Showing 20 of 20456 articles • Page 185 of 1023
ಬ್ರಹ್ಮಾವರ ತಾಲೂಕಿನ ಬಾರಕೂರು ಸಮೀಪದ ಹೊಸಾಳ ಗ್ರಾಮದ ನಾಗರಮಠದ ಸೀತಾನದಿಯಲ್ಲಿ ಮರಳುಗಾರಿಕೆಯನ್ನು ಸ್ಥಗಿತಗೊಳಿಸಿ ಕೃಷಿಭೂಮಿ ಉಳಿಸುವಂತೆ ಆಗ್ರಹಿಸಿ ನಾಗರಮಠ ಗ್ರಾಮಸ್ಥರು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದರು.
ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಭೂಗತ ಲೈನ್ ಮೂಲಕ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ ರೂ. ಮಂಜೂರಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಆರಂಭವಾಗಲಿದೆ ಎಂದು ರಾಜ್ಯ ವಿಧಾನಸಭೆಯ ಸ್ಪೀಕರ್ ಹಾಗೂ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ.
ಕೆನರಾ ಬ್ಯಾಂಕ್ 06.02.2026 ರಂದು ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿಯನ್ನು (E Hundi) ಅಳವಡಿಸಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಮೌಲ್ಯದ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ.
ಕೋಸ್ಟಲ್ ಸ್ಟಾರ್ಟ್ಅಪ್ ಫೆಸ್ಟ್ 2026 ರ ಔಪಚಾರಿಕ ಉದ್ಘಾಟನೆಯು ಫೆಬ್ರವರಿ 7, 2026 ರಂದು ಮಂಗಳೂರಿನ ದಿ ಓಷನ್ ಪರ್ಲ್ನಲ್ಲಿ ನಡೆಯಿತು.
ಜಿಎಸ್ಬಿ ಸಮಾಜ ಹಿತರಕ್ಷಣಾ ವೇದಿಕೆಯ ಮಹತ್ವಾಕಾಂಕ್ಷಿ ಯೋಜನೆ ವಯೋವಂದನ ಆತಿಥ್ಯ ಗೃಹ ಇದರ ಕಟ್ಟಡದ ಭೂಮಿ ಪೂಜೆ ಮತ್ತು ಶಿಲನ್ಯಾಸ ಕಾರ್ಯಕ್ರಮವು ಪರಮಪೂಜ್ಯ ಶ್ರೀ ಕಾಶೀ ಮಠಾಧೀಶರಾದ ಶ್ರೀ ಶ್ರೀ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ನಕ್ಷತ್ರ (ಸ್ವಾತಿ ನಕ್ಷತ್ರ)ದಂದು ಫೆಬ್ರವರಿ 8 ಆದಿತ್ಯವಾರದಂದು ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ಜರುಗಲಿರುವುದು.
ಇಟ್ಟಿಗೆ ತಯಾರಿಸುವ ಯಂತ್ರ ಕೊಡುವುದಾಗಿ ನಂಬಿಸಿ ಕೇರಳಾ ರಾಜ್ಯದ ಉದ್ಯಮಿ ಮೈಸೂರಿನ ಸಿವಿಲ್ ಕಂಟ್ರಾಕ್ಟರ್ ಗೆ 25 ಲಕ್ಷ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.
ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ದೇವಾಲಯಕ್ಕೆ ಬರುವ ಭಕ್ತರನ್ನ ಸುಲಿಗೆ ಮಾಡುತ್ತಿರುವ ಆರೋಪ ಕೇಳಿಬಂದಿದೆ.ಪಾರ್ಕಿಂಗ್ ಶುಲ್ಕದಲ್ಲಿ ನಿಗದಿತ ದರಕ್ಕಿಂತಲೂ ಹೆಚ್ಚು ವಸೂಲಿ ಮಾಡುವ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.ದಾಖಲೆ ಸಮೇತ ರೆಡ್ ಹ್ಯಾಂಡಾಗಿ ಹಿಡಿದರೂ ದೇವಾಲಯ ಆಡಳಿತ ಮಂಡಳಿ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದೆ.
ಮೈಸೂರು: ನಗರ ಸಿಸಿಬಿ ಪೊಲೀಸರು ನೀಡಿದ ಖಚಿತ ಮಾಹಿತಿ ಆಧಾರದ ಮೇರೆಗೆ ಉದಯಗಿರಿ ಠಾಣಾ ವ್ಯಾಪ್ತಿಯ ಸಾತಗಳ್ಳಿಯಲ್ಲಿರುವ ಮೂನ್ ಬಕ್ಸ್ ಕೆಫೆ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನ ಬಂಧಿಸಿ 1.20 ಲಕ್ಷ ಮೌಲ್ಯದ 11 ಗ್ರಾಂ 90 ಮಿಲಿ ತೂಕದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಅಮೀರ್ ಖಾನ್ ಸೈಯದ್ ಇಮ್ರಾನ್ ಮಹಮ್ಮದ್ ನಬೀಲ್ ಬಂಧಿತ ಆರೋಪಿಗಳು. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮೂವರು ಆರೋಪಿಗಳ ಪೈಕಿ ಅಮೀರ್ ಖಾನ್ […]
ನಗರದ ಕಾಮಾಕ್ಷಿ ಬಾಯಿ ಕಲ್ಯಾಣ ಮಂಟಪದಲ್ಲಿ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ನಂಜನಗೂಡು ಕೇಂದ್ರ ಘಟಕವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಬಿಎಐ ನಂಜನಗೂಡು ಕೇಂದ್ರ ಘಟಕವನ್ನು ಉದ್ಘಾಟನೆ ಮಾಡಿರುವುದು ನನಗೆ ಸಂತಸ ತಂದಿದೆ. 1941 ರಲ್ಲಿ ಸಂಸ್ಥೆಯು ಪ್ರಾರಂಭವಾಗಿ ಇತಿಹಾಸ ಪುಟಕ್ಕೆ ಸೇರಿದೆ.
ವಿದ್ಯುತ್ ಸ್ಪರ್ಶದಿಂದಾಗಿ ಕಾಡಾನೆ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಸಮೀಪ ದೊಡ್ಡಹಾರವೇ ಅರಣ್ಯ ಮೀಸಲು ಪ್ರದೇಶದಲ್ಲಿ ನಡೆದಿದೆ.
ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವಾಗಿ ನಮ್ಮನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದರು.
ಪಿಲಿಕುಳ ಜೈವಿಕ ಉದ್ಯಾನವನದ (ಅಥವಾ ಮೃಗಾಲಯ) ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ (ZAK) ಹಸ್ತಾಂತರಿಸಲು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ಉತ್ಸುಕವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಹೇಳಿದ್ದಾರೆ.
ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ಮಟ ಮಟ ಮಧ್ಯಾಹ್ನ ದಿಢೀರ್ ಭೇಟಿ ನೀಡಿ, ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಶಾಸಕರ ದಿಢೀರ್ ಭೇಟಿಗೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ತಬ್ಬಿಬ್ಬಾಗಿ ನಿಂತರು.
ಬೇಸಿಗೆ ಆರಂಭಕ್ಕೂ ಮೊದಲೇ ಅರಣ್ಯದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಕೋಣನೂರು ಮತ್ತು ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಬೈಕ್ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲಿಯೇ ಇಬ್ಬರು ದುರ್ಮರಣ ಹೊಂದಿದ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗೇಟ್ ಬಳಿ ನಡೆದಿದೆ.
ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧಿಸಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಸ್ತಿತ್ವದ ಬಹುಪಾಲು ಸಮಯವನ್ನು IPL ನ ಅತ್ಯಂತ ಚರ್ಚಿತ ತಂಡವಾಗಿ ಕಳೆದಿದೆ. ಈಗ 2025 ರಲ್ಲಿ ಅಂತಿಮವಾಗಿ IPL ಗೆದ್ದು ಎರಡನೇ WPL ಪ್ರಶಸ್ತಿಯನ್ನು ಗೆದ್ದ ಕೇವಲ ತಿಂಗಳುಗಳ ನಂತರ, RCB ಭಾರತೀಯ ಕ್ರೀಡೆ ಇದುವರೆಗೆ ಕಂಡ ಅತ್ಯಂತ ಸ್ಪರ್ಧಾತ್ಮಕ ಫ್ರಾಂಚೈಸ್ ಮಾರಾಟ ಪ್ರಕ್ರಿಯೆಗಳಲ್ಲಿ ಒಂದರ ಕೇಂದ್ರಬಿಂದುವಾಗಿದೆ.
ವೆಂಕಟೇಶ ನಾಯಕ್ ಅವರು “ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ – ಒಂದು ಪ್ರಕರಣ ಅಧ್ಯಯನ” ಎಂಬ ವಿಷಯದ ಮೇಲೆ ತಮ್ಮ ಸಂಶೋಧನಾ ಪ್ರೌಢ ಪ್ರಬಂಧವನ್ನು ಸಲ್ಲಿಸಿದ್ದರು.