Showing 20 of 20466 articles • Page 193 of 1024
ನಿಗೂಢ ವಸ್ತು ಸ್ಫೋಟಗೊಂಡು ಐದು ವಿದ್ಯಾರ್ಥಿಗಳು ಸೇರಿ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.
40 ಸಾವಿರ ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ನ (RCOM) ಮಾಜಿ ಅಧ್ಯಕ್ಷ ಪುನೀತ್ ಗಾರ್ಗ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾವು ಟಿ 20 ವಿಶ್ವಕಪ್ ಗೂ ಮುನ್ನ ಕೇರಳದ ತಿರುವನಂತಪುರಂನಲ್ಲಿರುವ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ ರಾಜ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಜಮೀನಿಗೆ ಬೈಕ್ ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಕಲಿ ಒಡವೆಗಳನ್ನ ಗಿರವಿ ಇಟ್ಟು ಖಾಸಗಿ ಬ್ಯಾಂಕ್ ಗೆ ವಂಚಿಸಿದ ಆರೋಪದ ಮೇಲೆ ಚಿನ್ನಾಭರಣ ಮೌಲ್ಯಮಾಪಕ ಸೇರಿದಂತೆ 7 ಮಂದಿ ವಿರುದ್ದ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಸರ್ಕಾರಿ ನಾಗಮ್ಮ ಶಾಲಾ ಆವರಣದಲ್ಲಿ ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು ಉಪ ವಿಭಾಗ, ಸಂಚಾರ ಪೊಲೀಸ್ ಠಾಣೆ ನಂಜನಗೂಡು ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾಕ್ಕೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಪ್ರತಿಷ್ಠಿತ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಅನಧಿಕೃತವಾಗಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಮುಂದಾಗಿರುವ ಖಾಸಗಿ ರೆಸಾರ್ಟ್ ಕಂಟ್ರಿ ಕ್ಲಬ್ನಿಂದ ನಿಯಮ ಉಲ್ಲಂಘನೆ ಮಾಡಲಾಗಿದ್ದು ರಾಜಾರೋಷವಾಗಿ ಕಾಮಗಾರಿ ನಡೆಸಲಾಗುತ್ತಿದೆ.
ತಾಲ್ಲೂಕಿನ ಹಳೇಪುರ ಗ್ರಾಮದಲ್ಲಿ ಸಾಲದ ಕಂತು ಪಾವತಿ ಮಾಡಿಲ್ಲ ಎಂದು ಖಾಸಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಗೆ ಬೀಗ ಜಡಿದಿರುವ ಘಟನೆ ನಡೆದಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯ ಹೆಸರಿನಲ್ಲಿ ಬದಲಾವಣೆ ಮಾಡುವುದರ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ನಿಧಾನವಾಗಿ ಅಳಿಸಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಆರೋಪಿಸಿದರು.
ಸುಮಾರು 3-4 ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅವಕಾಶ ಸಿಗುತ್ತಿಲ್ಲ ಹೊಸ ಪಡಿತರ ಚೀಟಿ ಪಡೆಯಲು ಅರ್ಹತೆ ಇರುವ ಬಡವರು ಅದನ್ನು ನಂಬಿಕೊಂಡು ಬದುಕುವವರು ಅವಕಾಶ ಇಲ್ಲದೆ ಪಡಿತರಕ್ಕೆ ಆಗಲಿ ವೈದ್ಯಕೀಯ ಚಿಕಿತ್ಸೆಗೆ ಶಿಕ್ಷಣಕ್ಕೆ ಹಾಗೂ ಮೂಲಭೂತ ಸೌಕರ್ಯ ಪಡೆಯಲು ತುಂಬಾ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.
ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮಾತನಾಡಿ ರೂಮ್ ಒಳಗೆ ಹೋದ ಯುವಕನೋರ್ವ ಕೆಲವೇ ಹೊತ್ತಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿದೆ.
ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಣರಾಜ್ಯೋತ್ಸವ ಆಚರಣೆ ವೇಳೆ ರಾಷ್ಟ್ರನಾಯಕರಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಅಗೌರವ ಸೂಚಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.
ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಣಿಸಿಕೊಂಡು ಲಕ್ಷಾಂತರ ಮೌಲ್ಯದ ಪದಾರ್ಥ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ ನಡೆದಿದೆ.
ನೇಚರ್ ಎವೇರ್ನೆಸ್ ಫೌಂಡೇಶನ್ ಟ್ರಸ್ಟ್, ಲಕ್ಷ್ಮೀನಗರ ಇದರ ಉದ್ಘಾಟನಾ ಸಮಾರಂಭವು ಫೆ.1ರಂದು ಉಡುಪಿ ಪುತ್ತೂರಿನ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ನ ಕೃಷ್ಣ ಆಚಾರ್ಯ ತಿಳಿಸಿದರು.
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಯೋಜನೆಯಡಿ ಬ್ರಾಹ್ಮಣ ಸಮುದಾಯದವರಿಗೆ ಸಿಗುವ ಧನ ಸಹಾಯ ಮತ್ತು ಇತರ ಸೌಲಭ್ಯಗಳ ಕುರಿತ ಮಾಹಿತಿ ಕಾರ್ಯಾಗಾರವನ್ನು ಫೆ.2ರಂದು ಸಂಜೆ 4ಗಂಟೆಗೆ ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀಕಾಂತ ಉಪಾಧ್ಯಾಯ ತಿಳಿಸಿದರು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಯಕ್ಷಗಾನ ತಂಡ ‘ಅಂಬಿಕಾ ಯಕ್ಷಕಲಾ ವೃಂದ’ದವರಿಂದ ಯಕ್ಷಗಾನ ವಾರ್ಷಿಕೋತ್ಸವ ಕಾರ್ಯಕ್ರಮ ಸೋಮವಾರ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಿತು.
ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್ನಲ್ಲಿ ನಡೆದಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ನಗರ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಚರಂಡಿ ಮತ್ತು ಒಳಚರಂಡಿ ಕಾಮಗಾರಿಗಾಗಿ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಧ್ವನಿ ಎತ್ತಿದರು.