Showing 20 of 20466 articles • Page 213 of 1024
ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಣಿಪಾಲದ ಲಕ್ಷ್ಮೀನಗರ ಸುಧಾ ಫರ್ನಿಚರ್ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಕರಾವಳಿ ಭಾಗದಲ್ಲಿ ಆನೆಗಳ ದಾಳಿ ಸಮಸ್ಯೆ ಇದ್ದು. ಇದೀಗ ಆನೆಗಳ ದಾಳಿಯನ್ನು ತಡೆಯುವುದಕ್ಕಾಗಿ ಆನೆ ಕಾರ್ಯಪಡೆ ಮಾಡಿದ್ದೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಬಹುನಿರೀಕ್ಷಿತ ಅಲೋಶಿಯಸ್ ಗೇಮ್ಸ್ 2026 ಅನ್ನು ಜನವರಿ 9 ರಂದು ಮಧ್ಯಾಹ್ನ 1:00 ಗಂಟೆಗೆ ಅಧಿಕೃತವಾಗಿ ಉದ್ಘಾಟಿಸಲಾಯಿತು,
ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಪುರಪ್ರವೇಶ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು.
ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಸಪ್ತೋತ್ಸವವು ಆರಂಭಗೊಂಡಿತು.
ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಜ್ಞಾನ ಕಾರ್ಯದ ಅಂಗವಾಗಿ ಸುಧಾ ಗೀತಾದಿ ಪಾಠ ಪಂಚಕ ಹಾಗೂ ಮಂಗಲ ಮಹೋತ್ಸವ, ಗುರುವಂದನೆ ಕಾರ್ಯಕ್ರಮ ರಾಜಾಂಗಣದಲ್ಲಿ ಶುಕ್ರವಾರ ನಡೆಯಿತು.
ಕರಾವಳಿ ಭಾಗದಲ್ಲಿ ಕೇರಳ ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬೇಕು.
ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದಿದೆ.
ಪ್ರೀತಿಸಿ ಮದುವೆ ಆಗುವಂತೆ ಯುವಕ ನೀಡಿದ ಕಿರುಕುಳಕ್ಕೆ ಅಪ್ರಾಪ್ತೆ ಆತ್ಮಹತ್ಯೆಗೆ ಶರಣಾದ ಘಟನೆಗೆ ಟ್ವಿಸ್ಟ್ ಸಿಕ್ಕಿದೆ. ಇಬ್ಬರ ನಡುವೆ ಲವ್ವಿ ಡವ್ವಿ ಇರುವ ವಿಚಾರ ಬೆಳಕಿಗೆ ಬಂದಿದೆ.
ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ತನ್ನ ಪ್ರಸಿದ್ಧ ನಂದಿನಿ ಬ್ರ್ಯಾಂಡ್ ಅಡಿಯಲ್ಲಿ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡಲು ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಜೊತೆ ಅಧಿಕೃತ ಪ್ರಾಯೋಜಕತ್ವದ ಒಪ್ಪಂದ ಮಾಡಲು ಮುಂದಾಗಿದೆ.
ಯುಎಇಯ ತುಂಬೆ ಗ್ರೂಪ್ನ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದಿನ್, ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಕೆ. ಜಯಪ್ರಕಾಶ್ ಹೆಗ್ಡೆ, ಖ್ಯಾತ ಬಹುಭಾಷಾ ಚಲನಚಿತ್ರ ನಟಿ ವಿನಯ ಪ್ರಸಾದ್ ಸೇರಿದಂತೆ ಒಟ್ಟು ಐದು ಮಂದಿ ಗಣ್ಯ ಸಾಧಕರನ್ನು 2026ನೇ ಸಾಲಿನ ಹೊಸ ವರ್ಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡು ತಾಲ್ಲೂಕಿನಲ್ಲಿ ಸರಣಿ ಅಪರಾಧ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂಜನಗೂಡಿನ ತಾಲ್ಲೂಕು ಆಡಳಿತ ಭವನದಲ್ಲಿ ಶಾಸಕ ದರ್ಶನ್ ಧ್ರುವ ನಾರಾಯಣ್ ಹಾಗೂ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಇತ್ತೀಚೆಗೆ ನಡೆದ ಸರಣಿ ದರೋಡೆ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿವೆ. ನಂಜನಗೂಡು ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ […]
ಮೈಸೂರು : ಮುಸುಕುಧಾರಿಗಳಿಂದ ಹಸು ಕಳ್ಳತನವಾಗಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ಕಾರಿನಲ್ಲಿ ಬಂದು ಹಸುವನ್ನ ಕಾರಿಗೆ ಹತ್ತಿಸಿಕೊಂಡು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಮುಸುಕುಧಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಒಕ್ಕಲಗೇರಿ ನಿವಾಸಿ ಶಿವಕುಮಾರ್ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ. 27 ಸಾವಿರ ಮೌಲ್ಯದ ಒಟ್ಟು ಐದು ಹಸುಗಳು ಕಳ್ಳತನವಾಗಿದೆ. ದೇವಸ್ಥಾನಕ್ಕೆ ಬಿಟ್ಟಿದ ಗೂಳಿ ಸೇರಿ 5 ಹಸುಗಳ ಕಳ್ಳತನವಾಗಿದೆ. ನಂಜನಗೂಡು ಜನರು ಬೆಚ್ಚಿ ಬಿದ್ದಿದ್ದಾರೆ.
ನಂಜನಗೂಡು ತಾಲೂಕಿನ ಬಳ್ಳೂರುಹುಂಡಿ ಗ್ರಾಮದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು, ಇಂದು ಬೆಳಗ್ಗೆ
ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಯುವಕರು ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೋಗಿಗಳಿಂದ ಹಣ ಪಡೆದು ಚಿಕಿತ್ಸೆ ನೀಡಿದ ಆರೋಪದ ಹಿನ್ನಲೆ ಹುಣಸೂರು ತಾಲೂಕು ಹನಗೂಡು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಹೇಮಂತ್ ಕುಮಾರ್ ಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.
ಕಾಂತಾರ ಚಾಪ್ಟರ್ ಒನ್ ಚಿತ್ರ ಆಸ್ಕರ್ ಅಂಗಳಕ್ಕೆ ಕಾಲಿಟ್ಟಿದೆ. ಅತ್ಯುತ್ತಮ ಚಿತ್ರ ವಿಭಾಗದ ಸ್ಪರ್ಧಾ ಕಣಕ್ಕೂ ಪ್ರವೇಶ ಪಡೆದಿದೆ.
ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದ ಘಟನೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ.
ಸ್ವಾಮಿ ವಿವೇಕಾನಂದರ 163ನೇ ಜನ್ಮ ಜಯಂತಿಯ ಅಂಗವಾಗಿ ನಡೆಯುವ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವು ಸೋಮವಾರ, 12 ಜನವರಿ 2026 ರಂದು “Ignite the Mind, Illuminate the Nation” ಎಂಬ ಆಶಯದೊಂದಿಗೆ ನಡೆಯಲಿದೆ.