Showing 20 of 20454 articles • Page 181 of 1023
ನಗರದ ಕಾವೂರು ಮೂಲದ ಯುವಕನೊಬ್ಬ ಮ್ಯಾಟ್ರಿಮೋನಿ ಸೈಟ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು ಮದುವೆಯಾಗುತ್ತೇನೆಂದು ನಂಬಿಸಿ ಮುಂಬೈ, ಉಡುಪಿ ಹೀಗೆ ಹಲವೆಡೆ ಯುವತಿಯರನ್ನು ಮದುವೆಯಾಗಿ ಅವರಿಂದ ಹಣ ಪಡೆದು ವಂಚಿಸಿದ್ದಲ್ಲದೆ, ಇನ್ನೂ ಹಲವು ಯುವತಿಯರನ್ನು ಮದುವೆಯಾಗುವ ಭರವಸೆ ನೀಡಿ ಹಣ ಪಡೆದು ಮೋಸಗೈದು ಕಂತ್ರಿ ಬುದ್ಧಿ ತೋರಿಸಿ ಕಾವೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಳ್ತಂಗಡಿ ವಿದ್ಯಾರ್ಥಿನಿ ಅಪಹರಣ ಕೇಸ್ ಟ್ವಿಸ್ಟ್ ಸಿಕ್ಕಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಪಿ ಅರುಣ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಗೈನೆಸ್ವಿಲ್ಲೆಯಲ್ಲಿ ಜನದಟ್ಟಣೆಯ ರಸ್ತೆಯಲ್ಲಿ ಸಣ್ಣ ವಿಮಾನವೊಂದನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಇದರ ಪರಿಣಾಮ ವಿಮಾನವು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ.
ಪ್ರವಾಸಿಗರ ಒಪ್ಪಿಗೆಯಿಲ್ಲದೆ ಅವರ ಫೋಟೊ ಮತ್ತು ಸೆಲ್ಫಿಗಳನ್ನು ತೆಗೆಯುವುದು ಕಂಡುಬಂದರೆ ಅವರನ್ನು ಗೋವಾ ಪೊಲೀಸರು ಬಂಧಿಸಲಿದ್ದಾರೆ.
ಉಡುಪಿಯ ಹಲವಾರು ಪ್ರಗತಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಆರೋಗ್ಯ ಹಕ್ಕಿನಜಾಥಾ ನಡೆಯಿತು. ಫೆಬ್ರವರಿ 2 ರಿಂದ 17 ರವರೆಗೆ ಕರ್ನಾಟಕದಾದ್ಯಂತ ಎಲ್ಲಾ 31 ಜಿಲ್ಲೆಗಳಲ್ಲಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ.
ರೈತರು ಕಾರ್ಪೊರೇಟ್ ಸ್ಟ್ಯಾಂಡರ್ಡ್ ನಲ್ಲಿ ಬದುಕು ಮಾಡಬೇಕು. ರೈತರ ತ್ಯಾಗವನ್ನು ಗುರುತಿಸುವ ಉದ್ದೇಶದಿಂದ ರೈತಪೀಠ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ನಾಗಮಂಡಲದ ಮೂಲಕ ಪ್ರಶಸ್ತಿ ಪ್ರಧಾನ ನಡೆಯಲಿದೆ.
ಎನ್ಸಿಪಿಯ ಹಿರಿಯ ನಾಯಕಿ ಸುನೇತ್ರಾ ಪವಾರ್ ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರವಹಿಸಿಕೊಂಡಿದ್ದಾರೆ.
ಇಂಡಿ ಮತ್ತು ಅಲಮೇಲ ಪಟ್ಟಣಗಳ ಬಸ್ ನಿಲ್ದಾಣಗಳಲ್ಲಿ ಮಹಿಳೆಯ ಚಿನ್ನದ ಸರ ಕಿತ್ಕೊಂಡು ಕಳ್ಳರು ಎಸ್ಕೇಪ್ ಆಗಿರುವ ಘಟನೆ ನಡೆದಿದೆ.
ಕಾನ್ಪುರದಲ್ಲಿ ತಂಬಾಕು ಉದ್ಯಮಿ ಕೆ.ಕೆ.ಮಿಶ್ರಾ ಪುತ್ರ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲಂಬೋರ್ಗಿನಿ ಕಾರ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಬೈಕ್, ಕಾರ್ ಗಳಿಗೂ ಡಿಕ್ಕಿ ಹೊಡೆದಿದೆ. 6 ಮಂದಿ ಗಾಯಗೊಂಡಿದ್ದಾರೆ.
ಮಲೆ ಮಹದೇಶ್ವರ ಪಾದಯಾತ್ರಿಗಳ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಪೊನ್ನಾಚ್ಚಿ ಕ್ರಾಸ್ ಬಳಿ ನಡೆದಿದೆ.
ಮಂಗಳೂರಿನಿಂದ ಶಿರ್ವದತ್ತ ಸಾಗುತ್ತಿದ್ದ ಮಾರುತಿ ಡಿಸೈರ್ ಕಾರೊಂದು ಸೋಮವಾರ ಮಧ್ಯರಾತ್ರಿ ಆಕಸ್ಮಿಕವಾಗಿ ರಸ್ತೆ ಮಧ್ಯದಲ್ಲೇ ಬೆಂಕಿಗಾಹುತಿಯಾದ ಘಟನೆ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಸಮೀಪ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಿಗೆ 1991 ಮತ್ತು 1993ರರ ಅಧಿಸೂಚನೆಯಿಂದ ವಿನಾಯತಿ ನೀಡಿ ಮಾನ್ಯ ಜಿಲ್ಲಾಧಿಕಾರಿಗಳು ಹೊರಡಿಸಿದ ಆದೇಶವನ್ನು ಭಾರತ ಕಮ್ಯುನಿಸ್ಟ್ ಪಕ್ಷದ ಮಂಗಳೂರು ತಾಲೂಕು ಸಮಿತಿ ಸ್ವಾಗತಿಸುತ್ತದೆ ಹಾಗೂ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತದೆ. ಈ ಆದೇಶದಿಂದ ಎಲ್ಲಾ ಕೆಎಸ್ಆರ್ಟಿಸಿ ಬಸ್ಸುಗಳು
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಇಪ್ಪತ್ತೈದು ವರ್ಷಗಳನ್ನು ಪೂರ್ಣಗೊಳಿಸಿ ಬೆಳ್ಳಿಹಬ್ಬದ ಸಂಭ್ರಮದೊಂದಿಗೆ ಮುನ್ನಡೆಯುತ್ತಿರುವ ಸವಿನೆನಪಿನಲ್ಲಿ 2026-27ನೇ ಸಾಲಿನಿಂದ ಸರ್ಕಾರಿ ಶಾಲೆಗಳ ಪ್ರತಿಭಾನ್ವಿತ ವಿದ್ಯಾಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಯೋಜನೆಯನ್ನು ಹಮ್ಮಿಕೊಂಡಿದೆ.
ನಗರದ ಪ್ರತಿಷ್ಠಿತ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ವತಿಯಿಂದ “ಅಲಿಖಿತ ಆಲೋಚನೆಗಳ ಎಳೆಗಳು” (Threads of Unwritten Thoughts) ಎಂಬ ಪರಿಕಲ್ಪನೆಯಡಿ TEDxStAloysius’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯದ ಸಹಕುಲಪತಿ ರೆ. ಡಾ. ಮೆಲ್ವಿನ್ ಡಿ.ಕುನಾ ತಿಳಿಸಿದರು.
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.
ಭಾರೀ ಕುತೂಹಲ ಮೂಡಿಸಿದ್ದ ಕಾಲೇಜು ಓದುತ್ತಿದ್ದ ಅಪ್ರಾಪ್ತ ಯುವತಿಯ ಅಪಹರಣ ಯತ್ನ ಪ್ರಕರಣ ಪೊಲೀಸರ ತನಿಖೆಯಲ್ಲಿ ಠುಸ್ ಆಗಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್ ನಲ್ಲಿ ಗೀಚಿಕೊಂಡು ಅಪಹರಣ ಪ್ರಹಸನದ ಕತೆ ಕಟ್ಟಿದ್ದಾಳೆಂದು ಪೊಲೀಸರು ಪತ್ತೆ ಮಾಡಿದ್ದಾರೆ.
ಚಾಮರಾಜನಗರದಿಂದ ತೆರಕಣಾಂಬಿ ಮಾರ್ಗವಾಗಿ ಗುಂಡ್ಲುಪೇಟೆಗೆ ಬರ್ತಿದ್ದ ಕೆ ಎಸ್ ಆರ್ಟಿಸಿ ಬಸ್ಸಿನ ಆಕ್ಸೆಲ್ ಕಟ್ಟಾಗಿದ್ದು ಚಾಲಕನ ಜಾಗರೂಕತೆಯಿಂದ ಬಾರಿ ಅನಾಹುತವೊಂದು ತಪ್ಪಿದೆ.
“ನಾನು ಠಾಕೂರ್, ನನ್ನ ಜೊತೆ ಆಟವಾಡಬೇಡಿ” ಗ್ರಾಹಕನಿಗೆ ಜಾತಿ ಅಹಂಕಾರ ತೋರಿಸಿ ಬ್ಯಾಂಕ್ ಉದ್ಯೋಗಿ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ.
ಫೆಬ್ರವರಿ 15 ರಂದು ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಪ್ಲಾಸ್ಟಿಕ್ ಗೋಡೌನ್ಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬನ್ನೇರುಘಟ್ಟ ರಸ್ತೆಯ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ.