Showing 20 of 20442 articles • Page 167 of 1023
ಉತ್ಪಾದನೆ ಕೊರತೆ ಎದುರಿಸುತ್ತಿರುವ ರಬ್ಬರ್ ಬೆಳೆಯ ಧಾರಣೆ ದಿನದಿಂದ ದಿನಕ್ಕೆ ಏರಿಕೆ ಕಂಡಿದೆ. ರಬ್ಬರ್ ಖರೀದಿ ಸಂಸ್ಥೆಗಳು ಧಾರಣೆ ಏರಿಕೆ ಖರೀದಿಗೆ ಮುಂದಾಗುತ್ತಿದ್ದರೂ ಪೂರೈಕೆ ಮಾತ್ರ ಇಳಿಕೆ ಹಾದಿಯಲ್ಲೇ ಸಾಗಿದೆ.
ಭಾರತ ಸರ್ಕಾರದ ವಾರ್ತಾ ಶಾಖೆ, ಬೆಂಗಳೂರು (ಪಿಐಬಿ) ವತಿಯಿಂದ ಇಂದು ಉಡುಪಿಯಲ್ಲಿ ವಿಕಸಿತ ಭಾರತ ಜಿ ರಾಮ್ ಜಿ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಆಯೋಜಿಸಿದ್ದ ‘ವಾರ್ತಾಲಾಪ’ ಕಾರ್ಯಾಗಾರವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಿದರು.
ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ ಸುರೇಶ ಲಮಾಣಿ (20) ಎನ್ನುವ ಯುವತಿಯು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಮಾಡಿ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಕ್ಕಳ ಹಾಗೂ ಯುವಜನರ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಆಯೋಜಿಸಿದ್ದ 2025-26ನೇ ಸಾಲಿನ ‘ಕಲಾಪ್ರತಿಭೋತ್ಸವ’ದಲ್ಲಿ ಧಾರವಾಡದ ಸಾನ್ವಿ ಯರಗೊಪ್ಪ ರಾಜ್ಯಮಟ್ಟದ ಪ್ರಥಮ ಸ್ಥಾನ ಗಳಿಸಿದ್ದಾರೆ.
ಕೇರಳವನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಬಹುನಿರೀಕ್ಷಿತ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಪರಿಗಣಿಸಲು ಸಜ್ಜಾಗಿದ್ದು, ರಾಜ್ಯದ ಸಾಂವಿಧಾನಿಕ ಹೆಸರನ್ನು ಅದರ ಸಾಂಪ್ರದಾಯಿಕ ಮಲಯಾಳಂ ಉಚ್ಚಾರಣೆ ಮತ್ತು ಸಾಂಸ್ಕೃತಿಕ ಗುರುತಿಗೆ ಅನುಗುಣವಾಗಿ ಬದಲಾಯಿಸಲು ಮುಂದಾಗಿದೆ.
ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯ ಅಧೀನದ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಇಎನ್ಟಿ, ಹೆಡ್ ಅಂಡ್ ನೆಕ್, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜರಿ ವಿಭಾಗವು ಏಕಕಾಲಿಕ ದ್ವಿಪಾಶ್ವೀಯ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು SmartNav(SmartNavigation) ಇಂಟ್ರಾಒಪರೇಟಿವ್ ತಂತ್ರಜ್ಞಾನ ಬಳಸಿ ಜನ್ಮಜಾತವಾಗಿ ಉಭಯ ಕಿವಿಗಳಲ್ಲೂ ಶ್ರವಣ ನಷ್ಟ ಹೊಂದಿದ್ದ ಮೂರು ವರ್ಷ ಪ್ರಾಯದ ಮಗುವಿಗೆ ಯಶಸ್ವಿಯಾಗಿ ನೆರವೇರಿಸಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ ಯೋಜನೆ)ಯ ಹೆಸರು ಬದಲಾವಣೆ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಸಂಸ್ಥೆಯೊಂದರ ಮುಖ್ಯಸ್ಥರನ್ನು ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಖಾಸಗಿ ವೀಡಿಯೋ ಇದೆ ಎಂದು ಬ್ಲ್ಯಾಕ್ ಮೇಲ್ ಮಾಡಿ ಈಗ ಬಂಧಿತನಾಗಿದ್ದಾನೆ. ಆರೋಪಿ ಉಡುಪಿ ಕಾಪುವಿನ ಅಭಿಷೇಕ್ ಸುರೇಂದ್ರ ಪೂಜಾರಿ ಬಂಧಿತ.
ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದವರು ಪವಾಡ ಸದೃಶವಾಗಿ ಯಾವುದೇ ಗಾಯಗಳಿಲ್ಲದೆ ಪಾರಾಗಿರುವ ಘಟನೆ ಸುಳ್ಯ-ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ಸಂಭವಿಸಿದೆ.
ಶಿರಾ ತಾಲ್ಲೂಕಿನ ಬೆಂಚೆ ಗೇಟ್ ಬಳಿ ಚಿನ್ನದಂಗಡಿ ದೋಚಿ ಪರಾರಿಯಾಗುತ್ತಿದ್ದ ದರೋಡೆಕೋರರನ್ನು ಪೊಲೀಸರು 12 ಗಂಟೆಯಲ್ಲಿ ಬಂಧಿಸಿ, ₹26 ಲಕ್ಷ ಮೌಲ್ಯದ ಚಿನ್ನ– ಬೆಳ್ಳಿ ಆಭರಣ ಜಪ್ತಿ ಮಾಡಿದ್ದಾರೆ.
ಮ್ಯಾಟ್ರಿಮೋನಿಯಲ್ನಲ್ಲಿ ಪರಿಚಯವಾದ ಯುವತಿಯೊಬ್ಬಳು ಕ್ರಿಪ್ಟೋ ಹೂಡಿಕೆ ನೆಪದಲ್ಲಿ ಯುವಕನಿಗೆ 21.11 ಲಕ್ಷ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಫೆ.26ಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಆಗಮಿಸಲಿದ್ದಾರೆ.
ಅಮೆರಿಕದಲ್ಲಿ ಭಾರಿ ಹಿಮಪಾತವಾಗಿದ್ದು 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ವ್ಯಕ್ತಿಯೋರ್ವನನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿದ ಘಟನೆ ಮಂಜೇಶ್ವರದ ಪಾವೂರುನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗಷ್ಟೇ ಕರಾವಳಿಯ ಅತ್ಯಂತ ಹಿಂದುಳಿದ ಸಮುದಾಯವಾದ ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ ಹೂಡಿ, ಕೊರಗ ಬಂಧುಗಳೊಂದಿಗೆ ಊಟೋಪಚಾರ, ಸಂವಾದ ನಡೆಸಿ ಸುದ್ದಿಯಾಗಿದ್ದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಇದೀಗ ಎಸ್ಸಿ ಕಾಲನಿಯಲ್ಲಿ ಸಹಭೋಜನ ನಡೆಸಿದ್ದಾರೆ.
ಸುಳಗೋಡು ಶಾಲೆಯಲ್ಲಿ ನಡೆಯುತ್ತಿರುವ ಎನ್ಎಸ್ಎಸ್ ಶಿಬಿರಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್, ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಬಳಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ.
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ನಡೆಸಿ ಕೆಲವೊಂದು ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಐದಾರು ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸರು ಎಂಟು ಜನ ಅನ್ಯಕೋಮಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಎಮ್ ಡಿ ಎಮ್ ಎ ಪೂರೈಸುತ್ತಿದ್ದ ಪೆಡ್ಲರ್ ಗಳನ್ನು ಮೈಸೂರಲ್ಲಿ ಬಂಧಿಸಲಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಆರು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್ ನ ಕಿದ್ವಾಯಿ ನಗರದಲ್ಲಿ ನಡೆದಿದೆ.