Showing 20 of 20442 articles • Page 168 of 1023
ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ನಡೆದಿದೆ.
ರಾಜ್ಯದಲ್ಲಿ ಪವರ್ ಶೇರಿಂಗ್ ವಿವಾದ ವಿಚಾರವಾಗಿ ಮಾಜಿ ಸಿಎಂ ಎಂ ವೀರಪ್ಪ ಮೊಯ್ಲಿ ಹೇಳಿಕೆ ನೀಡಿದರು. ಜನರಿಗೆ ಒಳ್ಳೆಯ ಸರಕಾರ ಬೇಕು. ಭ್ರಷ್ಟಾಚಾರ ರಹಿತ ಸದೃಢ ಸರಕಾರ ಬೇಕು. ಗ್ಯಾರಂಟಿ ಕಾರ್ಯಕ್ರಮಗಳಿಂದ ಬಡವರಿಗೆ ಅನುಕೂಲವಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನರ ಹಸಿವು ಮುಕ್ತ ಮಾಡಿದೆ ಎಂದರು.
ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವ ಇದೇ ಫೆ. 25ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ತಿಳಿಸಿದರು.
ಮಂಗಳೂರು ಧರ್ಮಪ್ರಾಂತ್ಯದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಮತ್ತು ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಸಹಯೋಗದೊಂದಿಗೆ, ಕುಲಶೇಕರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ಮೈದಾನದಲ್ಲಿ ಫೆಬ್ರವರಿ 26 ರಿಂದ ಮಾರ್ಚ್ 01, 2026 ರವರೆಗೆ ನಾಲ್ಕು ದಿನಗಳ ಕಾಲ ‘ಬೃಹತ್ ಬೈಬಲ್ ಅಧಿವೇಶನ 2026’ ಅನ್ನು ಆಯೋಜಿಸಲಾಗಿದೆ. ಈ ಆಧ್ಯಾತ್ಮಿಕ ಕಾರ್ಯಕ್ರಮವು ಪ್ರತಿದಿನ ಸಂಜೆ 4:00 ರಿಂದ 8:30 ರವರೆಗೆ ನಡೆಯಲಿದೆ.
ನಕಲಿ ಹುಲಿ ಉಗುರುಗಳನ್ನು ಅಸಲಿ ಎಂದು ನಂಬಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಡುಪಿ ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಬೇಸಿಗೆಯು ನಿರೀಕ್ಷೆಗಿಂತ ಮೊದಲೇ ಆರಂಭವಾಗಿದ್ದು, ಫೆಬ್ರವರಿಯಲ್ಲೇ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಹೀಗಿರುವಾಗ ತಾಪಮಾನ ಇನ್ನಷ್ಟು ಏರಿಕೆಯಾಗುವ ಮತ್ತು ಈ ವರ್ಷ ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಹೆಸರಘಟ್ಟ ಹೋಬಳಿಯ ಬ್ಯಾತಾ-ಸೀರೇಸಂದ್ರ ಗ್ರಾಮದಲ್ಲಿ ಭಾನುವಾರ ಗ್ರಾಮದಲ್ಲಿ ನಡೆದಿದೆ.
ಕರಾವಳಿ ಭಾಗದಲ್ಲಿ ಬೆಳೆಯುವ ಬಾಳೆ ಎಲೆಗಳಿಗೆ ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿದೆ. ವಿಶೇಷವಾಗಿ ಹಬ್ಬ -ಜಾತ್ರೆ, ಮದುವೆ ಸಮಾರಂಭ ಮತ್ತು ದೇವಸ್ಥಾನಗಳ ಅನ್ನಸಂತರ್ಪಣೆ ಕಾರ್ಯಕ್ರಮ ಗಳ ಸಂದರ್ಭಗಳಲ್ಲಿ ಕೇರಳದ ವ್ಯಾಪಾರಿಗಳು ಕರಾವಳಿಯತ್ತ ಮುಖ ಮಾಡುತ್ತಿದ್ದಾರೆ.
ನೂತನ ವಸ್ತ್ರಮಳಿಗೆಯೊಂದನ್ನು ತೆರೆಯುವ ಸಂಭ್ರಮದಲ್ಲಿದ್ದ ಯುವಕನೋರ್ವ ಅದೇ ಮಳಿಗೆಯಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತೊಕ್ಕೊಟ್ಟುವಿನ ಹೃದಯಭಾಗದಲ್ಲಿ ನಡೆದಿದೆ.
ಲವ್ ಮ್ಯಾಟರ್ ಹಿನ್ನಲೆ ಧ್ವೇಷ ಬೆಳೆಸಿಕೊಂಡ ಯುವಕನ ಕೊಲೆಗೆ ಮಾರಕಾಸ್ತ್ರಗಳ ಸಮೇತ ಬಂದಿದ್ದ ಗ್ಯಾಂಗ್ ಸ್ಕೆಚ್ ವಿಫಲವಾಗಿದೆ. ಪರಾರಿಯಾದ ಕೆಲವೇ ಗಂಟೆಗಳಲ್ಲಿ ಆಲನಹಳ್ಳಿ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿ ಕಂಬಿ ಎಣಿಸಲು ಕಳಿಸಿದ್ದಾರೆ.
ಇಇಪಿಎ ಅಡಿಯಲ್ಲಿ ಟ್ರಂಪ್ ವಿಧಿಸಿರುವ ಸುಂಕಗಳು ಕಾನೂನುಬಾಹಿರವೆಂದು ಸುಪ್ರೀಂ ಕೋರ್ಟ್ ಹೇಳಿತ್ತು. ಸುಂಕಗಳನ್ನು ಸಂಗ್ರಹಿಸುವುದನ್ನು ನಾಳೆಯಿಂದ ಯುಎಸ್ ಕಸ್ಟಮ್ಸ್ ನಿಲ್ಲಿಸಲಿದೆ.
ಹಾಡಹಗಲೇ ಚಿನ್ನದಂಗಡಿ ದರೋಡೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ.
ಮಹಾಕಾಳಿಪಡ್ಡು ರೈಲ್ವೇ ಅಂಡರ್ಪಾಸ್ ಮೂಲಕ ವಾಹನ ಸಂಚಾರ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇದರ ಜತೆಗೆ ಪಂಪ್ವೆಲ್- ಕಂಕ ನಾಡಿ ರಸ್ತೆ ಕಾಮಗಾರಿಯಿಂದಾಗಿ ಮಹಾ ಕಾಳಿಪಡ್ಪು ಅಂಡರ್ಪಾಸ್ ರಸ್ತೆಯನ್ನು ಬಳಕೆ ಮಾಡುವವರ ಸಂಖ್ಯೆ ಅಧಿಕವಾಗಿದೆ. ಪರಿಣಾಮವಾಗಿ ಪಾಂಡೇಶ್ವರ ರೈಲ್ವೇ ಲೆವೆಲ್ ಕ್ರಾಸಿಂಗ್ ಬಳಿ ಸಂಚಾರ ಸಂಕಷ್ಟ ಇದೀಗ ಗಣನೀಯವಾಗಿ ಕಿರಿಕಿರಿ ಸೃಷ್ಟಿಸುತ್ತಿದೆ.
ಫೆ.26 ರಂದು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಸಪ್ತಪದಿ ತುಳಿಯಲಿದ್ದು, ಮದುವೆ ಆಮಂತ್ರಣವನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ.
ಮೊಬೈಲ್ ನಂಬರ್ ಕೊಡು ಇಲ್ಲಾಂದ್ರೆ ನಿನ್ನ ಗಂಡನ್ನ ಕೊಲೆ ಮಾಡ್ತೀನಿ ಎಂದು ಬೆದರಿಕೆ ಒಡ್ಡಿದ ರೋಮಿಯೋ ವಿರುದ್ದ ವಿಜಯನಗರ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಹಿನಕಲ್ ನ ದೇವರಾಜು ಎಂಬಾತನ ವಿರುದ್ದ ನೊಂದ ಗೃಹಿಣಿ ಪ್ರಕರಣ ದಾಖಲಿಸಿದ್ದಾರೆ.
ಅಸುರಕ್ಷಿತ ಹಂಪ್ ಕಾರಣದಿಂದ ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಖಾಸಗಿ ವ್ಯಕ್ತಿ ಓಡಾಡುವ ರಸ್ತೆ ಒತ್ತುವರಿ ಮಾಡಿಕೊಂಡ ಪರಿಣಾಮ 25 ಕ್ಕೂ ಹೆಚ್ಚು ಕುಟುಂಬ ಅತಂತ್ರಕ್ಕೆ ಸಿಲುಕಿದೆ. ರಸ್ತೆ ಒತ್ತುವರಿ ತೆರುವುಗೊಳಿಸುವಂತೆ ನ್ಯಾಯಾಲಯ ಹಾಗೂ ತಹಶೀಲ್ದಾರ್ ಆದೇಶಿಸಿದ್ದರೂ ಸಡ್ಡು ಹೊಡೆದ ವ್ಯಕ್ತಿ ಬಂದ್ ಮಾಡುವ ಮೂಲಕ ನಿವಾಸಿಗಳಿಗೆ ಕಿರುಕುಳ ನೀಡುತ್ತಿರುವ ಪ್ರಕರಣವೊಂದು ನಂಜನಗೂಡಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಒಳಮೀಸಲಾತಿ ಪದ್ಧತಿಯು ಬಲಗೈ ಸಮುದಾಯದ ಮರಣ ಶಾಸನವಾಗಿದ್ದು ಇದನ್ನ ತಕ್ಷಣವೇ ಹಿಂಪಡೆಯಬೇಕು ಎಂದು ಡಾ.ನವೀನ್ ಮೌರ್ಯ ಒತ್ತಾಯಿಸಿದರು.
ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದ ಯುವಕನನ್ನು ರಕ್ಷಣೆ ಮಾಡಿರುವ ಘಟನೆ ಉಡುಪಿ ಕಲ್ಸಂಕ ಜಂಕ್ಷನ್ ನಲ್ಲಿ ನಡೆದಿದೆ.
ಭಾರತೀಯ ವಾಯುಪಡೆಯ ಮತ್ತೊಂದು ತೇಜಸ್ ಲಘು ಯುದ್ಧ ವಿಮಾನ ಅಪಘಾತದಲ್ಲಿ ಪತನವಾಗಿದೆ.