Showing 20 of 20464 articles • Page 189 of 1024
ಎಸ್ ಎಸ್ ಎಲ್ ಸಿ ಪರೀಕ್ಷೆ ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಣ ಇಲಾಖೆ, ಹಾಗೂ ತಾಲೂಕು ಪಂಚಾಯತ್ ವಿನೂತನ ಪ್ರಯತ್ನ ನಡೆಯುತ್ತಿದ್ದು, ಹಾವೇರಿ ತಾಲೂಕಿನ 33 ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಲ್ಲಿ ಮೊಬೈಲ್, ಟಿವಿ ಬಂದ್ ಮಾಡುವಂತೆ ಗ್ರಾಪಂ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಬೋಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ.
ನಿವೃತ್ತ ಸೇನಾ ಅಧಿಕಾರಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಕಿಲೋ ಮೀಟರ್ ದೂರದವರೆಗೆ ಇಬ್ಬರು ಕಿಡಿಗೇಡಿಗಳು ಎಳೆದೊಯ್ದಿದ್ದು ದೈಹಿಕವಾಗಿ ಹಲ್ಲೆ ಕೂಡ ನಡೆಸಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025–28ನೇ ಸಾಲಿನ ನೂತನ ಸಮಿತಿಗೆ ಅಧಿಕಾರವನ್ನು ಹಸ್ತಾಂತರಿಸಲಾಯಿತು.
ಕಾಮಗಾರಿ ಪ್ರಾರಂಭ ಮಾಡಿ ಒಂದು ತಿಂಗಳಾದರೂ ಕಾಮಗಾರಿ ಪರಿಪೂರ್ಣಗೊಳಿಸದೆ ಅರೆಬರೆ ಕಾಮಗಾರಿ ಎಂದು ಕುರುಬೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ತಾಯಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಪ್ರಿಯಕರನನ್ನ ಮಗ ನಡು ರಸ್ತೆಯಲ್ಲಿ ಕೊಚ್ಚಿ ಕೊಂದು ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದು ಶರಣಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದಾಗ ನಂಬಿಸಿ ಚಿನ್ನ ಗಿರವಿ ಇಟ್ಟುಕೊಂಡು ರಾತ್ರೋ ರಾತ್ರಿ ಎಸ್ಕೇಪ್ ಆಗಿದ್ದ ಸ್ಟಾರ್ ಗೋಲ್ಡ್ ಕಂಪನಿ ಮಾಲೀಕನನ್ನ ಬಂಧಿಸುವಲ್ಲಿ ವಿಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ದಾರಿತಪ್ಪಿ ಕಾಡಿನಿಂದ ನಾಡಿಗೆ ಬಂದ ಒಂಟಿಸಲಗ ದಿಕ್ಕಾಪಾಲಾಗಿ ಓಡಾಡಿ ಆತಂಕ ಸೃಷ್ಟಿಸಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದ ಅರಣ್ಯ ಇಲಾಖೆ ಕಚೇರಿ ಬಳಿಯೇ ಒಂಟಿ ಸಲಗ ಪುಂಡಾಟ ನಡೆಸುತ್ತಿದೆ.
ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನ ಪ್ರಶ್ನಿಸಿದ್ದಕ್ಕೆ ಮನೆಗೆ ನುಗ್ಗಿದ ಯುವಕರ ಗುಂಪು ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ.
ಬಾರ್ ತೆರೆಯಲು ಅವಕಾಶ ನೀಡದಂತೆ ಹುಣಸೂರು ತಾಲೂಕಿನ ಹೊಸರಾಮನಹಳ್ಳಿ ಗ್ರಾಮಸ್ಥರು ಪಿಡಿಓಗೆ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ರೂ.53.5 ಲಕ್ಷ ಕೋಟಿ ಗಾತ್ರದ 9ನೇ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆಯಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.
ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ನಡೆಸಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ.
ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ.
ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳವು ಫೆ.7 ಮತ್ತು 8ರಂದು ನಡೆಯಲಿದ್ದು, ಇದರ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆಯ ಚುನಾವಣೆ ರಾಜ್ಯ ಸರಕಾರ ಮಾಡದಿರಲು ಮುಖ್ಯ ಮಂತ್ರಿ ಕುರ್ಚಿಯ ಗೊಂದಲ ಕಾರಣವಾಗಿದೆ ಎಂದರು.
ಪ್ರಮುಖ ನೀರಿನ ಪೈಪ್ಲೈನ್ಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುವುದರಿಂದ, ಫೆಬ್ರವರಿ 5 ಮತ್ತು 6 ರಂದು 2 ದಿನಗಳ ಕಾಲ ಬೆಂಗಳೂರಿನ ಕೆಲವು ಭಾಗಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ಯೋಜಿತ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರಲ್ಲಿ ಭಾರೀ ಭಯ ಹುಟ್ಟಿಸಿದ ಚಿರತೆಯೊಂದು ಮಂಗಳೂರು ತಾಲೂಕು, ಕೆಂಜಾರು, ಪೋರ್ಕೋಡಿ ಯಲ್ಲಿ ಬೋನಿಗೆ ಬಿದ್ದಿದೆ.
ಬೆಂಗಳೂರಿನಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದ್ದು, ಮಹಿಳೆಗೆ ಗಂಭೀರ ಗಾಯಗಳಾಗಿವೆ.
ಅಡ್ಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-2026ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶನಿವಾರ ಶಾಲಾ ಮೈದಾನದಲ್ಲಿ ನಡೆಯಿತು
ಹಿರಿಯಡಕದಲ್ಲಿರುವ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವಾಲಯದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮುಷ್ಠಿ ಕಾಣಿಕೆಯು ನೆರವೇರಿತು. ಇದರ ಅಂಗವಾಗಿ ಪುತ್ತಿಗೆ ಮಠದ ಉಭಯ ಶ್ರೀಪಾದರನ್ನು ಭವ್ಯ ಮೆರವಣಿಗೆಯ ಮೂಲಕ ಪುತ್ತಿಗೆ ಮೂಲ ಮಠದಿಂದ ದೇವಾಲಯಕ್ಕೆ ಕರೆತಂದು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.