Showing 20 of 20442 articles • Page 172 of 1023
ಶ್ರೀ ಕೃಷ್ಣಮಠ ಪರಿಸರದ ರಥಬೀದಿಯಲ್ಲಿರುವ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನಗೊಂಡಿತು.
ಮಂಜನಾಡಿಯ ಮೊಂಟೆಪದವು ಎಂಬಲ್ಲಿ 2025ರ ಮೇ 30ರಂದು ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಸಿಲುಕಿ ತನ್ನೆರಡೂ ಕಾಲುಗಳನ್ನು ಕಳೆದುಕೊಂಡ ಅಶ್ವಿನಿ ಎಂಬವರು ತನ್ನ ತಾಯಿ ಪುಷ್ಪಾವತಿ ಜತೆ ಮಾನವ ಹಕ್ಕುಗಳ ಆಯೋಗದೆದುರು ನ್ಯಾಯಕ್ಕಾಗಿ ಕಣ್ಣೀರಿಟ್ಟ ಘಟನೆ ನಡೆಯಿತು.
ಒಂಟಿ ಕೋತಿ ಮರಿಗೆ ಒಂದು ಗೊಂಬೆಯೇ ತನ್ನ ಕುಟುಂಬ. ಆದರೆ ಅಲ್ಲಿರುವ ಬೇರೆ ಕೋತಿಗಳು ಆ ಕೋತಿಯನ್ನು ನೆಮ್ಮದಿಯಾಗಿರಲು ಬಿಡುತ್ತಿಲ್ಲ. ಜಪಾನ್ನ ಇಚಿಕಾವಾ ಸಿಟಿ ಮೃಗಾಲಯದ ವಿಡಿಯೋ ಇದೀಗ ವೈರಲ್ ಆಗಿದೆ.
ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯರು ಅತ್ಯಂತ ಅಪಾಯಕಾರಿ ಗರ್ಭಾವಸ್ಥೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ಸುಮಾರು ಎರಡೂವರೆ ತಿಂಗಳ ಆಸ್ಪತ್ರೆಯ ಆರೈಕೆಯ ನಂತರ ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿ ಮನೆಗೆ ಮರಳಲು ಸಹಾಯ ಮಾಡಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಭಾಷಾ ಮತ್ತು ಸಾಂಸ್ಕೃತಿಕ ಅಧ್ಯಯನ ಶಾಲೆಯ ಹಿಂದಿ ವಿಭಾಗ ಮತ್ತು ಹಿಂದಿ ಸಂಘವು ‘ದೇಸಿ ಕಲಾಕರ್’ ಎಂಬ ವಿಷಯದ ಮೇಲೆ ಹಿಂದಿ ಸಾಂಸ್ಕೃತಿಕ ಉತ್ಸವ ‘ಪ್ರೇರಣಾ – 2026’ ಅನ್ನು ಫೆಬ್ರವರಿ 18, 2026 ರಂದು ಕ್ಯಾಂಪಸ್ನಲ್ಲಿ ಆಯೋಜಿಸಿತ್ತು.
: ದಕ್ಷಿಣಕನ್ನಡ ಜಿಲ್ಲೆಯ ಕಡಬ ಮೂಲದ ಯುವಕನೊಬ್ಬ ಐರ್ಲೆಂಡ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಘಟನೆ ನಡೆದಿದೆ.
ನಕ್ಸಲ್ ಕರಪತ್ರ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಜಾನ್@ ಜಯಣ್ಣ@ಮಹೇಶ್ (49) ಎಂಬಾತನನ್ನು ಕೇರಳದ ತ್ರೀಶೂರ್ ಜೈಲಿನಿಂದ ಬಿಗಿ ಭದ್ರತೆಯಲ್ಲಿ ಕೇರಳ ವಿಶೇಷ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನಗರದ ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ಬಳಿ ಮನೆಯೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ನಡೆದಿದೆ.
ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು.
ಕರ್ನಾಟಕ ಮತ್ತು ಗೋವಾ ನಡುವಿನ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ ಒಂದು ಕ್ರಮದಲ್ಲಿ, ರೈಲ್ವೆ ಸಚಿವಾಲಯವು ಯಶವಂತಪುರ ರೈಲು ನಿಲ್ದಾಣ ಮತ್ತು ಮಡಗಾಂವ್ ರೈಲು ನಿಲ್ದಾಣದ ನಡುವೆ ಕರಾವಳಿ ರೈಲ್ವೆ ಪ್ರದೇಶದ ಮೂಲಕ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆಯನ್ನು ಪ್ರಸ್ತಾಪಿಸಿದೆ.
ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ದಿನಾಂಕ 19.02.2026ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು.
ಭಾರತದ ಕಾರ್ಬನ್ ನ್ಯೂಟ್ರಲ್ ಭವಿಷ್ಯದ ನಗರಗಳ ನಿರ್ಮಾಣಕ್ಕೆ ದಿಟ್ಟ ಹೆಜ್ಜೆಯಾಗಿ MIR ನೆಟ್ ಝೀರೋ ಶೃಂಗಸಭೆ ಉದ್ಘಾಟನೆ ನಗರದ ಟಿಎಂಎ ಪೈ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು.
ಸಂತ ಅಲೋಶಿಯಸ್ ಕಾಲೇಜು ಹಳೆವಿದ್ಯಾರ್ಥಿಗಳ ಸಂಘದ ವತಿಯಿಂದ, ವೈವಿಧ್ಯಮಯ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ಯುವ ಸಾಧಕರನ್ನು ಗುರುತಿಸಿ, ಅವರ ಅನುಕರಣೀಯ ಪ್ರಯಾಣದ ಮೂಲಕ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ನೀಡಲಾಗುವ “ಅಲೋಶಿಯಸ್ ಯುವ ಐಕಾನ್” ಪ್ರಶಸ್ತಿ ಪ್ರದಾನ ಸಮಾರಂಭವು 16 ಫೆಬ್ರವರಿ 2026 ರಂದು ಅಲೋಶಿಯಸ್ ವಿವಿಯ ಎಲ್ ಎಫ್ ರಸ್ಕೀನ್ಹಾ ಹಾಲ್ನಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ರೋಬೋಟಿಕ್ ಟೆಲಿಸರ್ಜರಿಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಸುಧಾರಿತ ಆರೋಗ್ಯ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ.
ಶಿವಾಜಿ ಮಹಾರಾಜರು ಜನಿಸಿ 396 ವರ್ಷಗಳಾದರೂ ಅವರ ಜೀವನ ಸಾಧನೆಗಳು ಇಂದಿಗೂ ಪ್ರೇರಣೆಯಾಗಿ ಉಳಿದಿವೆ.
ರಾಕಿಂಗ್ ಸ್ಟಾರ್ ಯಶ್ ನಟಿಸಿ, ನಿರ್ಮಿಸಿರುವ ಟಾಕ್ಸಿಕ್ ಸಿನಿಮಾ ಮತ್ತೊಂದು ರಣರೋಚಕ ಟೀಸರ್ ರಿಲೀಸ್ ಆಗಿದೆ. `ರಾಯ’ ಪಾತ್ರದ ಅನಾವರಣ ಮಾಡಿದ್ದ ಟೀಸರ್ ಬಳಿಕ ಮತ್ತೊಂದು ಆಕರ್ಷಕ ಟೀಸರ್ ರಿಲೀಸ್ ಇಂದು ಆಗಿದೆ.
ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ ಎಮ್ ಡಿಎಂಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಫೆ.18 ರಂದು ತಡೆದು ಪರಿಶೀಲಿಸಿ ಆರೋಪಿಗಳಾದ ಮುಹಮ್ಮದ್ ಅಜ್ಮಲ್ ಸಿ @ ಅಜ್ಜು (30) ಕೋಝಿಕೋಡ್, ಕೇರಳ, ಇಸ್ಮಾಯಿಲ್ (28) ವಯನಾಡ್ ಜಿಲ್ಲೆ, ಕೇರಳ , ಸಂಶೀರ್ (27)ಕೊಝಿಕೋಡ್, ಕೇರಳ. ಎಂಬವರುಗಳು ವಾಹನದಲ್ಲಿ ಮಾರಾಕಾಯುಧವಾದ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ MDMA ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವುದು ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ 29,397 ಮಂದಿ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 37,337 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಪ್ರೌಢ ಮತ್ತು ಪ.ಪೂ. ಶಿಕ್ಷಣ ಇಲಾಖೆಗಳು ಸಿದ್ಧತೆ ನಡೆಸಿವೆ.
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದ್ದು ಟೆಂಪೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಘಟನೆಯಿಂದ ಸೇತುವೆಗೆ ಅರವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ ತೀವ್ರ ಹಾನಿಯಾಗಿದೆ.
ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳ ಕೈಗೆ ಸಿಕ್ಕ ಪ್ಲಾಸ್ಟಿಕ್ ಚೆಂಡಿನಂಥ ವಸ್ತು ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಬಾಲಕನೊಬ್ಬ ಗಾಯಗೊಂಡಿರುವ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.