Showing 20 of 20461 articles • Page 187 of 1024
ಮಂಗಳೂರಿನಲ್ಲಿ ತಂತ್ರಜ್ಞಾನದ ಹೊಸ ದಿಗಂತ ತೆರೆದ ಸ್ಪೇನ್ ರಾಯಭಾರಿ: ‘ದ ಗ್ರೇಟ್ ರಿಸೆಟ್’ ಲೋಕಾರ್ಪಣೆ
ಸುರತ್ಕಲ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NITK), ಭಾರತದ ಅಮೂಲ್ಯವಾದ ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ಉತ್ತೇಜಿಸಲು ಮತ್ತು ಸಂರಕ್ಷಿಸಲು ಮೀಸಲಾಗಿರುವ ಐದು ದಿನಗಳ ಸಾಂಸ್ಕೃತಿಕ ಉತ್ಸವವಾದ SPICMACAY VIRASAT’26 ಅನ್ನು ಹೆಮ್ಮೆಯಿಂದ ಘೋಷಿಸುತ್ತದೆ.
ಆಲ್ ಅಮೆರಿಕಾ ತುಳು ಅಸೋಸಿಯೇಶನ್ (AATA) ಹಾಗೂ ಬಂಟ್ಸ್ ಅಸೋಸಿಯೇಶನ್ ಆಫ್ ನಾರ್ತ್ ಅಮೆರಿಕಾ (BANA) ಸಂಯುಕ್ತ ಆಶ್ರಯದಲ್ಲಿ 2026ರ ಜನವರಿ 1ರಂದು ‘ಬಲೆ ತುಳು ಪಾತೆರ್ಗ’ ತರಗತಿ–2025’ರ ಸಮಾರೋಪ ಸಮಾರಂಭವನ್ನು ಯಶಸ್ವಿಯಾಗಿ zoom ವೇದಿಕೆಯಲ್ಲಿ ಆಯೋಜಿಸಲಾಯಿತು.
ರಾಷ್ಟ್ರೀಯ ಹೆದ್ದಾರಿಯ ನಂತೂರಿನಲ್ಲಿ ಪ್ರೈವರ್ ನಿರ್ಮಿಸುವ ಪ್ರಸ್ತಾವನೆಗ ಸಂಬಂಧಿ ಸಮಗ್ರ ಯೋಜನಾ ವರದಿ ( ಡಿಪಿಆರ್) ತಯಾರಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.
ಪಿಲಿಕುಳ ಮೃಗಾಲಯ ಬಂದ್ ಆದೇಶ ಬಂದಿಲ್ಲ, ಪಿಲಿಕುಳ ಮೃಗಾಲಯ ಬಂದ್ ಮಾಡಬೇಕೆಂದು ಹೈಕೋರ್ಟ್ ಆದೇಶ ಕೊಟ್ಟಿರುವುದು ತಮಗೆ ಗೊತ್ತಿಲ್ಲ. ಅಂತಹ ಯಾವುದೇ ಆದೇಶ ತಮಗೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ಮಾಹಿತಿ ನೀಡಿದರು.
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿಕೊಂಡು ಭಾರಿ ಮೊತ್ತದ ಹೂಡಿಕೆ ವಂಚನೆ ನಡೆಸುತ್ತಿದ್ದ ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ವಂಚಕರ ಜಾಲವನ್ನು ಮಂಗಳೂರು ನಗರ ಸೆನ್ ಕೈಂ ಪೊಲೀಸ್ ಠಾಣೆಯವರು ಭೇದಿಸಿದ್ದು, ಒಟ್ಟು 11 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಸಿಗರೆಟ್, ವಾಟರ್ ಬಾಟಲ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ನಡೆದಿದೆ.
1986, ಫೆಬ್ರವರಿ 6, ರೋಮನ್ ಕ್ಯಾಥೋಲಿಕ್ ಚರ್ಚಿನ ಪರಮಗುರು, ಕ್ರೈಸ್ತ ಸಮುದಾಯದ ಜಗದ್ಗುರು 2 ನೇ ಜೋನ್ ಪಾವ್ಲ್ ಅವರ ಪಾದಸ್ಪರ್ಶದಿಂದ ಪಾವನವಾದ ಪುಟ್ಟ ಊರು ಕರ್ನಾಟಕದ ಮಂಗಳೂರಿನ ನಮ್ಮ ಹೆಮ್ಮಯ ಬಜ್ಪೆ. ಇತಿಹಾಸದ ಆ ಅವಿಸ್ಮರಣೀಯ ದಿನ ಇಂದಿಗೂ ಬಜ್ಪೆಯ ನಾಗರಿಕರಿಗೆ ಜೀವಮಾನದ ಮರೆಯಲಾಗದ ದಿನವಾಗಿ ಉಳಿದಿದೆ.
ಪ್ರಸಕ್ತ ಶೈಕ್ಷಣಿಕ ವಿದ್ಯಮಾನದಲ್ಲಿ ಶಿಕ್ಷಣ ಕೇವಲ ಪದವಿಗೆ ಮಾತ್ರ ಸೀಮಿತವಾಗಿಲ್ಲ. ಜಗತ್ತು ಪ್ರತಿಭಾನ್ವೇಷಣೆಯಲ್ಲಿದೆ. ಈ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಮಕ್ಕಳು ವೃತ್ತಿಪರ ಕ್ಷೇತ್ರದಲ್ಲಿ ಮುನ್ನಡೆಯಲು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹಳ ಮಹತ್ವಪೂರ್ಣವಾಗಿರುತ್ತದೆ.
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.
ಕೆಟಿಗ, ಕ್ಯಾನ್ಸರನ್ನು ಗೆದ್ದ ಮತ್ತು ಸಮಾಜಸೇವಕ ಯುವರಾಜ್ ಸಿಂಗ್ ಅವರ YouWeCan ಫೌಂಡೇಶನ್, ಶಓಮಿ ಇಂಡಿಯಾದ ಬೆಂಬಲದೊಂದಿಗೆ, ಸ್ತನ ಕ್ಯಾನ್ಸರ್ ಗಾಗಿ 10,000 ಮಹಿಳೆಯರನ್ನು ಸ್ಕ್ರೀನಿಂಗ್ಗೆ ಒಳಪಡಿಸಿ ಮತ್ತು ಕರ್ನಾಟಕದ ಸೇವಾವಂಚಿತ ಪ್ರದೇಶಗಳಲ್ಲಿ ಮಹಿಳೆಯರಿಗಾಗಿ ಆರಂಭಿಕ ಪತ್ತೆಹಚ್ಚುವಿಕೆ ಮತ್ತು ಶುಶ್ರೂಷೆಗೆ ಪ್ರವೇಶಾವಕಾಶವನ್ನು ಬಲಪಡಿಸುವ ಮೂಲಕ ಸ್ವಸ್ಥ ಮಹಿಳಾ ಸ್ವಸ್ಥ ಭಾರತ ತಡೆಯಾತ್ಮಕ ಆರೋಗ್ಯಶುಶ್ರೂಷಾ ಕಾರ್ಯಕ್ರಮದ 1ನೆ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಮಹಿಳೆಯರ ಪ್ರೀಮಿಯರ್ ಲೀಗ್ ಸೀಸನ್ 4 ರ ಫೈನಲ್ ಪಂದ್ಯದಲ್ಲಿ ಆರ್ ಸಿಬಿ ತಂಡವು 6 ವಿಕೆಟ್ ಗಳ ಭರ್ಜರಿ ಜಯ ಗಳಿಸುವ ಮೂಲಕ ಎರಡನೇ ಬಾರಿಗೆ ಡಬ್ಲ್ಯೂ ಪಿಲ್ ಟ್ರೋಫಿ ಮುಡಿಗೇರಿಸಿಕೊಂಡಿದೆ.
ನಗರದಲ್ಲಿ ಹೆಲಿಕಾಪ್ಟರ್ಗಳಿಗೆ ಶಾಶ್ವತ ಹೆಲಿಪ್ಯಾಡ್ ನಿರ್ಮಿಸುವ ಆವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಜಾಗ ನಿಗದಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್ವಿ ಹೇಳಿದ್ದಾರೆ.
ಮುರುಡೇಶ್ವರದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲೊಂದು ಯುವಕನಿಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಭಟ್ಕಳ ರೈಲು ನಿಲ್ದಾಣದ ಸಮೀಪದ ರೈಲ್ವೆ ಸೇತುವೆ ಕೆಳಭಾಗದಲ್ಲಿ ಬುಧವಾರ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಮಜಾಲ್ತಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು ಘಟನೆಯಲ್ಲಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ರೊಚ್ಚಿಗೆದ್ದು, ಬಿಜೆಪಿಯರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ವಿಪಕ್ಷಗಳ ವಿರುದ್ಧ ಅಬ್ಬರಿಸಿದ ಶಿವಲಿಂಗೇಗೌಡ ಬಿಜೆಪಿ ಸದಸ್ಯ ಶರಣು ಸಲಗಾರ್ ಸೇರಿದಂತೆ ಇತರರ ವಿರುದ್ಧ ವಾಗ್ದಾಳಿ ನಡೆಸಿದರು.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹುಡುಗಿಯ ಮೇಲೆ ಗೂಳಿಯೊಂದು ಇದ್ದಕ್ಕಿದ್ದಂತೆ ದಾಳಿ ಮಾಡಿದ ಆಘಾತಕಾರಿ ಘಟನೆ ಲಕ್ನೋದ ಚೌಪಟ್ಟಿ ಪ್ರದೇಶದಲ್ಲಿ ನಡೆದಿದೆ.
ಬೆಂಗಳೂರು ಮತ್ತು ಹೊಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಅತ್ತಿಬೆಲೆ ಬಳಿ ಬುಧವಾರ ಭಾರೀ ಪ್ರಮಾಣದಲ್ಲಿ ರಸ್ತೆ ಕುಸಿದಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯ (FMHMC), ದೇರಳಕಟ್ಟೆ ಇದರ ಫಾರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗವು 2026ರ ಫೆಬ್ರವರಿ 8ರಂದು ಫಾದರ್ ಮ್ಯುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಆಡಿಟೋರಿಯಂ, ದೇರಳಕಟ್ಟೆಯಲ್ಲಿ “QUEST 2026” ಎಂಬ ಏಕದಿನ ರಾಷ್ಟ್ರೀಯ ಸೆಮಿನಾರ್ ಅನ್ನು ಆಯೋಜಿಸಲಾಗಿದೆ.
ತುಳುನಾಡಿನ ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಗುರುತಿಸಿದ ಕಂಬಳ ಕೂಟಕ್ಕೂ ಚಿನ್ನದ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕಂಬಳ ಸಂಘಟಕರಿಗೆ ಚಿನ್ನದ ಬೆಲೆ ಏರಿಕೆ ಹೊರೆಯಾಗುತ್ತಿದೆ. ಪ್ರತಿ ಕಂಬಳ ಕೂಟದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬಹುಮಾನ ನೀಡಲಾಗುತ್ತದೆ. ಚಿನ್ನದ ಬೆಲೆ ಏರಿಕೆ ಆಗುತ್ತಿರುವುದರಿಂದ ಕರಾವಳಿಯ ಕಂಬಳ ಕೂಟದಲ್ಲಿ ಇನ್ನೂ ಚಿನ್ನ ನೀಡುತ್ತಾರಾ..? ಇಲ್ಲವಾ..? ಎಂಬುದರ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಕಂಬಳ ಸಮಿತಿಯ ರಾಜ್ಯಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸ್ಪಷ್ಟಣೆ ನೀಡಿದ್ದಾರೆ.