Showing 20 of 20464 articles • Page 188 of 1024
ಬೆಂಗಳೂರು ಮತ್ತು ಹೊಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಅತ್ತಿಬೆಲೆ ಬಳಿ ಬುಧವಾರ ಭಾರೀ ಪ್ರಮಾಣದಲ್ಲಿ ರಸ್ತೆ ಕುಸಿದಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯ (FMHMC), ದೇರಳಕಟ್ಟೆ ಇದರ ಫಾರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗವು 2026ರ ಫೆಬ್ರವರಿ 8ರಂದು ಫಾದರ್ ಮ್ಯುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಆಡಿಟೋರಿಯಂ, ದೇರಳಕಟ್ಟೆಯಲ್ಲಿ “QUEST 2026” ಎಂಬ ಏಕದಿನ ರಾಷ್ಟ್ರೀಯ ಸೆಮಿನಾರ್ ಅನ್ನು ಆಯೋಜಿಸಲಾಗಿದೆ.
ತುಳುನಾಡಿನ ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಗುರುತಿಸಿದ ಕಂಬಳ ಕೂಟಕ್ಕೂ ಚಿನ್ನದ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕಂಬಳ ಸಂಘಟಕರಿಗೆ ಚಿನ್ನದ ಬೆಲೆ ಏರಿಕೆ ಹೊರೆಯಾಗುತ್ತಿದೆ. ಪ್ರತಿ ಕಂಬಳ ಕೂಟದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬಹುಮಾನ ನೀಡಲಾಗುತ್ತದೆ. ಚಿನ್ನದ ಬೆಲೆ ಏರಿಕೆ ಆಗುತ್ತಿರುವುದರಿಂದ ಕರಾವಳಿಯ ಕಂಬಳ ಕೂಟದಲ್ಲಿ ಇನ್ನೂ ಚಿನ್ನ ನೀಡುತ್ತಾರಾ..? ಇಲ್ಲವಾ..? ಎಂಬುದರ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಕಂಬಳ ಸಮಿತಿಯ ರಾಜ್ಯಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸ್ಪಷ್ಟಣೆ ನೀಡಿದ್ದಾರೆ.
ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಜಾಗಕ್ಕೆ ನುಗ್ಗಿದ ಕಾವೇರಿ ನರ್ಸಿಂಗ್ ಕಾಲೇಜು ಸಿಬ್ಬಂದಿಗಳು ಹಾಗೂ ಸಹಚರರು ರಕ್ಷಣಾ ಗೋಡೆಯನ್ನ ಕಿತ್ತು ದಾಂಧಲೆ ನಡೆಸಿ ಬೆದರಿಕೆ ಹಾಕಿರುವ ಪ್ರಕರಣ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾವೇರಿ ನದಿಗೆ ಬಿದ್ದು ವೃದ್ದೆ ಆತ್ಮಹತ್ಯೆಗೆ ಯತ್ನಿಸಿದ ಘಟನರ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ನಡೆದಿದೆ.
ಮೈಸೂರು: ಡಿಸೈನಿಂಗ್ ಬೋಟಿಕ್ ತರಬೇತಿ ಕೊಡುವುದಾಗಿ ಆಮಿಷ ತೋರಿಸಿ 8 ಮಹಿಳೆಯರಿಗೆ 12.80 ಲಕ್ಷ ವಂಚಿಸಿರುವ ಪ್ರಕರಣ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮುಸ್ಲಿಂ ಸಮುದಾಯದ ಶಬ್ ಎ ಬರಾತ್ ಹಬ್ಬದ ಹಿನ್ನಲೆ ಮೈಸೂರು ನಗರ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
ಕಳೆದ 14 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಮುಕ್ಕಚೇರಿ ಉಳ್ಳಾಲದ ಮಹಮ್ಮದ್ ಸಂಶೀರ್ ಎಂದು ಗುರುತಿಸಲಾಗಿದೆ.
ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಸರಗೂರು ತಾಲ್ಲೂಕಿನ ಹಂಚಿಪುರ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಿನಿಂದ ನಾಡಿಗೆ ಎಂಟ್ರಿಕೊಟ್ಟ ಗಜರಾಜ ಆತಂಕ ಸೃಷ್ಟಿಸಿದ್ದಾನೆ. ಗ್ರಾಮಸ್ಥರ ಕೂಗಾಟ, ಕಿರುಚಾಟಕ್ಕೆ ಗ್ರಾಮದ ಹೊರವಲಯದಲ್ಲೆ ಆನೆಗಳು ಓಡಾಡಿವೆ. ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ನಡುರಸ್ತೆಯಲ್ಲಿ ಕುಣಿದು, ಪಟಾಕಿ ಸಿಡಿಸಿ ನಡುರಸ್ತೆಯಲ್ಲಿಯೇ ಹುಚ್ಚಾಟ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ.
ರಾಜಕೀಯದಲ್ಲಿ ಹೆಣ್ಣುಮಕ್ಕಳು ಗ್ಲಾಮರಸ್ ಆಗಿರ್ಬೇಕು ಅನ್ನೊದು ಹೆಚ್ಚಾಗಿದೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವೆ ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿಕೆ ನೀಡಿದರು.
ಸುಮಾರು 20 ಮಕ್ಕಳ ಪ್ರಾಣ ಉಳಿಸಲು ಅಂಗನವಾಡಿ ಅಡುಗೆಯವರೊಬ್ಬರು ತಮ್ಮ ಪ್ರಾಣವನ್ನೇ ಬಲಿ ಕೊಟ್ಟಿರುವ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ರಣಪುರ ಗ್ರಾಮದಲ್ಲಿ ನಡೆದಿದೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎನ್ಸಿಸಿ ಆರ್ಮಿ ವಿಂಗ್ನ ಎಸ್ಯುಒ ಶ್ಲೋಕ್ ಸನಿಲ್ರವರು ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಡಿಡಿಜಿಯ ಗೌರವಾನ್ವಿತ ಉಪಸ್ಥಿತಿಯಲ್ಲಿ ಭಾರತದ ಘನತೆವೆತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರಿಂದ ಪ್ರತಿಷ್ಠಿತ ಆರ್ಡಿಸಿ ಚಾಂಪಿಯನ್ಶಿಪ್ ಟ್ರೋಫಿ 2026 ಅನ್ನು ಪಡೆದರು.
ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನು ರಹಿತ ವಾರೆಂಟ್ ಕುರಿತು ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ ಜಾಮೀನು ಮಂಜೂರು ಮಾಡಿದೆ.
ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ವಕೀಲರು ಥಳಿಸಿದ್ದಾರೆ, ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆ ಯಡಿ ಎಮ್ಮೆಕೆರೆ ಈಜುಕೊಳವನ್ನು ರೂ. 24.94 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಎಪಿ ಮಂಗಳೂರು ಸಂಶೋಧನಾ ತಂಡವು ಈ ಈಜು ಕೊಳದ ನಿರ್ಮಾಣದ ಸಮಯ ದಲ್ಲಿ ಅತಿಯಾಗಿ ಹೆಚ್ಚಿದ ವೆಚ್ಚಗಳ ಬಗ್ಗೆ ಮತ್ತು ನಿಯಮಗಳ ಪಾಲನೆಯ ನ್ಯೂನತೆಗಳು ಮತ್ತು ಈಜುಕೊಳದ ರಚನೆ ಯನ್ನು ನೆಲಮಟ್ಟ ದಿಂದ ಎತ್ತರಿಸಲಾಗಿದ್ದು, ಇದಕ್ಕೆ ಪೈಲಿಂಗ್ ಅಗತ್ಯವಿರುತ್ತದೆ.
ತುಳುನಾಡಿನ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಗುರುತಿಸುವಂತಹ ಕಂಬಳಕ್ಕೂ ಇದೀಗ ಚಿನ್ನದ ದರ ಏರಿಕೆಯ ನೇರ ಪರಿಣಾಮ ತಟ್ಟಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ನಾಗಾಲೋಟದಂತೆ ಏರಿಕೆಯಾಗುತ್ತಿದ್ದು, ಇದರ ಹೊರೆ ಕಂಬಳ ಕೂಟಗಳ ಮೇಲೂ ಹೆಚ್ಚಾಗಿದೆ.
ಮರಿ ಸತ್ತ ದುಃಖದಲ್ಲಿ ತಾಯಿ ಕೋತಿ ಅನುಭವಿಸುತ್ತಿದ್ದ ನೋವಿನ ದೃಶ್ಯ ಮನಕಲುಕುವಂತಿತ್ತು. ತಾಯಿ ಕೋತಿ ಅಸ್ವಸ್ಥಳಾಗಿ ಚಲಿಸಲು ನಿರಾಕರಿಸಿದ ಕೋತಿಯನ್ನು ಪೊಲೀಸರು ರಕ್ಷಿಸಿದರು.
ಖ್ಯಾತ ಜ್ಯೋತಿಷಿಯೊಂದಿಗೆ ಮಹಿಳೆ ಅನೈತಿಕ ಸಂಬಂಧ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದಿದೆ.