Showing 20 of 20455 articles • Page 182 of 1023
ಪ್ಲಾಸ್ಟಿಕ್ ಗೋಡೌನ್ಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬನ್ನೇರುಘಟ್ಟ ರಸ್ತೆಯ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ.
ಕದಿಕೆ ಹಳೆಯಂಗಡಿಯಲ್ಲಿ ಇರುವ ಹಝತ್ ಸೈಯದ್ ಮೌಲಾನವಲಿಯುಲ್ಲಾಹಿ (ಖ.ಸಿ) ದರ್ಗಾ ಶರೀಫ್ ಇದರ ವಾರ್ಷಿಕ ಉರೂಸ್ ಸಮಾರಂಭವು ಫೆಬ್ರವರಿ 11ರಿಂದ 14ರವರೆಗೆ ಭಕ್ತಿಭಾವದಿಂದ ನಡೆಯಲಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಕುಡುಂಬೂರು ತಿಳಿಸಿದ್ದಾರೆ.
ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಸ್ವಾಯತ್ತ) ತನ್ನ ಬೆಳ್ಳಿ ಮಹೋತ್ಸವ ಆಚರಣೆಗಳನ್ನು ಫೆಬ್ರವರಿ 25ರ ಬುಧವಾರ ಅಧಿಕೃತವಾಗಿ ಉದ್ಘಾಟಿಸಲು ಸಜ್ಜಾಗಿದೆ.
ಕೊಟ್ಟಾರ ಚೌಕಿ, ಮಾಲೆಮಾರ್ ಹಾಗೂ ಮಾಲಾಡಿ ಕೋರ್ಟ್ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕಾಡುತ್ತಿರುವ ರಸ್ತೆ ಸಂಚಾರ ಸುರಕ್ಷತೆ ಹಾಗೂ ಒಳಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹಿಸಿ ಜನಹಿತ ರಕ್ಷಣಾ ಸಮಿತಿ ನೆಕ್ಕಿಲ ಮಾಲೆಮಾರ್ ಕೊಟ್ಟಾರ ಚೌಕಿ ನೇತೃತ್ವದಲ್ಲಿ ಸ್ಥಳೀಯ ನಾಗರಿಕರು ಧರಣಿ ಪ್ರತಿಭಟನೆ ನಡೆಸಿದರು.
ಪಡುಬಿದ್ರಿ ಸಮೀಪದ ಹೆಜಮಾಡಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಮೂರ್ತಿಗೆ ಉಡುಪಿ ಶ್ರೀ ಕೃಷ್ಣ ಮಠದ ವಿಶ್ವಗೀತಾ ಪರ್ಯಾಯೋತ್ಸವದ ಸ್ಮರಣಾರ್ಥವಾಗಿ ಭಕ್ತಿಪೂರ್ವಕವಾಗಿ ಸ್ವರ್ಣ ಅಟ್ಟೆ ಹಾಗೂ ಪ್ರಭಾವಳಿಯನ್ನು ಸಮರ್ಪಿಸಲಾಯಿತು.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ–66ರ ಕುಂದಾಪುರ ತಾಲೂಕಿನ ಕನ್ನುಕೆರೆ, ನವಶಕ್ತಿ ಕಲ್ಯಾಣ ಮಂಟಪದ ಎದುರು ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಓಮನ್ನ ಉತ್ತರ ಅಲ್ ಬಟಿನಾ ಗವರ್ನರೇಟ್ನ ಲಿವಾ ವಿಲಾಯತ್ನಲ್ಲಿ ಫೆ.8ರಂದು ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ಉಡುಪಿ ಕಾಪು ಸಮೀಪದ ಉಚ್ಚಿಲ ಕಲತ್ತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಪಬ್ಜಿ ಗೇಮ್ ಆಡುತ್ತಲೇ ರಕ್ತದೊತ್ತಡ ಹೆಚ್ಚಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ.
ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ ವಾರ್ನಿಂಗ್ ನೀಡಲಾಗಿದೆ. ನಂಜನಗೂಡು ತಾಲ್ಲೂಕು ಗೋಳೂರು ಗ್ರಾಮದಲ್ಲಿ ಡಂಗುರ ಭಾರಿಸಿ ಎಚ್ಚರಿಕೆ ನೀಡಲಾಗಿದೆ.
ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಸುಮಾರು 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಇರುವ ಟ್ರಾಲಿ ಬ್ಯಾಗ್ನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ಪತ್ತೆಹಚ್ಚಿ ವಾಪಸ್ ನೀಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮಾರ್ಚ್ 30 ರಂದು ನಂಜನಗೂಡಿನಲ್ಲಿ ನಡೆಯುವ ದೊಡ್ಡ ಜಾತ್ರೆಗೆ ಲಕ್ಷಾಂತರ ಜನ ಆಗಮಿಸುತ್ತಾರೆ. ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಆಗದಂತೆ ಕಟ್ಟುನಿಟ್ಟಾಗಿ ಬ್ಯಾರಿಕೆಡ್ ಗಳನ್ನು ಅಳವಡಿಸುವ ಮೂಲಕ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಬಕಾರಿ ಹಗರಣ ರಾಜ್ಯದಾದ್ಯಂತ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಬಿಳಿಯಾರು ಧೂಮಾವತಿ ಸನ್ನಿಧಾನಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಭೇಟಿ ಕೊಟ್ಟಿರುವುದು ಬಹಳಷ್ಟು ಗಮನಸೆಳೆದಿದೆ.
ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಾಧೇಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಾಹುಗಢ ಗ್ರಾಮದ ಕರು ಟೋಲಾದ ಅಪ್ಗ್ರೇಡ್ ಮಿಡಲ್ ಶಾಲೆಯಲ್ಲಿ ನಡೆದಿದೆ.
ಫೆಬ್ರವರಿ 15ರಂದು ಕೊಲಂಬೊದಲ್ಲಿ ಭಾರತ ತಂಡದೆದುರು ನಡೆಯಬೇಕಿರುವ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಎಂಬ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕಿದ್ದರೆ ಹಾಗೂ ಈ ಕುರಿತು ತನ್ನ ಸರಕಾರದೊಂದಿಗೆ ಸಮಾಲೋಚನೆ ನಡೆಸಬೇಕಿದ್ದರೆ, ತನ್ನ ಮೂರು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಎದುರು ಷರತ್ತು ವಿಧಿಸಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ಅನಾರೋಗ್ಯದ ಹಿನ್ನೆಲೆ ಹಿರಿಯ ರಾಜಕಾರಣಿ, ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಪುಣೆಯ ರೂಬಿ ಹಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.
ಕಂಟೇನರ್ ವಾಹನದಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಕವಲಂದೆ ಪೊಲೀಸರು ರಕ್ಷಿಸಿ ಮೈಸೂರಿನ ಪಿಂಜಾರಪೋಲ್ ಗೆ ರವಾನಿಸಿದ್ದಾರೆ.
ವಾಮಂಜೂರಿನ ಉಳೈಬೆಟ್ಟು ಟೈಲ್ ಫ್ಯಾಕ್ಟರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ ಅಮಾನುಷ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ದೃಢೀಕರಿಸಿದೆ.
ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಬಳಿ ಇರುವ ವಸತಿಗೃಹದಲ್ಲಿ ಯಾತ್ರಾರ್ಥಿಯೊಬ್ಬರು ಕುಳಿತ ಕುರ್ಚಿಯಲ್ಲಿಯೇ ಸಾವನಪ್ಪಿರುವ ಘಟನೆ ನಡೆದಿದೆ.
ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದಲೇ ಮುಖ್ಯಮಂತ್ರಿ ಹಾದಿಯಾಗಿ ಇಡೀ ಮಂತ್ರಿಮಂಡಲ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವರ ರಕ್ಷಣೆಯಲ್ಲಿ ತೊಡಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆರೋಪಿಸಿದರು.