Showing 20 of 20442 articles • Page 173 of 1023
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಹೆಚ್ಚುವರಿ ಆರು ಮಂದಿ ವಿದ್ಯಾರ್ಥಿಗಳು ಇಂಜಿನಿಯರಿಂಗ್ಗೆ ಸಂಬಂಧಿಸಿದ ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆ ಜಿಇಇಯಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ.
ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟೆಂಟ್ ಒಂದರಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಗಳೂರಿನ ಖ್ಯಾತ ಉದ್ಯಮಿ ಹಾಗೂ ಶ್ರೀನಿವಾಸ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ.ಎ. ಎ. ರಾಘವೇಂದ್ರ ರಾವ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುಡುವ ಬಿಸಿಲಿನ ನಡುವೆ ಅಲ್ಲಲ್ಲಿ ಭಾರಿ ಮಳೆಯಾಗಿರುವ ಘಟನೆ ಫೆ.18ರ ಮಧ್ಯಾಹ್ನ ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ನಡೆದಿದೆ.
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ದೇವಸ್ಥಾನದ ಅರ್ಚಕರ ನೇತೃತ್ವದಲ್ಲಿ ಗಣಹೋಮ, ನವಕ ಪ್ರಧಾನ ಹೋಮ, ಮಹಾಪೂಜೆ ನೆರವೇರಿತು. ಮಧ್ಯಾಹ್ನ ರಥೋತ್ಸವ ನಡೆದ ಬಳಿಕ ಮಹಾಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು.
ನಗರದ ಸಿಎಫ್ಎಎಲ್ (CFAL – Centre for Advanced Learning) ಸಂಸ್ಥೆಯ ಐದು ವಿದ್ಯಾರ್ಥಿಗಳು ಜೆಇಇ ಮೇನ್ 2026ರಲ್ಲಿ 99.8 ಪರ್ಸೆಂಟೈಲ್ಗಿಂತ ಹೆಚ್ಚು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಇವರ ಸರಾಸರಿ ಪರ್ಸೆಂಟೈಲ್ 99.91.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರತಿ ವರ್ಷದಂತೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲೂ ಇಂಜಿನಿಯರಿಂಗ್ಗೆ ಸಂಬಂಧಿಸಿದ ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆ ಜೆಇಇಯಲ್ಲಿ ಉತ್ತಮ ಸಾಧನೆಗೈದಿದ್ದು, 29 ವಿದ್ಯಾರ್ಥಿಗಳು 85 ಪರ್ಸಂಟೈಲ್ಗಿಂತ ಹೆಚ್ಚು ಅಂಕಗಳನ್ನು ಪಡೆದಿರುತ್ತಾರೆ. ತನ್ಮೂಲಕ ತಾಲೂಕಿನಲ್ಲೇ ಜೆಇಇ ಪರೀಕ್ಷೆಯಲ್ಲಿ ಅತ್ಯಧಿಕ ವಿದ್ಯಾರ್ಥಿಗಳು ಅರ್ಹತೆ ಹೊಂದಿದ ಸಂಸ್ಥೆಯಾಗಿ ಅಂಬಿಕಾ ಹೊರಹೊಮ್ಮಿದೆ.
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕ್ರೈನ್ ಹರಿದ ಘಟನೆ ಉಡುಪಿ ಪೆರಂಪಳ್ಳಿಯ ಹೆರ್ಗ ಸೊಸೈಟಿಯ ಮುಂಭಾಗದಲ್ಲಿ ನಡೆದಿದೆ.
ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ವಿವಿಧ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆಯು ಫೆ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಪ್ರತಿನಿಧಿ ಜಯಾನಂದ್ ತಿಳಿಸಿದ್ದಾರೆ.
ಹಾಡಹಗಲೇ ಹುಲಿ ದಾಳಿಗೆ ಹಸು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ.
ಪಂಪ್ ವೆಲ್ ನಿಂದ ಹಳೆಯ ಪೋಸ್ಟ್ ಆಫೀಸ್ ವರೆಗಿನ ರಸ್ತೆ ಅಗಲೀಕರಣದ ಕುರಿತಂತೆ ಶಾಸಕ ವೇದವ್ಯಾಸ ಕಾಮತ್ ರವರು ಕಂಕನಾಡಿಯ ಫಾದರ್ ಮುಲ್ಲರ್ ಆಡಳಿತ ಮಂಡಳಿಯ ಪ್ರಮುಖರೊಂದಿಗೆ ನಡೆಸಿದ ಸಭೆಯು ಫಲಪ್ರದವಾಯಿತು.
ನಗರದ ಮಧ್ಯೆ ಇರುವ ಸರಕಾರಿ ಮಹಿಳಾ ಪದವಿ ಕಾಲೇಜಿಗೆ ಆಸ್ಪತ್ರೆ ಕಾಮಗಾರಿ ಹಿನ್ನೆಲೆ ತರಗತಿಗಳಲ್ಲಿ ಧೂಳು ತುಂಬಿಕೊಂಡಿದ್ದು, ಈ ಹಿನ್ನೆಲೆ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಿಸುವಂತಾಗಿದೆ.
ಆರೆಸ್ಸೆಸ್, ಬಿಜೆಪಿ ದ.ಕ. ಜಿಲ್ಲೆಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಕೀಳು ಹೇಳಿಕೆ ನೀಡಿರುವುದು ಖಂಡನೀಯ. ಆರೆಸ್ಸೆಸ್, ಬಿಜೆಪಿ ಬಗ್ಗೆ ಮಾತನಾಡಲು ಕಾಂಗ್ರೆಸ್ನವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಅಸ್ತಿತ್ವ (ರಿ.) ಮಂಗಳೂರು ತನ್ನ ದಶಮಾನೋತ್ಸವ ಸಂದರ್ಭದಲ್ಲಿ, ರಂಗ ಅಧ್ಯಯನ ಕೇಂದ್ರ, ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ಇದರ ಸಹಯೋಗದಲ್ಲಿ ಎರಡು ದಿನಗಳ ಕಾಲ ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಮುಳ್ಳೂರು ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದ ಕಾಮಗಾರಿಯಿಂದ ಸರ್ವಿಸ್ ರಸ್ತೆಯಲ್ಲಿ ಬಿರುಕು ಕಾಣಿಸಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆ ಕುಸಿತ ಭೀತಿ ಹಿನ್ನೆಲೆಯಲ್ಲಿ ಫೆ.12ರಿಂದ ಮಾ.13ರವರೆಗೆ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮಂಗಳೂರು : ಚಿಕ್ಕಮಗಳೂರಿನಲ್ಲಿ ಹಿಂದೂ ಮನೆ ಮೇಲೆ ಕಲ್ಲು ತೂರಾಟ ಘಟನೆ ವಿಚಾರವಾಗಿ ಮಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಚಿಕ್ಕಮಗಳೂರು ಘಟನೆ ಸಂಬಂಧ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಕಾನೂನು ಪ್ರಕಾರ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತಾರೆ. ಹೆಣ್ಣು ಮಗಳು ದಲಿತ ಸಮುದಾಯಕ್ಕೆ ಸೇರಿದವರು ಅಂತಾ ಗೊತ್ತಾಗಿದೆ. ಆ ಪ್ರಕಾರ ಪೊಲೀಸರು ಪಿಸಿಆರ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸುತ್ತಾರೆ ಎಂದರು. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಪ್ರತಿಕ್ರಿಯೆ ಅವರು ಯಾಕೆ ಹೋಗ್ತಿದ್ದಾರೆ […]
ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಮತ್ತು ಎಸಿಎನ್ಎ ರಾಜ್ಯ ಪ್ರಧಾನ ಕಾರ್ಯದರ್ಶಿ, ಉಜಿರೆ ನಿವಾಸಿ ತನುಷ್ ಶೆಟ್ಟಿ ನಡುವಿನ ‘ರೋಡ್ ರೇಜ್ ವಿವಾದ ಹೊಸ ತಿರುವು ಪಡೆದಿದೆ. ಒಂದೂವರೆ ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ, ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿರುವುದು ಸಂತನ ತಂದಿದ್ದು, ಇದು ನಿಜಕ್ಕೂ ನ್ಯಾಯಕ್ಕೆ ಸಿಕ್ಕ ಜಯ ಎಂದು ತನುಷ್ ಶೆಟ್ಟಿ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರಿಗೆ ಬಕೆಟ್ ಹಿಡಿಯುವ ಮೂಲಕ ಒಳ್ಳೆಯ ಸ್ಥಾನಮಾನ ಪಡೆಯಲು ಸಚಿವ ಪ್ರಿಯಾಂಕ್ ಖರ್ಗೆ ಇಂಥ ಕೀಳು ಹೇಳಿಕೆ ನೀಡುತ್ತಿದ್ದಾರೆ. ಆರೆಸ್ಸೆಸ್, ಬಿಜೆಪಿ ಕುರಿತಾದ ತಮ್ಮ ಬೇಜವಾಬ್ದಾರಿ ಹೇಳಿಕೆ ಬಗ್ಗೆ ಕೂಡಲೆ ಅವರು ಕ್ಷಮೆ ಕೇಳಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಆಗ್ರಹಿಸಿದ್ದಾರೆ.
ರಾಮಕುಂಜ ಗ್ರಾಮದಲ್ಲಿ ಜನವರಿ 24 ರಂದು ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿಯಲ್ಲಿ ಸ್ಪೋಟಕ ಮಾಹಿತಿ ಸಿಕ್ಕಿದ್ದು, ಬಾಲಕ ಆತ್ಮಹತ್ಯೆಗೆ ಮುನ್ನ ತಂದೆಗೆ ಶೂಟ್ ಮಾಡಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ.