆದು ಗಾಯ ಮಾಡಿಕೊಂಡಿರುವ ಘಟನೆ ಮಂಗಳೂರು ಕಾರ್ಸ್ಟ್ರೀಟ್ ನಲ್ಲಿ ನಡೆದಿದೆ. ಪರಸ್ಪರ ಹಲ್ಲೆ ನಡೆಸುವಾಗ ಅಂಗಡಿಗಳಿಗೆ ಹಾನಿಯಾಗಿದೆ.
ನಗರದ ಬಾಬುಗುಡ್ಡ ಎಂಬಲ್ಲಿ ರೈಲ್ವೆ ಹಳಿ ಮೇಲೆ ಕುಳಿತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ-ವಿದ್ಯಾರ್ಥಿನಿಯ ವೀಡಿಯೋ ಮಾಡಿ, ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ತಂದೆ ಮತ್ತು ಮಗನನನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಬಂಧಿತ ಆರೋಪಿಗಳು.
ಪತ್ನಿ ಅಂದ್ರೆ ಪತಿಗೆ ಇಷ್ಟ. ಹೀಗಾಗಿ ತನ್ನ ಪತ್ನಿಯನ್ನು ಖುಷಿಪಡಿಸಲು ಪತಿ ಏನೆಲ್ಲಾ ಸಾಹಸವನ್ನು ಮಾಡ್ತಾನೆ. ಹೌದು. ಇಲ್ಲೋರ್ವ ವ್ಯಕ್ತಿ ತನ್ನ ಪತ್ನಿ ಗರ್ಭೀಣಿ ಆಗಿದ್ದಕ್ಕೆ ಸೀಮಂತ ಕಾರ್ಯಕ್ರಮಕ್ಕೆ ಸರ್ ಪ್ರೈಸ್ ನೀಡಲು ಹೊಸ ಐಡಿಯಾ ಮಾಡಿದ್ದು ಎಲ್ಲರ ಗಮನ ಸೆಳೆದಿದೆ.
ನಗರದ ಪ್ರತಿಷ್ಠಿತ ಬಿಜೈ ಲೂರ್ಡ್ಸ್ ಸ್ಕೂಲಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ.
ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ ವತಿಯಿಂದ “ಮರಾಟಿ ಹೋಳಿ ಸಂಭ್ರಮ -2026” ಅನ್ನು ಇದೇ ಮಾರ್ಚ್ 1ರಂದು ಸಂಜೆ 4ಗಂಟೆಗೆ ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಮುಂಡ್ಕಿನಜೆಡ್ಡು ಆರ್.ಕೆ. ಪಾಟ್ಕರ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಉಮೇಶ್ ಎ. ನಾಯ್ಕ್ ಚೇರ್ಕಾಡಿ ತಿಳಿಸಿದರು.
ಬೆಂಗಳೂರು- ಮಾಡ್ಗಾಂವ್ ಮಾರ್ಗದಲ್ಲಿ ಹೊಸದಾಗಿ ಆರಂಭಿಸಲು ಉದ್ದೇಶಿಸಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲು ಕೆಲ ಲಾಬಿ ನಡೆಯುತ್ತಿದೆ. ಮಂಗಳೂರಿನ ಸಿಟಿ ಒಳಗೆ ರೈಲು ಸಂಚಾರ ಮಾಡುವಂತೆ ಒತ್ತಡ ತರಲಾಗುತ್ತಿದ್ದು, ಇದರಿಂದ ರೈಲಿನ ಸಂಚಾರದಲ್ಲಿ ಬಹಳಷ್ಟು ವಿಳಂಬವಾಗಲಿದೆ. ದೂರದ ಪ್ರಯಾಣಿಕರಿಗೆ ಬಹಳಷ್ಟು ತೊಂದರೆ ಆಗಲಿದೆ ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್ ತಿಳಿಸಿದರು.
ಹಾಲು ಉತ್ಪಾದಕರ ಸಂಘದಲ್ಲಿ ಈ ಹಿಂದೆ ಕಳಪೆ ಗುಣಮಟ್ಟದ ಹಾಲನ್ನು ಸ್ವೀಕರಿಸದೆ ತಿರಸ್ಕಾರ ಮಾಡಲಾಗುತ್ತಿತ್ತು. ಮುಂದಿನ ಹಂತದಲ್ಲಿ ಕೆಳಪೆ ಗುಣಮಟ್ಟದ ಹಾಲನ್ನು ಕೂಡ ಸ್ವೀಕರಿಸಲು ಸಂಘದಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ ಅವರಿಗೆ ಸರಕಾರದ 5ರೂ. ಅನುದಾನ ಇರುವುದಿಲ್ಲ ಹಾಗೂ ದರದಲ್ಲಿಯೂ ವ್ಯಾತ್ಯಾಸ ಇರುತ್ತದೆ ಎಂದು ದ.ಕ ಹಾಲು ಸಹಕಾರಿ ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಹೇಳಿದರು.
ಮೂಡೂರು- ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ಇದರ ವತಿಯಿಂದ ಮಾರ್ಚ್ 7 ಮತ್ತು 8 ರಂದು ನಾವೂರ ಕೂಡಿಬೈಲು ಎಂಬಲ್ಲಿನ ಮೂಡೂರು -ಪಡೂರು ಜೋಡುಕರೆಯಲ್ಲಿ 15 ನೇ ವರ್ಷದ “ಬಂಟ್ವಾಳ ಕಂಬಳ” ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯ ಮರೋಳಿ ಸೂರ್ಯ ನಾರಾಯಣ ದೇವಸ್ಥಾನ ಸಮೀಪದ 37ನೇ ವಾರ್ಡಿನ ಶಾಂತಿನಗರ ರುಕ್ಕಯ್ಯ ದೇವಾಡಿಗ ಮನೆ ಪರಿಸರದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.
ಮಂಗಳೂರು ಧರ್ಮಪ್ರಾಂತ್ಯದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಹಾಗೂ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಜಂಟಿ ಆಶ್ರಯದಲ್ಲಿ ಕುಲಶೇಕರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ಬಯಲು ಮೈದಾನದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ‘ಬೃಹತ್ ಬೈಬಲ್ ಅಧಿವೇಶನ 2026’ ಕ್ಕೆ ಗುರುವಾರ (ಫೆ. 26) ಭಕ್ತಿಪೂರ್ವಕವಾಗಿ ಚಾಲನೆ ನೀಡಲಾಯಿತು. ಈ ಅಧಿವೇಶನವು “ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ನೆಲಸಿದೆ” (ಕೊಲೊ. 3:16) ಎಂಬ ಪ್ರಮುಖ ಧ್ಯೇಯವಾಕ್ಯದೊಂದಿಗೆ ನಡೆಯುತ್ತಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಫೆಬ್ರವರಿ 28, 2026 ರ ಶನಿವಾರ ಮಧ್ಯಾಹ್ನ 2.00 ಗಂಟೆಗೆ ಸಹ್ಯಾದ್ರಿ ಕ್ಯಾಂಪಸ್ನ ನೇತ್ರಾವತಿ ಸಭಾಂಗಣದಲ್ಲಿ ತನ್ನ ಸ್ನಾತಕೋತ್ತರ ಕಾರ್ಯಕ್ರಮದ 15 ನೇ ಪದವಿ ಪ್ರದಾನ ಸಮಾರಂಭವನ್ನು ಆಚರಿಸಲಿದೆ.
ವಿದ್ಯೆ ಎಂದರೆ ಅದು ವಿಮರ್ಶಾತೀತವಲ್ಲ. ವಿದ್ಯೆಯನ್ನೂ ವಿಶ್ಲೇಷಣೆಗೆ ಒಳಪಡಿಸಬೇಕು.
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಡಿಪು ಬಳಿಯ ಬೋಳಿಯಾರ್ನ 28 ವರ್ಷದ ವಿವಾಹಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ನಗರದ ಮಂಗಳಾದೇವಿ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಮಠದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರ ಮಾರ್ಗದರ್ಶನದಲ್ಲಿ ನಡೆಯುವ [ಫೆಬ್ರವರಿ ತಿಂಗಳ 2026] ಎರಡು ವಾರಗಳ ಕಾಲ ಜರುಗಿದ ಯೋಗ ಶಿಬಿರ ಸಮರೋಪಗೊಂಡಿತು.
ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ವರ್ಷಗಳೇ ಉರುಳಿದರೂ ಚರಂಡಿಗಳು ಮಾತ್ರ ಸ್ವಚ್ಛತೆ ಕಾಣದೆ, ಗಬ್ಬೆದ್ದು ನಾರುತ್ತಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ನಿಮ್ಮ ನ್ಯೂಸ್ ಕರ್ನಾಟಕ ಸುದ್ದಿ ವಾಹಿನಿಯಲ್ಲಿ ವರದಿಯನ್ನು ಪ್ರಸಾರ ಮಾಡಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ನವಿಲೂರು ಗ್ರಾಮ ಪಂಚಾಯಿತಿ ಆಡಳಿತ ಚರಂಡಿಗಳನ್ನು ಸ್ವಚ್ಛತೆಗೊಳಿಸಿದ್ದಾರೆ.
ದಲಿತ ಮಹಿಳೆಗೆ ದೇವಾಲಯ ಪ್ರವೇಶ ಹಾಗೂ ಪೂಜೆ ಮಾಡಲು ನಿರಾಕರಿಸಿದ ಆರೋಪದಡಿ ಅರ್ಚಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಿಗಳರಪಾಳ್ಯದಲ್ಲಿ ನಡೆದಿದೆ.
ಮಾಜಿ ಭಾರತೀಯ ಕ್ರಿಕೆಟಿಗ ಶಿಖರ್ ಧವನ್, ಮಾಜಿ ಪತ್ನಿಗೆ ಆಸ್ಟ್ರೇಲಿಯಾದ ಆಸ್ತಿ ಇತ್ಯರ್ಥದಿಂದ ಪಡೆದ 5.7 ಕೋಟಿ ರೂ. ಹಿಂದಿರುಗಿಸುವಂತೆ ಆದೇಶ!