Showing 20 of 20466 articles • Page 190 of 1024
ಅಡ್ಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-2026ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶನಿವಾರ ಶಾಲಾ ಮೈದಾನದಲ್ಲಿ ನಡೆಯಿತು
ಹಿರಿಯಡಕದಲ್ಲಿರುವ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವಾಲಯದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮುಷ್ಠಿ ಕಾಣಿಕೆಯು ನೆರವೇರಿತು. ಇದರ ಅಂಗವಾಗಿ ಪುತ್ತಿಗೆ ಮಠದ ಉಭಯ ಶ್ರೀಪಾದರನ್ನು ಭವ್ಯ ಮೆರವಣಿಗೆಯ ಮೂಲಕ ಪುತ್ತಿಗೆ ಮೂಲ ಮಠದಿಂದ ದೇವಾಲಯಕ್ಕೆ ಕರೆತಂದು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.
ಮಲ್ಪೆ ಬೀಚ್ ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರಸಭೆಯ ಮೂಲಕ ₹49 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ ಜಂಕ್ಷನ್ ನಲ್ಲಿ ಅಂಬಾಗಿಲು ತಿರುವು ಸೇತುವೆ ಅಗಲೀಕರಣ ( ಫ್ರೀ ಲೆಫ್ಟ್ ) ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಗ್ರಾಹಕರ ಸಮಾವೇಶವನ್ನು ಉಡುಪಿ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು.
ಗೋಡ್ಸೆಗಿಂತ ಹೆಚ್ಚಾಗಿ ಗಾಂಧಿಯನ್ನು ಕೊಂದವರು ಕಾಂಗ್ರೆಸ್ನವರೇ ಎಂದು ಮಾಜಿ ಸಂಸದ ಹಾಗೂ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ಆಸ್ತಿ ವಿಚಾರದಲ್ಲಿ ಸೋದರ ಸಂಬಂಧಿಯ ಜೊತೆಗೆ ಜಗಳ ಕಾದ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಕೊಲೆಗೈದ ಘಟನೆ ಕರ್ನಾಟಕ ಗಡಿಭಾಗ ತಲಪಾಡಿ ಬಳಿಯ ತುಮ್ಮಿನಾಡಿನಲ್ಲಿ ನಡೆದಿದೆ. ಇಬ್ಬರ ಜಗಳ ಬಿಡಿಸಲು ಹೋದ 16 ವರ್ಷದ ಮಗಳು ದುರಂತ ಬಲಿಯಾಗಿದ್ದಾಳೆ.
ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೊಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.
ದ್ವೇಷ ಭಾಷಣ ಮಸೂದೆ ಅಂಗೀಕಾರಕ್ಕೆ ರಾಜ್ಯಪಾಲರ ವಿರೋಧ ವಿಚಾರವಾಗಿ ಮಂಗಳೂರಿನಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರನ್ನ MDMA ಡ್ರಗ್ಸ್ ಹೆಮ್ಮಾರಿ ಕಾಡುತ್ತಿದೆ.
ಗ್ರಾಮದ ಫೋಕಸ್ ಲೈಟ್ ಮೇಲೆ ಬಸವೇಶ್ವರರ ಬಾವುಟ ಅಳವಡಿಸಿದ ಹಿನ್ನಲೆ ಉಂಟಾದ ವಿವಾದ ಜಾತ್ರೆ ಸಂಭ್ರಮವನ್ನ ಮೊಟಕುಗೊಳಿಸಿದ ಘಟನೆ ನಂಜನಗೂಡು ತಾಲೂಕು ಹಗಿನವಾಳು ಗ್ರಾಮದಲ್ಲಿ ನಡೆದಿದೆ.
ಸಾಕಷ್ಟು ವಿವಾದಗಳಿಗೆ ಕಾರಣವಾಗಿ ಅರ್ಧದಲ್ಲಿ ರದ್ದಾಗಿದ್ದ ಬ್ರಹ್ಮಾವರ ಎಚ್ಎಂಸಿ ಯುನೈಟೆಡ್ ಟೆನಿಸ್ ಬಾಲ್ ಕ್ರಿಕೆಟ್ ಟ್ರೋಫಿಯ ವಿಜೇತ ತಂಡಗಳನ್ನು ಸೋಮವಾರ ಅದೃಷ್ಟದ ನಾಣ್ಯ ಚಿಮ್ಮುವ ಮೂಲಕ ಆಯ್ಕೆ ಮಾಡಲಾಯಿತು.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆಟ್ಟು ನಿವಾಸಿ ಗೀತಾ ಅವರ ಮೇಲೆ ಪತಿ ಸುನೀಲ್ ಕುಮಾರ್ ಮಾರಣಾಂತಿಕ ಹಲ್ಲೆ ನಡೆಸಿದ್ದು ಆರೋಪಿ ಪತ್ನಿ ಗೀತಾ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಉಡುಪಿ ನಗರದ ಹೃದಯ ಭಾಗದಲ್ಲಿ ರಾತ್ರಿ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪುಡಿ ರೌಡಿಗಳಂತೆ ಪಾನಮತ್ತರಾಗಿ ಹೊಡೆದಾಡಿಕೊಂಡು ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಆಪ್ತನ ಮೇಲೆ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಯಿಂದ ಉಡುಪಿಯ ಜನತೆ ಭಯಭೀತರಾಗಿದ್ದು,
ಅತೈವಾನ್ನ ಎಲೆಕ್ಟ್ರಾನಿಕ್ಸ್ ದೈತ್ಯ ಕಂಪನಿ ಫಾಕ್ಸ್ಕಾನ್ ಮತ್ತು ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಗ್ರಾಮ ಪಂಚಾಯತ್ ನಡುವೆ ದೊಡ್ಡ ಬಿಕ್ಕಟ್ಟು ಭುಗಿಲೆದ್ದಿದ್ದು, ಸ್ಥಳೀಯ ತೆರಿಗೆಗಳನ್ನು ಪಾವತಿಸದಿರುವುದು, ಕಟ್ಟಡ ನಿಯಮ ಉಲ್ಲಂಘನೆ ಮತ್ತು ಹತ್ತಿರದ ಪ್ರದೇಶಗಳ ನಿವಾಸಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ವಿಫಲವಾಗಿರುವ ಆರೋಪಗಳ ವಿರುದ್ಧ ಗ್ರಾಮಸ್ಥರು ಸಾಮೂಹಿಕ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.
ಕಬ್ಬಿಣದ ರಾಡ್ ಎದೆಯೊಳಗೆ ಹೊಕ್ಕು ತೀರ ಗಂಭೀರ ಸ್ಥಿತಿಯಲ್ಲಿದ್ದ ಕಾಸರಗೋಡಿನ 11 ವರ್ಷದ ಬಾಲಕಿಯನ್ನು ರಕ್ಷಿಸುವಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ವೈದ್ಯರ ತಂಡ ಯಶಸ್ವಿಯಾಗಿದೆ.
ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬಳಿಕ ಯುವಕನೊಬ್ಬನ ಮೇಲೆ ತಲವಾರು ಹಾಗೂ ಕಬ್ಬಿಣದ ಚಯರ್ನಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಉಡುಪಿಯಲ್ಲಿ ನಡೆದಿದೆ.
ಯೂತ್ ಫ್ರೆಂಡ್ಸ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ (ರಿ.) ಪಿತ್ರೋಡಿ ಇವರ ಆಶ್ರಯದಲ್ಲಿ ಉದ್ಯಾವರದ ಬೋಳಾರಗುಡ್ಡೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶನಿವಾರ ಆಯೋಜಿಸಿದ “ಶ್ರೀರಾಮ್ ಟ್ರೋಫಿ- 2026” ಅಂತರ್ ರಾಜ್ಯಮಟ್ಟದ ಆಹ್ವಾನಿತ ಮಹಿಳಾ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀದುರ್ಗಾ ಫ್ರೆಂಡ್ಸ್ ಕಾರ್ಕಳ ತಂಡವು ಪ್ರಥಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಆರ್ ಎಸ್ ಎಸ್ 100 ವರ್ಷ ಪೂರೈಸಿದ ಹಿನ್ನಲೆಯಲ್ಲಿ ನಗರದ ಎಲ್ಲ ವಾರ್ಡ್ ಗಳಲ್ಲಿ ಹಿಂದೂ ಸಂಗಮ ನಡೆಯುತ್ತಿದ್ದು , ಹಿಂದೂ ಸಂಗಮ ಆಯೋಜನಾ ಸಮಿತಿ ಮಂಗಳಾದೇವಿ ವಲಯ ಪಾಂಡೇಶ್ವರ ಕಟ್ಟೆಯ ಬಳಿ SCS ಗ್ರೌಂಡ್ ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಜಾನುವಾರುಗಳು ರೋಗ ರುಜಿನಗಳಿಗೆ ಒಳಗಾಗಿ ಸಾವನ್ನಪ್ಪಿದರೆ ಪರಿಹಾರ ನೀಡುವ ರಾಜ್ಯ ಸರಕಾರದ ಅನುಗ್ರಹ ಯೋಜನೆಯಡಿ ಕರಾವಳಿಯ 282 ಹಸುಗಳಿಗೆ ಪರಿಹಾರ ಧನ ಇನ್ನೂ ಬಾಕಿ ಉಳಿದುಕೊಂಡಿದೆ.