Showing 20 of 20442 articles • Page 171 of 1023
ತಂಬಾಕಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳೆಗಾರರಿಂದು ಚಿಲ್ಕುಂದ ಬೋರ್ಡ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಹಲವು ದಿನಗಳಿಂದ ಓಡಾಡಿ, ಸಾಕುನಾಯಿ ಸೇರಿದಂತೆ ಇತರೆ ಪ್ರಾಣಿಗಳ ಮೇಲೆ ದಾಳಿ ಮಾಡಿ ರೈತರಲ್ಲಿ ಭಯ ಮೂಡಿಸಿದ್ದ ಚಾಲಾಕಿ ಚಿರತೆ ಸೆರೆಯಾದ ಘಟನೆ ಗುಂಡ್ಲುಪೇಟೆ ಪಟ್ಟಣ ಹೊರವಲಯದ ಮನಗಳ್ಳಿಯಲ್ಲಿ ನಡೆದಿದೆ.
ಇಂದು ನಗರದ ಮಂಗಳೂರಿನ ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐ ಆರ್ ಗ್ರೂಪ್ ತನ್ನ ಉತ್ಪಾದನಾ ಘಟಕವನ್ನು ಸ್ಥಾಪನೆ ಮಾಡಲು ಭೂಮಿ ಪೂಜೆ ಯನ್ನು ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿವಂದನೀಯ ಡಾ. ಪೀಟರ್ ಪೌಲ್ ಸಲ್ದಾನ ನೆರವೇರಿಸಿ ಆಶೀರ್ವದಿಸಿದರು.
ಬಾಡಿಗೆ ಮನೆ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದ ಮೂರು ಮಂದಿ ಯುವಕರ ತಂಡವೊಂದು ವೃದ್ದೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾದ ಘಟನೆ ಶನಿವಾರ ಬೆಳಿಗ್ಗೆ ಶಂಕರಪುರದಲ್ಲಿ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 25ರಂದು ಜಿಲ್ಲೆಗೆ ಆಗಮಿಸಿ, ಕಾರ್ಕಳ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಕಾಸರಗೋಡಿನ ಕಯ್ಯಾರು ಗ್ರಾಮದಲ್ಲಿರುವ ಕ್ರಿಸ್ತರಾಜ ದೇವಾಲಯವು ಮಂಗಳೂರು ಧರ್ಮಪ್ರಾಂತ್ಯಕ್ಕೆ ಒಳಪಟ್ಟಿದ್ದು ಮಂಗಳೂರು ನಗರದಿಂದ ಸುಮಾರು 42 ಕಿಮೀ ದೂರದಲ್ಲಿದೆ. ಕಯ್ಯಾರು ಅನೇಕ ಭಾಷೆಗಳು ಸೌಹಾರ್ದದಿಂದ ಬೆರೆತು ಬದುಕುವ ನೆಲ. ನೈಸರ್ಗಿಕ ಸೌಂದರ್ಯ ಹಾಗೂ ಬೌದ್ಧಿಕ ಪರಂಪರೆಯಲ್ಲಿ ಸಮೃದ್ಧವಾದ ಕಯ್ಯಾರು, ಖ್ಯಾತ ಕವಿ ಕಯ್ಯಾರ ಕಿಞ್ಞಣ್ಣ ರೈಯವರನ್ನೊಳಗೊಂಡಂತೆ ಅನೇಕ ಕವಿಗಳು ಮತ್ತು ಕಲಾವಿದರನ್ನು ಹುಟ್ಟಿಸಿದ ತಾಯಿ ನೆಲ. ಪೂಸಡಿ ಗುಂಪೆ ಮೊದಲಾದ ಸೊಬಗಿನ ಸ್ಥಳಗಳಿಂದ ಕಯ್ಯಾರು ಸಾಂಸ್ಕೃತಿಕ ಮತ್ತು ಸೌಂದರ್ಯ ಮೌಲ್ಯಗಳಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಕಾರ್ಯಾಗಾರಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಒಳ ಮೀಸಲಾತಿ ವರದಿಯ ಸಮಸ್ಯೆಯೂ ಪೂರ್ಣವಾಗಿ ಬಗೆಹರಿವ ತನಕ ಪ್ರಸ್ತುತ ಶೈಕ್ಷಣಿಕ ವಲಯ ಮತ್ತು ಉದ್ಯೋಗಕ್ಕೆ ಅನ್ವಯಿಸುತ್ತಿರುವ ಒಳ ಮೀಸಲಾತಿಯ ಕಾರ್ಯ ಚಟುವಟಿಕೆಗಳನ್ನು ಶೀಘ್ರವೇ ತಡೆಯಾಜ್ಞೆ ನೀಡಬೇಕು ಎಂದು ಆಗ್ರಹಿಸಿ ನಂಜನಗೂಡಿನಲ್ಲಿ ಜನಸಂಗ್ರಾಮ ಪರಿಷತ್ ನಿಂದ ಮನವಿ ಸಲ್ಲಿಸಲಾಯಿತು.
ಹೊಸರಾಮನಹಳ್ಳಿ ದಂಡಮ್ಮದೇವಿ ಜಾತ್ರೆ ಹನ್ನೆರಡು ವರ್ಷಕ್ಕೊಮ್ಮೆ ನಡೆಯುತ್ತದೆ. ವಿಜೃಂಭಣೆಯಿಂದ ಹೊಸರಾಮನಹಳ್ಳಿ ದಂಡಮ್ಮ ಜಾತ್ರೆ ಜರುಗಿತು. ಬಾಡೂಟವೇ ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯ ವಿಶೇಷವಾಗಿದೆ.
ಕೆಲವು ಕಡೆ ರಸ್ತೆ ಕಾಮಗಾರಿ ಹಿನ್ನಲೆ ಬಸ್ ಚಾಲನೆ, ಸಮಯ ಪರಿಪಾಲನೆ ಕಷ್ಟವಾಗುತ್ತಿದೆ. ಕದ್ರಿ, ಕೆಪಿಟಿ,ಕೆಲವು ಕಡೆಗಳಲ್ಲಿ ಬಸ್ ಹೋಗಲು ಪೊಲೀಸರು ಅನುವು ಮಾಡಿದಲ್ಲಿ ಈಗಿನ ಪರಿಸ್ಥಿತ್ಗೆ ಸಂಚಾರ ಸುಗಮವಾಗಲಿದೆ.
ಸಂಗೀತ ಭಾರತಿ ಫೌಂಡೇಶನ್ (ರಿ) ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಫೆ.22ರಂದು ಸಂಜೆ 5 ಗಂಟೆಗೆ ನಗರದ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಗೀತ ಭಾರತಿ ಫೌಂಡೇಶನ್ನ ಕಾರ್ಯದರ್ಶಿ ಡಾ.ಉಷಾಪ್ರಭಾ ಎನ್.ನಾಯಕ್ ತಿಳಿಸಿದ್ದಾರೆ.
ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ ಬೆನ್ನಿಗೇ ಈ ಹಿಂದೆ ಬಳಕೆಯಲ್ಲಿದ್ದ ರೈಲ್ವೇ ಕ್ರಾಸಿಂಗನ್ನು ರೈಲ್ವೇ ಇಲಾಖೆ ಶಾಶ್ವತವಾಗಿ ಬಂದ್ ಮಾಡಿದೆ.
ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಆಯೋಜಿಸಿರುವ 14ನೇ ವರ್ಷದ ನಾಟಕೋತ್ಸವ ‘ರಂಗಹಬ್ಬ–14’ ಫೆಬ್ರವರಿ 22ರಿಂದ 28ರವರೆಗೆ ಉಡುಪಿಯ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ವತಿಯಿಂದ 300ನೇ ರಕ್ತದಾನ ಶಿಬಿರ “ಹೆಗ್ಗುರುತು- 300” ಅನ್ನು ಇದೇ ಫೆ. 22ರಂದು ಬೆಳಿಗ್ಗೆ 8.30ರಿಂದ 1ಗಂಟೆಯವರೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ತಿಳಿಸಿದರು.
ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಇವರ ಭರತನಾಟ್ಯ ರಂಗಪ್ರವೇಶವು ಫೆ.22 ರಂದುಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ನೃತ್ಯ ಸುಧಾ (ರಿ) ಸಂಸ್ಥೆಯ ಸ್ಥಾಪಕಿ ಮತ್ತು ಶ್ರೀಯಾ ತಾಯಿ ವಿದುಷಿ ಸೌಮ್ಯ ಸುಧೀಂದ್ರ ರಾವ್ ತಿಳಿಸಿದ್ದಾರೆ.
ಬೆಂಗಳೂರಿನ ಗಾರ್ಡನ್ ಸಿಟಿ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಔಷಧೀಯ ಸಸ್ಯ ಮಂಡಳಿ, ಆಯುಷ್ ಸಚಿವಾಲಯ (National Medicinal Plants Board, Ministry of AYUSH) , ಭಾರತ ಸರ್ಕಾರ, ನವದೆಹಲಿ ಇವರಿಂದ “Species Specific Campaign on Shatavari – For Better Health” ಅಭಿಯಾನದಡಿ ಪ್ರತಿಷ್ಠಿತ ಶತಾವರಿ ಯೋಜನೆ ಮಂಜೂರಾಗಿದೆ.
ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟಿವಿ ಚಾನಲ್ ಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಟಯರ್ ಸ್ಫೋಟಗೊಂಡು ಲಾರಿಯೊಂದು ಸೇತುವೆ ಮೇಲೆ ಹೊತ್ತಿ ಉರಿದ ಘಟನೆ ಗುರುವಾರ ಮಧ್ಯರಾತ್ರಿ ಬೈಂದೂರಿನ ಉಪ್ಪುಂದ-ಬಿಜೂರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದೆ.
ಮನೆಯಲ್ಲಿ ಕುಳಿತಿದ್ದ ಯುವಕನೋರ್ವ ದಿಢೀರ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಫೆ. 19ರಂದು ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ.