Showing 20 of 20466 articles • Page 199 of 1024
ಜಾರ್ಖಂಡ್ನ ಸಾರಂಡಾ ಕಾಡಿನಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಐವರು ಮಹಿಳೆಯರು ಸೇರಿದಂತೆ 17 ಮಂದಿ ನಕ್ಸಲರು ಬಲಿಯಾಗಿದ್ದಾರೆ.
ಈ ಬಾರಿ ಜನವರಿ 26 ರಂದು ನಡೆಯಲಿರುವ 77 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ಮಾಂಸಾಹಾರಿ ಆಹಾರ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಕೊರಾಪುಟ್ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕಳೆದ ಕೆಲವು ದಿನಗಳಿಂದ ನಾನ್ ವೆಜ್ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೀಗ ಮತ್ತೆ ಚಿಕನ್ ಮಾಂಸದ ಬೆಲೆ ಏಕಾಏಕಿ ಗಗನಕ್ಕೇರಿದೆ.
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್ ಪಟ್ಟಣದ ಅಗ್ರಹಾರದ ಬಳಿ ನಡೆದಿದೆ.
ಇಲ್ಲಿನ ವಸತಿ ಕಟ್ಟಡ ಮೇಲೆ ಫೈರಿಂಗ್ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟ ಕಮಲ್ ಆರ್ ಖಾನ್ ಅವರನ್ನು ಅರೆಸ್ಟ್ ಮಾಡಿದ್ದಾರೆ.
ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್ಗಳಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಗ್ರಾಹಕರ ದೈನಂದಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಪ್ಯಾಕ್ಗಳನ್ನು ಪರಿಚಯಿಸಿದೆ.
ಮನ್ಕುತೋಟಗುತ್ತು ಹಾಗೂ ನಾಡಾಜೆಗುತ್ತು ಇವರ ಸ್ಮರಣಾರ್ಥ ನಗರದ ಜಪ್ಪಿನಮೊಗರುವಿನಲ್ಲಿ16ನೇ ವರ್ಷದ ಹೊನಲು ಬೆಳಕಿನ ಜಯ- ವಿಜಯ ಜೋಡುಕೆರೆ ಕಂಬಳವು ಫೆ.14 ಮತ್ತು 15ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷರಾದ ಡಿ.ವೇದವ್ಯಾಸ್ ಕಾಮತ್ ಹೇಳಿದರು.
ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ (ಕೆಪಿಟಿ), ಎಐಸಿಟಿಇಯಿಂದ ಸ್ವಾಯತ್ತ ಸ್ಥಾನಮಾನವನ್ನು ಪಡೆದುಕೊಂಡಿದ್ದು , 78 ವರ್ಷಗಳ ಅಸ್ತಿತ್ವದ ನಂತರ ಈ ಸ್ಥಾನಮಾನವನ್ನು ಪಡೆದ ದೇಶದ ಮೊದಲ ಸರ್ಕಾರಿ ಪಾಲಿಟೆಕ್ನಿಕ್ ಆಗಿದೆ. ದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಈ ಸ್ಥಾನಮಾನವನ್ನು ನೀಡಿದೆ.
ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.
ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಒಡೆತನದ ‘ಜಿ ಸ್ಕ್ವೇರ್’ ಬಡಾವಣೆಯ ಮಾಡೆಲ್ ಹೌಸ್ ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರೂ ಸೇರಿದಂತೆ ಒಟ್ಟು 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಜ.26ರ ಗಣರಾಜ್ಯೋತ್ಸವದಂದು ಭಾರತೀಯ ಸೇನೆಗೆ ಸಂಬಂಧಿಸಿದ ವಿವಿಧ ಪದಕಗಳ ಪ್ರದರ್ಶನ ಬೆಳಗ್ಗೆ 9ಕ್ಕೆ ಉದ್ಘಾಟನೆಗೊಳ್ಳಲಿದೆ. ಭಾರತೀಯ ಸೇನೆಯಲ್ಲಿ ಐದು ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತರಾದ ಡಾ.ಕೆ.ಜಿ.ಶೆಣೈ ಅವರು ಈ ಪದಕಗಳನ್ನು ಸಂಗ್ರಹಿಸಿದ್ದಾರೆ.
ಯೆನೆಪೋಯಾ ನರ್ಸಿಂಗ್ ಕಾಲೇಜಿನ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗವು ವೈದ್ಯಕೀಯ–ಶಸ್ತ್ರಚಿಕಿತ್ಸಾ ನರ್ಸಿಂಗ್ ವಿಭಾಗದ ಸಹಯೋಗದಲ್ಲಿ “ಬದಲಾಗುತ್ತಿರುವ ಜಗತ್ತಿಗೆ ಹೊಂದುವಂತೆ ನ್ಯೂರೋಸೈಕಿಯಾಟ್ರಿಯನ್ನು ಮರುಪರಿಭಾಷಣೆ: ನವೀನತೆ, ಏಕೀಕರಣ ಮತ್ತು ಸಮಗ್ರ ದೃಷ್ಟಿಕೋನ” ವಿಷಯದ ಮೇಲೆ 2026 ಜನವರಿ 23ರಂದು ಯೆನೆಪೋಯಾ (ಡೀಮ್ಡ್ ಟು ಬಿ) ವಿಶ್ವವಿದ್ಯಾಲಯದ EMD ಹಾಲ್ನಲ್ಲಿ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿತು.
ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು, ಮಗು ಸಹಿತ 9 ಮಂದಿ ಗಾಯಗೊಂಡಿದ್ದಾರೆ.
ನಿಟ್ಟೂರಿನಲ್ಲಿರುವ ಕಿದಿಯೂರು ಲಾರ್ಡ್ಸ್ ಇಂಟರ್ನ್ಯಾಷನಲ್ ಶಾಲೆಗೆ ಆಗಮಿಸಿದ ಪುತ್ತಿಗೆ ಶ್ರೀಪಾದರನ್ನು ಭವ್ಯವಾಗಿ ಸ್ವಾಗತಿಸಲಾಯಿತು.
ಪಾಕಿಸ್ತಾನದಲ್ಲಿ ವಿವಾಹ ಸಮಾರಂಭದ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸರ್ಕಾರಿ ಶಾಲೆ ಅಂದ್ರೆ ಮೂಗುಮುರಿಯುವ ಜನರೇ ಹೆಚ್ಚು. ಆದ್ರೆ ಈ ಆರೋಪವನ್ನ ಸುಳ್ಳು ಮಾಡುವ ಸರ್ಕಾರಿ ಶಾಲೆಯೊಂದು ನಂಜನಗೂಡಿನ ಕಲ್ಲಹಳ್ಳಿ ಬಳಿ ತಲೆ ಎತ್ತಿ ನಿಂತಿದೆ. ಶಾಲೆಯ ಕಟ್ಟಡ ಹೊರನೋಟದಲ್ಲೇ ಆಕರ್ಷಿಸುವುದರಲ್ಲಿ ಯಾವುದೇ ಸಂದೇಹವಿಲ್ಲ.
ಸಿಸಿ ಟಿವಿ ದೃಶ್ಯಗಳು ನೀಡಿದ ಸುಳಿವಿನ ಆಧಾರದ ಮೇಲೆ ನಂಜನಗೂಡು ಟೌನ್ ಪೊಲೀಸರು ಇಬ್ಬರು ಜಾನುವಾರುಗಳ ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ಕೆಸರೆ ನಿವಾಸಿಗಳಾದ ಸುಲೇಮಾನ್ ಹಾಗೂ ಸಿದ್ದಿಖ್ ಪಾಷಾ ಬಂಧಿತರು. ಕೃತ್ಯದಲ್ಲಿ ಭಾಗಿಯಾದ ಉಳಿದ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.
ರಾಜ್ಯಪಾಲರ ವಿರುದ್ಧ ಮಾಜಿ ಶಾಸಕ ಎಂ ಕೆ ಸೋಮಶೇಖರ್ ನೇತೃತ್ವದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಖಜಾಂಚಿ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಮಾಜಿ ಅಧ್ಯಕ್ಷರು ಹಾಗೂ ಮಾಜಿ ಕ್ರಿಕೆಟ್ ಆಟಗಾರರಾದ ಎ. ರಘುರಾಮ್ ಭಟ್ ಅವರು ಮಾಣಿ ಮಠದಲ್ಲಿ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.