Showing 20 of 20442 articles • Page 166 of 1023
ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ದಕ್ಕೆಯಲ್ಲಿ ಇರುವ ಇಲಾಖೆಯ ನಿರ್ಲಕ್ಷದಿಂದ ಇರುವ ಅವ್ಯವಸ್ಥೆಯ ಬಗ್ಗೆ ಮತ್ತು ವಿದ್ಯುತ್ ಕಂಬ ಬಿದ್ದು ನಿಧನ ಹೊಂದಿದ ಸುಮಾರು 12 ವರ್ಷದಿಂದ ಕೆಲಸ ಮಾಡುತ್ತಿದ್ದ ತಮಿಳುನಾಡು ನಿವಾಸಿ ಮುರುಗನ್ ಅವರ ಕುಟುಂಬಕ್ಕೆ ತುರ್ತಾಗಿ ಪರಿಹಾರ ಘೋಷಿಸಬೇಕೆಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರು ಭೋವಿ ಸಮಾಜದ ಮುಖಂಡ ಪವನ್ ಕುಮಾರ್ ಶಿರ್ವ ಮನವಿ ಸಲ್ಲಿಸಿದರು.
‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಕಳಕ್ಕೆ ಆಗಮಿಸಿದರು.
ಧನ್ವೀರ್ ಗೌಡ ಅಭಿನಯದ ಹಯಗ್ರೀವ ಫೆಬ್ರವರಿ 27ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಬಹು ನಿರೀಕ್ಷಿತ ವನಿತಾ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಜೂ.12ರಿಂದ ಜು.5ರವರೆಗೆ ಇಂಗ್ಲೆಂಡ್ನಲ್ಲಿ ಟೂರ್ನಿ ನಡೆಯಲಿದೆ. ಒಟ್ಟು 12 ತಂಡಗಳು ಟ್ರೋಫಿಗಾಗಿ ಸೆಣಸಾಡಲಿದ್ದು, ಲಂಡನ್ನಲ್ಲಿ ಫೈನಲ್ ಸಮರ ಸಾಗಲಿದೆ.
ಕೊಲೆ ಆರೋಪಿ ಸಂತೋಷ್ ನಿಂದ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಮಂಗಳೂರು ರೈಲ್ವೆ ಟ್ರ್ಯಾಕ್ ನಲ್ಲಿ ಕುಳಿತ ಜೋಡಿಗೆ ಹಲ್ಲೆ ನಡೆಸಲಾಗಿದೆ.
ಶ್ರೀ ಜನಾರ್ದನ ಕಂಬಳ ವತಿಯಿಂದ ದಾನಿಗಳ ಸಹಕಾರದೊಂದಿಗೆ ಪ್ರಥಮ ವರ್ಷದ ಹೊನಲು ಬೆಳಕಿನ “ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ” ಇದೇ ಫೆ. 28ರಂದು ಎರ್ಮಾಳು ಬಡಕೊಟ್ಟು ಬಾಕುಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ತಿಳಿಸಿದರು.
ನಗರದ ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಫೆ.23ರ ಸೋಮವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಚಿರತೆ ಬಂದಿದ್ದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.
ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಫ್ಯಾನ್ಸಿ ಸ್ಟೋರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ವಿದೇಶಿ ಕಾಯ್ದೆ ಉಲ್ಲಂಘನೆ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 12 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಉಡುಪಿಯಲ್ಲಿ ಬಂಧಿಸಿದ್ದಾರೆ.
ಮಹಾನರ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಪೂರ್ಣಗೊಂಡು ಫೆ. 27ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಸದ್ಯಕ್ಕೆ ಚುನಾವಣೆ ನಡೆಯುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ.
ಬೆನ್ನ ಹಿಂದೆ ನಿಂತು ಬೆನ್ನೆಲುಬಾಗಬೇಕಿದ್ದ ಉದ್ಯೋಗಿಯೇ, ಬೆನ್ನಿಗೆ ಚೂರಿ ಹಾಕುವ ‘ಬ್ರೂಟಸ್’ ಆಗಿ ಬದಲಾದ ಕಥೆಯಿದು. ಈ ಕತೆಯ ವಿಲನ್ ಹೆಸರು ಅಭಿಷೇಕ್ ಸುರೇಂದ್ರ ಪೂಜಾರಿ. ಮೂಲತಃ ಉಡುಪಿಯ ಕಾಪು ನಿವಾಸಿ, ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಅನ್ನ ಹಾಕಿ ಆಶ್ರಯ ಕೊಟ್ಟ ಮಾಲೀಕರಿಗೇ ಸ್ಕೆಚ್ ಹಾಕಿದ್ದಾರೆ.
ಕರ್ನಾಟಕದ 11 ಜಿಲ್ಲೆಗಳಲ್ಲಿ ದಿಢೀರ್ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಸಿಡಿಲು ಸಹಿತ ಲಘು ಮಳೆಯಾಗಲಿದ್ದು, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಾಡಿ ಬಿಲ್ಡರ್ ಮಯಾಂಕ್ ಪವಾರ್ (37) ಹಠಾತ್ ಮೃತಪಟ್ಟಿದ್ದಾರೆ. ಸ್ಪ್ಲಿಟ್ಸ್ವಿಲ್ಲಾ 7ನೇ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ಮೂಲಕ ಪವಾರ್ ಭಾರಿ ಜನಪ್ರಿಯತೆ ಪಡೆದಿದ್ದರು.
ಇಲೆಕ್ಟ್ರಿಕ್ ಸ್ಕೂಟರ್ಗೆ ಬೆಂಕಿ ತಗುಲಿದ ಘಟನೆ ಕಾಸರಗೋಡು ಹೊರವಲಯದ ಅಣಂಗೂರಿನಲ್ಲಿ ನಡೆದಿದೆ.
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿಬಿ-ರಾಮ್-ಜಿ ಕಾಯ್ದೆ ರದ್ದು ಮಾಡುವುದು ಮಾತ್ರವಲ್ಲದೆ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ(ಮನರೇಗಾ) ಯೋಜನೆಯನ್ನು ಮರು ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪಾದಯಾತ್ರೆ ಮಾಡಲಾಯಿತು.
ದೇಶದಲ್ಲಿರುವ ಟೋಲ್ ಪ್ಲಾಜಾಗಳನ್ನು ಡಿಜಿಟಲೀಕರಣ ಮಾಡುವ ಉದ್ದೇಶದಿಂದ ಏಪ್ರಿಲ್ 1 ನೇ ತಾರೀಖಿನಿಂದ ನಗದು ಪಾವತಿ ಸೇವೆಯನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ರಾಹುಲ್ನಗರದ ವೀರ ಮಾರುತಿ ಭಜನಾ ಮಂದಿರ ಬಳಿ ಪಾರ್ಕ್ ಮಾಡಿದ್ದ ಪಲ್ಸರ್ ಬೈಕ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಕೇವಲ 11ಗಂಟೆಗಳಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯಲ್ಲಿ ಕಟಿಂಗ್ ಶಾಪ್ನಲ್ಲಿ ನಡೆದ ಘಟನೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಪ್ರಚೋದನೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆದಿಮ ಕಲಾ ಟ್ರಸ್ಟ್ (ರಿ.), ಉಡುಪಿ, ತನ್ನ ಮೊದಲ ವಾರ್ಷಿಕೋತ್ಸವದ ಸವಿನೆನಪಿಗಾಗಿ ಪ್ರಖ್ಯಾತ ಭಾರತೀಯ ಪುರಾತತ್ವ ವಿದ್ವಾಂಸ ಡಾ. ರವೀಂದ್ರ ಕೋರಿಸೆಟ್ಟರ್ ರವರಿಗೆ, ಆದಿಮ ಕಲಾ ರತ್ನ ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯಂತ ಸಂತೋಷ ಮತ್ತು ಸಂಭ್ರಮದಿಂದ ಕೊಡಮಾಡುತ್ತಿದೆ. ಈ ಪ್ರಶಸ್ತಿಯು ರೂ.25.000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.